ಫಲಾನುಭವಿಗಳ ಸಂಖ್ಯೆ ಹೆಚ್ಚಿಸಿ, ಇಲ್ಲವೇ ಯೋಜನೆಯನ್ನೇ ನಿಲ್ಲಿಸಿ: ಗಂಟಿಹೊಳೆ ಆಕ್ರೋಶ

KannadaprabhaNewsNetwork |  
Published : Jan 25, 2025, 01:03 AM IST
24ಬೈಂದೂರು | Kannada Prabha

ಸಾರಾಂಶ

ಬೈಂದೂರು ತಾಲೂಕು ಕಚೇರಿಯಲ್ಲಿ ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮ, ಒಕ್ಕಲಿಗರ ಅಭಿವೃದ್ಧಿ ನಿಗಮ ಹಾಗೂ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಮದ ಅಧಿಕಾರಿಗಳ ಸಭೆ ನಡೆಯಿತು.

ಕನ್ನಡಪ್ರಭ ವಾರ್ತೆ ಬೈಂದೂರು

ತಾಲೂಕು ಕಚೇರಿಯಲ್ಲಿ ಗುರುವಾರ ನಡೆದ ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮ, ಒಕ್ಕಲಿಗರ ಅಭಿವೃದ್ಧಿ ನಿಗಮ ಹಾಗೂ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಮದ ಅಧಿಕಾರಿಗಳ ಸಭೆ ನಡೆಸಿ, ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಹಾಕಿರುವ ಫಲಾನುಭವಿಗಳ ಆಯ್ಕೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆ, ಫಲಾನುಭವಿಗಳಿಗೆ ಶೀಘ್ರವಾಗಿ ಸೌಲಭ್ಯ ದೊರಕಿಸಿಕೊಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ವಿವಿಧ ಸಮುದಾಯಗಳ ಅಭಿವೃದ್ಧಿಗಾಗಿ ಇರುವ ನಿಗಮಗಳಲ್ಲಿ ಅನುಷ್ಠಾನಗೊಳ್ಳುವ ಸಾಲ ಸೌಲಭ್ಯ ಯೋಜನೆಗಳು ಅರ್ಹತೆ ಇದ್ದ ಎಲ್ಲರಿಗೂ ತಲುಪಲು ವಿಫಲವಾಗಿದೆ. ಪ್ರತಿಯೊಂದು ಯೋಜನೆಯಡಿ ನೂರಾರು ಅರ್ಜಿಗಳು ಆನ್ ಲೈನ್‌ನಲ್ಲಿ ದಾಖಲಾಗಿದ್ದರೂ ಕೇವಲ 1 ಅಥವಾ 2 ಬೆರಳೆಣಿಕೆಯ ಗುರಿ ನಿಗದಿಪಡಿಸುತ್ತಿರುವ ಕಾರಣ ಹೆಚ್ಚಿನ ಸಂಖ್ಯೆಯ ಫಲನುಭವಿಗಳನ್ನು ಆಯ್ಕೆ ಮಾಡಲು ಸಮಿತಿಗೆ ಸಾಧ್ಯವಾಗುತ್ತಿಲ್ಲ. ನೂರಾರು ಅರ್ಜಿಗಳಿಗೆ ಒಂದಂಕಿಯ ಗುರಿ ನಿಗದಿ ಪಡಿಸುವುದು ಅವೈಜ್ಞಾನಿಕ. ಇಂತಹ ಪರಿಸ್ಥಿತಿ ಇರುವಾಗ ಆಯ್ಕೆ ಸಮಿತಿಯೇ ಅಪ್ರಸ್ತುತ ಎಂದು ಕಿಡಿಕಾರಿದರು.ಅರ್ಹರಿಗೆ ಯೋಜನೆಯ ಪ್ರಯೋಜನ ತಲುಪಿಸಿ, ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳು ಗಂಭೀರವಾಗಿ ಯೋಚಿಸಬೇಕು ಹಾಗೂ ಮೇಲಧಿಕಾರಿಗಳಿಗೆ ವರದಿ ಮಾಡಬೇಕು. ಇಂತಹ ಯೋಜನೆಗಳಲ್ಲಿ ಪ್ರತಿ ಯೋಜನೆಯಡಿಯಲ್ಲಿ ವರ್ಷಕ್ಕೆ ಕನಿಷ್ಠ 10 ಫಲಾನುಭವಿಗಳ ಆಯ್ಕೆಗೆ ಅವಕಾಶ ನೀಡಬೇಕು ಇಲ್ಲದಿದ್ದರೆ ಆ ಯೋಜನೆಯನ್ನೇ ಸರಕಾರ ರದ್ದು ಪಡಿಸುವುದು ಉತ್ತಮ ಎಂದು ಆಕ್ರೋಶ ವ್ಯಕ್ತಪಡಿಸಿದರು.ಸಭೆಯಲ್ಲಿ ಡಿ.ದೇವರಾಜು ಅರಸು ಅಭಿವೃದ್ಧಿ ನಿಗಮ, ಒಕ್ಕಲಿಗರ ನಿಗಮ ಹಾಗೂ ಅಲ್ಪ ಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರುಗಳು ಹಾಗೂ ಆಯ್ಕೆ ಸಮಿತಿಯ ಸದಸ್ಯರುಗಳು ಮತ್ತು ಇಲಾಖಾ ಸಿಬ್ಬಂದಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಲು ಸಾಲು ರಜೆ, ಪ್ರವಾಸಿ ತಾಣ ರಷ್‌
ಭೂಮಿ ಮಾರಿದ ಇನ್ಫಿ ಬಗ್ಗೆ ಕಾರ್ತಿ ತೀವ್ರ ಆಕ್ರೋಶ