ಹಿರಿಯ ನಾಗರೀಕರ ಸಂಘಕ್ಕೆ ಸದಸ್ಯತ್ವ ಹೆಚ್ಚಲಿ

KannadaprabhaNewsNetwork |  
Published : Sep 29, 2025, 01:02 AM IST
ಹೊನ್ನಾಳಿ ಫೋಟೋ 23ಎಚ್.ಎಲ್.ಐ1. ಪಟ್ಟಣದ ಸರ್ಕಾರಿ ಹಳೆ ಆಸ್ಪತ್ರೆ ಕಟ್ಟಡದಲ್ಲಿನ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಹಿರಿಯ ನಾಗರಿಕರ ಸಹಕಾರ ಸಂಘ ನಿಯಮಿತದ 10 ನೇ ವರ್ಷದ ವಾರ್ಷಿಕ ಸಾಮಾನ್ಯ ಮಹಾಸಭೆಯ ಅಧ್ಯಕ್ಷತೆ ವಹಿಸಿ ಸಂಘದ ಅಧ್ಯಕ್ಷ ಎ.ಜಿ. ಹನುಮಂತಪ್ಪ ಮಾತನಾಡಿದರು. | Kannada Prabha

ಸಾರಾಂಶ

ಹೆಚ್ಚು ಹೆಚ್ಚು ಸದಸ್ಯರನ್ನು ನೋಂದಾಯಿಸುವ ಮೂಲಕ ಹಿರಿಯ ನಾಗರಿಕರ ಸಹಕಾರ ಸಂಘವನ್ನು ಆರ್ಥಿಕವಾಗಿ ಸಬಲಗೊಳಿಸಬೇಕಾಗಿದೆ. ಇದಕ್ಕಾಗಿ ಎಲ್ಲ ನಿರ್ದೇಶಕರು ಕೈ ಜೋಡಿಸಬೇಕು ಎಂದು ಸಂಘದ ಅಧ್ಯಕ್ಷ ಎ.ಜಿ. ಹನುಮಂತಪ್ಪ ಹೇಳಿದ್ದಾರೆ.

- ಹೊನ್ನಾಳಿಯಲ್ಲಿ ಸಂಘದ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ

- - -

ಕನ್ನಡಪ್ರಭ ವಾರ್ತೆ ಹೊನ್ನಾಳಿ

ಹೆಚ್ಚು ಹೆಚ್ಚು ಸದಸ್ಯರನ್ನು ನೋಂದಾಯಿಸುವ ಮೂಲಕ ಹಿರಿಯ ನಾಗರಿಕರ ಸಹಕಾರ ಸಂಘವನ್ನು ಆರ್ಥಿಕವಾಗಿ ಸಬಲಗೊಳಿಸಬೇಕಾಗಿದೆ. ಇದಕ್ಕಾಗಿ ಎಲ್ಲ ನಿರ್ದೇಶಕರು ಕೈ ಜೋಡಿಸಬೇಕು ಎಂದು ಸಂಘದ ಅಧ್ಯಕ್ಷ ಎ.ಜಿ. ಹನುಮಂತಪ್ಪ ಹೇಳಿದರು.

ಪಟ್ಟಣದ ಸರ್ಕಾರಿ ಹಳೇ ಆಸ್ಪತ್ರೆ ಕಟ್ಟಡದಲ್ಲಿನ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಹಿರಿಯ ನಾಗರಿಕರ ಸಹಕಾರ ಸಂಘ ನಿಯಮಿತದ 10ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹೊನ್ನಾಳಿ ತಾಲೂಕಿನ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಂಘದ ಸದಸ್ಯರಾಗಬೇಕು ಎಂದು ಮನವಿ ಮಾಡಿದರು.

