ಕನ್ನಡಪ್ರಭ ವಾರ್ತೆ ಚಾಮರಾಜನಗರ
ಬೆಂಗಳೂರಿನಲ್ಲಿ ಕರ್ನಾಟಕ ಮಾದರ ಮಹಾಸಭಾದ ಕಚೇರಿಯಲ್ಲಿ ಚಾಮರಾಜನಗರ ಜಿಲ್ಲೆ ಮತ್ತು ಜಿಲ್ಲೆಯ ಎಲ್ಲ ತಾಲೂಕು ಸಮಿತಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶಪತ್ರ ವಿತರಿಸಿ ಮಾತನಾಡಿದರು.
ಚಾಮರಾಜನಗರ ಜಿಲ್ಲೆಯ ಚಾಮರಾಜನಗರ, ಗುಂಡ್ಲುಪೇಟೆ, ಯಳಂದೂರು, ಹನೂರು ಹಾಗೂ ಕೊಳ್ಳೇಗಾಲ ತಾಲೂಕು ಸಮಿತಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಿಸಲಾಗಿದೆ. ನಿಮಗೆಲ್ಲ ಜವಾಬ್ದಾರಿ ನೀಡಲಾಗಿದೆ. ನೂತನ ಪದಾಧಿಕಾರಿಗಳು ಜಿಲ್ಲೆಯಲ್ಲಿ ಸಂಘಟನೆ ಬಲಪಡಿಸಿ, ಉತ್ತಮವಾಗಿ ಕೆಲಸ ನಿರ್ವಹಿಸುವ ಮೂಲಕ ಸದಸ್ಯತ್ವ ಹೆಚ್ಚು ಮಾಡಿ ಸಂಘಟನೆ ಸದೃಢಗೊಳಿಸಿ ಸಮುದಾಯದ ಏಳಿಗೆಗಾಗಿ ಶ್ರಮಿಸಬೇಕು ಎಂದು ತಿಳಿಸಿದರು.ಕರ್ನಾಟಕ ಮಾದಾರ ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಪ್ಪ, ಜಿಲ್ಲಾಧ್ಯಕ್ಷ ಎಂ. ಶಿವಮೂರ್ತಿ ಹಾಜರಿದ್ದರು.