ಸಿಎಂ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‍ಗೆ ಹೆಚ್ಚಿದ ಆಕ್ರೋಶ

KannadaprabhaNewsNetwork |  
Published : Aug 20, 2024, 12:54 AM IST
ಚಿತ್ರದುರ್ಗ ಎರಡನೇ ಪುಟದ ಲೀಡ್   | Kannada Prabha

ಸಾರಾಂಶ

ಕೋಟೆ ನಾಡು ಚಿತ್ರದುರ್ಗದಲ್ಲಿ ಸೋಮವಾರ ರಾಜ್ಯಪಾಲರ ವಿರುದ್ಧ ಆಕ್ರೋಶವು ಮಾರ್ದನಿಸಿತು. ಪ್ರತಿಭಟನಾಕಾರರು ಗೆಹ್ಲೋಟ್ ಹಠಾವೋ ಎಂಬ ಘೋಷಣೆ ಕೂಗುತ್ತಾ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅವಕಾಶ ನೀಡಿರುವುದನ್ನು ಉಗ್ರವಾಗಿ ಖಂಡಿಸಿದರು.

ಕನ್ನಡಪ್ರಭವಾರ್ತೆ ಚಿತ್ರದುರ್ಗಕೋಟೆ ನಾಡು ಚಿತ್ರದುರ್ಗದಲ್ಲಿ ಸೋಮವಾರ ರಾಜ್ಯಪಾಲರ ವಿರುದ್ಧ ಆಕ್ರೋಶವು ಮಾರ್ದನಿಸಿತು. ಪ್ರತಿಭಟನಾಕಾರರು ಗೆಹ್ಲೋಟ್ ಹಠಾವೋ ಎಂಬ ಘೋಷಣೆ ಕೂಗುತ್ತಾ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅವಕಾಶ ನೀಡಿರುವುದನ್ನು ಉಗ್ರವಾಗಿ ಖಂಡಿಸಿದರು.

ನಗರದ ನೀಲಕಂಠೇಶ್ವರಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಒನಕೆ ಓಬವ್ವ ವೃತ್ತದಲ್ಲಿ ಬಹಿರಂಗ ಸಭೆ ನಡೆಸಿ ನಂತರ ಅಪರ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಈ ವೇಳೆ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಉಸ್ತವಾರಿ ಸಚಿವ ಡಿ.ಸುಧಾಕರ್, ಪರಿಶುದ್ಧ ಹಸ್ತದ ಸಿದ್ದರಾಮಯ್ಯ ಅವರನ್ನು ಭ್ರಷ್ಟ ಬಿಜೆಪಿಗರು ಬೇಕಂತಲೇ ಮುಡಾ ಹಗರಣದಲ್ಲಿ ಸಿಲುಕಿಸಿ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಕುತಂತ್ರ ಮಾಡುತ್ತಿದ್ದಾರೆ ಎಂದು ದೂರಿದರು.

1998 ರಲ್ಲಿ ಮುಡಾದಲ್ಲಿ ನಿವೇಶನ ಪಡೆದಿದ್ದಾರೆನ್ನುವುದನ್ನು ಕೆದಕುತ್ತಿರುವ ಬಿಜೆಪಿ, ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಲುಗಾಡಿಸುವ ಕೃತ್ಯ ನಡೆಸುತ್ತಿದೆ. 2023 ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 136 ಸೀಟು ಗೆದ್ದಿರುವುದು ಬಿಜೆಪಿಗೆ ಮುಖಭಂಗವಾಗಿದೆ. ಆದ್ದರಿಂದ ಇಂತಹ ಕ್ಯಾತೆ ತೆಗೆಯುತ್ತಿದೆ. ಸತ್ಯ ಎಂದಿಗೂ ಸೋಲಲ್ಲ. ಇಡೀ ಸಚಿವ ಸಂಪುಟ ಹಾಗೂ ಶಾಸಕರು ಸಿದ್ದರಾಮಯ್ಯನವರ ಬೆನ್ನಿಗಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವುದು ಕಾನೂನು ಬಾಹಿರ ಎಂದರು. ಬಿಜೆಪಿ ರಾಜ್ಯಪಾಲರ ಮೂಲಕ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸುವ ಆಟ ನಡೆಯುವುದಿಲ್ಲ. ಎಂತಹ ಹೋರಾಟ, ತ್ಯಾಗಕ್ಕೂ ಸಿದ್ದರಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜಿನಾಮೆ ನೀಡುವ ಅಗತ್ಯವಿಲ್ಲವೆಂದರು.ಮಾಜಿ ಸಚಿವ ಎಚ್. ಆಂಜನೇಯ ಮಾತನಾಡಿ ಬಿಜೆಪಿ ಏಜೆಂಟರಂತೆ ವರ್ತಿಸುತ್ತಿರುವ ರಾಜ್ಯಪಾಲರು ಶೋಷಿತರ ನ್ಯಾಯದ ಪರವಾಗಿರುವ ಸಿದ್ದರಾಮಯ್ಯನವರಿಗೆ ಪ್ರಾಸಿಕ್ಯೂಷನ್‍ಗೆ ಅವಕಾಶ ನೀಡಿರುವುದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ. ಕಾನೂನಾತ್ಮಕ ಹೋರಾಟ ಮಾಡುತ್ತೇವೆ. ರಾಜ್ಯಪಾಲರು ಅನುಮತಿ ನೀಡಿರುವುದನ್ನು ಹಿಂದಕ್ಕೆ ಪಡೆಯಬೇಕು. ರಾಜ್ಯದಲ್ಲಿ ನಮ್ಮ ಪಕ್ಷ ಆಡಳಿತದಲ್ಲಿದೆ. ಯಾರು ತಾಳ್ಮೆ ಕಳೆದುಕೊಳ್ಳುವುದು ಬೇಡ. ಹಿಂಸಾತ್ಮಕ ಮಾರ್ಗದಲ್ಲಿ ನಡೆಯಬಾರದು ಎಂದು ಪ್ರತಿಭಟನಕಾರರಲ್ಲಿ ಮನವಿ ಮಾಡಿದರು.