ಸಭೆ ಉದ್ಘಾಟಿಸಿದ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಬೆನಕನಹಳ್ಳಿ ವೀರಣ್ಣ ಮಾತನಾಡಿ, ಪ್ರಸ್ತುತ ಸಂಘದಲ್ಲಿ ಸುಮಾರು 260 ಸದಸ್ಯರಿದ್ದಾರೆ. ಈ ಸಂಖ್ಯೆಯನ್ನು ಎಲ್ಲ ಸದಸ್ಯರು ಸೇರಿ ತಾಲೂಕಿನಾದ್ಯಂತ ಪ್ರವಾಸ ಮಾಡಿ ಅಧಿಕಗೊಳಿಸಬೇಕಿದೆ. ಜೊತೆಗೆ ಹಿರಿಯ ನಾಗರಿಕರು ಸೇರಿದಂತೆ ಎಲ್ಲರೂ ಈ ಸಂಘದಲ್ಲಿ ಠೇವಣಿಗಳನ್ನು ಇಟ್ಟರೆ ಸಂಘಕ್ಕೆ ಸ್ವಲ್ಪವಾದರೂ ಆರ್ಥಿಕ ಬಲ ಬರುತ್ತದೆ. ಈ ಬಗ್ಗೆ ಸಂಘದ ಎಲ್ಲ ಹಿರಿಯ ನಾಗರಿಕರು ಚಿಂತನೆ ನಡೆಸಬೇಕಾಗಿದೆ ಎಂದು ಹೇಳಿದರು.

ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಚಂದ್ರಕುಮಾರ್ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಆಹಾರ, ವಾಯು, ಶಬ್ದಮಾಲಿನ್ಯಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಜನಜಾಗೃತಿ ಆಗತ್ಯವಾಗಿದೆ. ಸರ್ಕಾರಗಳು ಹಿರಿಯ ನಾಗರಿಕರಿಗೆ ಹೆಚ್ಚಿನ ಸೌಲಭ್ಯಗಳನ್ನು ನೀಡುವ ಬಗ್ಗೆ ಕೂಡ ಚಿಂತನೆ ನಡೆಸಬೇಕು ಎಂದು ಹೇಳಿದರು.

ನಿರ್ದೇಶಕ ಪಟೇಲ್ ಬಸವರಾಜ ಗೌಡ ಮಾತನಾಡಿ, ಸಂಘದ ಸದಸ್ಯರೆಲ್ಲರೂ ಬೆಂಗಳೂರಿಗೆ ಹೋಗಿ ಸಹಕಾರ ಸಚಿವರನ್ನು ಕಂಡು ಸಂಘದ ಕಟ್ಟಡಕ್ಕೆ ಅನುದಾನ ಪಡೆಯುವ ಬಗ್ಗೆ ಮನವಿ ಪತ್ರ ಸಲ್ಲಿಸೋಣ. ಕಟ್ಟಡದ ನಿವೇಶನಕ್ಕೆ ಅಗತ್ಯ ಜಾಗವನ್ನು ತಾನು ನೀಡಲು ಸಿದ್ಧ ಎಂದು ಘೋಷಿಸಿದರು.

ಸಭೆಯಲ್ಲಿ ಸಂಘದ ಉಪಾಧ್ಯಕ್ಷೆ ಮೀನಾಕ್ಷಮ್ಮ, ನಿರ್ದೇಶಕರಾದ ವೀರಪ್ಪ, ಎಚ್.ಪಿ. ಗುರುಮೂರ್ತಿ, ಎಂ. ಬಾಬು, ಕೆ.ದೊಡ್ಡಹಾಲೇಶಪ್ಪ, ಡಿ.ಶೇಖರಪ್ಪ, ಜಿ.ಎಸ್.ಬಸವರಾಜು, ಟಿ.ಎಚ್. ಮಂಜಪ್ಪ, ಬಸವ ಭೋವಿ, ಗೌರಮ್ಮ ಸೇರಿದಂತೆ ಸಂಘದ ಕಾರ್ಯದರ್ಶಿ ಕೆ.ಎಸ್. ಸಿದ್ದಬಸಪ್ಪ, ಎಂ.ಚಂದ್ರಪ್ಪ ಇತರರು ಇದ್ದರು.

- - -

-23ಎಚ್.ಎಲ್.ಐ1.ಜೆಪಿಜಿ:

ಸಭೆಯಲ್ಲಿ ಸಂಘದ ಅಧ್ಯಕ್ಷ ಎ.ಜಿ. ಹನುಮಂತಪ್ಪ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