ಕೇಂದ್ರ ಬಿಜೆಪಿ ಸರ್ಕಾರ ಇಡಿ, ಸಿಬಿಐ, ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಬಿಜೆಪಿ ಅಕ್ರಮವನ್ನು ಯಾರು ಪ್ರಶ್ನಿಸುತ್ತಾರೋ ಅವರ ಮೇಲೆ ದಾಳಿ ನಡೆಸುವ ಪರಿಪಾಠ ಬೆಳೆಸಿಕೊಂಡಿದೆ. ಇದಕ್ಕೆಲ್ಲಾ ಕಾಂಗ್ರೆಸ್ ಹೆದರುವುದಿಲ್ಲ ಎಂದು ಗುಡುಗಿದರು.40 ಪರ್ಸೆಂಟ್ ಭ್ರಷ್ಟಚಾರವೆಸಗಿ ಜನರಿಂದ ಛೀ, ಥೂ ಎನ್ನಿಸಿಕೊಂಡಿರುವ ಬಿಜೆಪಿ ವಾಮ ಮಾರ್ಗದಿಂದ ಅಧಿಕಾರ ಹಿಡಿಯುವುದರಲ್ಲಿ ನಿಸ್ಸೀಮರು. ಮುಡಾದಲ್ಲಿ ಯಾವುದೇ ಅಕ್ರಮ ಎಸಗಿಲ್ಲದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎದೆಗುಂದುವುದು ಬೇಡ. ಸಿಎಂ ಪತ್ನಿಗೆ ಅವರ ಸಹೋದರರು ಉಡುಗೊರೆಯಾಗಿ ನೀಡಿರುವ ಜಮೀನಿನಲ್ಲಿ ಪ್ರಾಧಿಕಾರದ ನಿಯಮದಂತೆ ನಿವೇಶನ ಪಡೆದುಕೊಂಡಿದ್ದಾರೆ. ಕಪ್ಪುಚುಕ್ಕೆ ಇಲ್ಲದೆ ದಕ್ಷ ಆಡಳಿತ ನಡೆಸುತ್ತಿರುವುದನ್ನು ಅರಗಿಸಿಕೊಳ್ಳಲು ಆಗದ ಬಿಜೆಪಿಯವರು ಇಲ್ಲ ಸಲ್ಲದ ಆಪಾದನೆ ಮಾಡುತ್ತಿರುವುದರಲ್ಲಿ ಅರ್ಥವಿಲ್ಲ ಎಂದರು.ಶಾಸಕರುಗಳಾದ ಬಿ.ಜಿ. ಗೋವಿಂದಪ್ಪ, ಎನ್.ವೈ. ಗೋಪಾಲಕೃಷ್ಣ, ಟಿ. ರಘುಮೂರ್ತಿ, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ್, ದ್ರಾಕ್ಷಾ ರಸ ಮಂಡಳಿ ಅಧ್ಯಕ್ಷ ಬಿ.ಯೋಗೇಶ್‍ಬಾಬು, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಆರ್.ಕೆ. ಸರ್ದಾರ್ , ಬಿ.ಟಿ. ಜಗದೀಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ತಾಜ್‍ಪೀರ್, ಕಾರ್ಯಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ. ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಲೋಕೇಶ್‍ನಾಯ್ಕ, ಎಸ್ಸಿ ಸೆಲ್ ಅಧ್ಯಕ್ಷ ಜಯಣ್ಣ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತ ನಂದಿನಿಗೌಡ, ಉಪಾಧ್ಯಕ್ಷೆ ಪವಿತ್ರ, ನಗರಸಭೆ ಮಾಜಿ ಅಧ್ಯಕ್ಷರಾದ .ಟಿ. ಕೃಷ್ಣಮೂರ್ತಿ, ಎಚ್.ಮಂಜಪ್ಪ, ಮಾಜಿ ಉಪಾಧ್ಯಕ್ಷ ಮಲ್ಲಿಕಾರ್ಜುನ್, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಮೋಕ್ಷರುದ್ರಸ್ವಾಮಿ, ಮುನಿರಾ ಎ. ಮಕಾಂದಾರ್, ಕಾರ್ಯದರ್ಶಿ ರುದ್ರಾಣಿ ಗಂಗಾಧರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ನಜ್ಮತಾಜ್, ಡಿ.ಟಿ. ವೆಂಕಟೇಶ್, ಎಸ್.ಎನ್. ರವಿಕುಮಾರ್, ಸೈಯದ್ ಖುದ್ದೂಸ್, ಅಲ್ಲಾಭಕ್ಷಿ, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಎನ್.ಡಿ. ಕುಮಾರ್ ಸೇರಿದಂತೆ ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡು ನಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

--------------ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ಸೋಮವಾರ ಚಿತ್ರದುರ್ಗದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

19 ಸಿಟಿಡಿ 4

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಾಳಿಪಟ ದಾರ ಕುತ್ತಿಗೆ ಸೀಳಿ ಮಗಳನ್ನು ಹಾಸ್ಟೆಲ್‌ನಿಂದ ಕರೆತರಲು ಹೊರಟಿದ್ದ ಅಪ್ಪ ದಾರುಣ ಸಾವು
ಪೌರಾಯುಕ್ತೆಗೆ ಬೆಂಕಿ: ಕಾಂಗ್ರೆಸ್ಸಿಗನಿಂದ ಧಮ್ಕಿ