ಶಾಸಕ ತುನ್ನೂರು ಹಾಗೂ ಪುತ್ರನ ಬಂಧನಕ್ಕೆ ಹೆಚ್ಚಿದ ಒತ್ತಡ

KannadaprabhaNewsNetwork |  
Published : Aug 14, 2024, 12:45 AM IST
ಪಿಎಸೈ ಪರಶುರಾಮ ಸಾವಿನ ತನಿಖೆಗೆ ಆಗ್ರಹಿಸಿ ಯಾದಗಿರಿಯಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು | Kannada Prabha

ಸಾರಾಂಶ

Increased pressure to arrest MLA Tunnur and son

- ಪಿಎಸೈ ಪರಶುರಾಮ್‌ ಶಂಕಾಸ್ಪದ ಸಾವು ಪ್ರಕರಣ

-ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನೇತೃತ್ವದಲ್ಲಿ ಪ್ರತಿಭಟನೆ

ಕನ್ನಡಪ್ರಭ ವಾರ್ತೆ ಯಾದಗಿರಿ

ನಗರ ಪೊಲೀಸ್ ಠಾಣೆಯ ಪಿಎಸ್‌ಐ ಪರಶುರಾಮ ಅನುಮಾನಸ್ಪದ ಸಾವನ್ನಪ್ಪಿದ್ದು, ಪ್ರಕರಣದ ಆರೋಪವಿರುವ ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರ ಹಾಗೂ ಅವರ ಪುತ್ರ ಪಂಪನಗೌಡರನ್ನು ಸರ್ಕಾರ ಕೂಡಲೇ ಬಂಧಿಸಿ, ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು. ನಗರದ ನೇತಾಜಿ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಘಟಕದಿಂದ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ದಿನದಿಂದ ಆ ಪಕ್ಷದ ಶಾಸಕರು ನಿಯಮ ಮೀರಿ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಸುವ ಮೂಲಕ ಭ್ರಷ್ಟಾಚಾರ ನಡೆಸಿ, ಕಿರುಕುಳ ನೀಡುತ್ತಿದಾರೆ, ಅಭಿವೃದ್ಧಿ ಕಡೆಗೆ ಗಮನ ನೀಡುತ್ತಿಲ್ಲ ಎಂದು ಟೀಕಿಸಿದರು.

ಗೃಹಸಚಿವ ಡಾ. ಜಿ. ಪರಮೇಶ್ವರ ಅವರು ಶಾಸಕ ಹಾಗೂ ಪುತ್ರನನ್ನು ಬಂಧಿಸಲು ಆದೇಶ ನೀಡದೇ, ಒಂದು ಕಡೆ ದಲಿತರನ್ನು ಈ ರಾಜ್ಯದಲ್ಲಿ ಅವಮಾನಿಸಿದ್ದಾರೆ, ಕೂಡಲೇ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಿ, ಆತನ ಪತ್ನಿಗೆ ಉನ್ನತ ಸರ್ಕಾರಿ ಹುದ್ದೆ ನೀಡಬೇಕೆಂದು ಒತ್ತಾಯಿಸಿದರು.

ಮಾಜಿ ಸಚಿವ ಎನ್. ಮಹೇಶ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಾಜಿ ಮುಖ್ಯಮಂತ್ರಿ ದಿ. ಧರ್ಮಸಿಂಗ್ ಹಾಗೂ ಈಗಿನ ಎಐಸಿಸಿ ಅಧ್ಯಕ್ಷ ಡಾ. ಖರ್ಗೆಯವರು ಸುದೀರ್ಘ ಕಾಲ ಅಧಿಕಾರ ನಡೆಸಿದ್ದಾರೆ, ಆದರೆ ದಲಿತರಿಗೆ ಮಾತ್ರ ನ್ಯಾಯ ಒದಗಿಸಿಲ್ಲ, ಪರಿಣಾಮ ಭ್ರಷ್ಟಾಚಾರ ಹೆಚ್ಚಾಗಿ, ಆಗಾಗ ಇಂತಹ ಅಧಿಕಾರಿಗಳ ಸಾವಿನ ಘಟನೆಗಳು ಸಂಭವಿಸುತ್ತವೆ.

ಉಸ್ತುವಾರಿ ಸಚಿವ ದರ್ಶನಾಪೂರ, ಸಾರ್ವಜನಿಕ ಜೀವನದಲ್ಲಿ ಹಣದ ಬಡ್ಡಿ ವ್ಯವಹಾರ ಮಾಡಿಕೊಂಡು ಬಂದಿರುವ ಶಾಸಕ ತುನ್ನೂರ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ, ತಮ್ಮ ವ್ಯವಹಾರದ ಕಡೆಗೆ ಗಮನ ನೀಡುವುದು ಸೂಕ್ತ ಎಂದರು.

ಮಾಜಿ ಸಚಿವ ರಾಜುಗೌಡ ಮಾತನಾಡಿ, ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ, ಈ ಪ್ರಕರಣದಲ್ಲಿ ತಮ್ಮದೇ ಇಲಾಖೆಯ ಅಧಿಕಾರಿಯ ಕುಟುಂಬಕ್ಕೆ ನ್ಯಾಯ ಒದಗಿಸುವಲ್ಲಿ ವಿಫಲರಾಗಿದ್ದಾರೆ, ಶಾಸಕರಿಗೆ ಲಂಚ ಕೊಟ್ಟು ಹುದ್ದೆಗಳನ್ನು ಪಡೆದಿರುವ ಅಧಿಕಾರಿಗಳು ಕಾನೂನು ನಿಯಮ ಗಾಳಿಗೆ ತೂರಿ ಜನರಿಂದ ಹಣ ಕಿತ್ತುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು, ಶಾಸಕ ಚೆನ್ನಾರಡ್ಡಿ ಹಾಗೂ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ನಂತರ ಸ್ಥಳಕ್ಕೆ ಆಗಮಿಸಿದ ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್ ಅವರಿಗೆ ಮುಖಂಡರು ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಕಾರ್ಯದರ್ಶಿ ಲಲಿತಾ ಅನಪೂರ, ಜಿಲ್ಲಾಧ್ಯಕ್ಷ ಅಮೀನರಡ್ಡಿ ಯಾಳಗಿ, ಡಾ.ಶರಣಭೂಪಾಲರಡ್ಡಿ ನಾಯ್ಕಲ್, ಬಿ.ಎಂ ಹಳ್ಳಿಕೋಟಿ, ರಾಜಾ ಹಣುಮಪ್ಪ ನಾಯಕ, ನಾಗರತ್ನ ಕುಪ್ಪಿ, ಖಂಡಪ್ಪ ದಾಸನ್, ಹೆಚ್.ಸಿ ಪಾಟೀಲ್, ರಮೇಶ ಬಾಬು ಮುದ್ನಾಳ, ಬಸವರಾಜಪ್ಪ ವಿಭೂತಿಹಳ್ಳಿ, ದೇವರಾಜ ನಾಯಕ, ಸುನೀತಾ ಚವ್ಹಾಣ, ಮಲ್ಲಮ್ಮ ಹೊಸಪೇಟ್, ಚಂದ್ರಕಲಾ ಮಡ್ಡಿ, ಭೀಮಾಶಂಕರ ಬಿಲ್ಲವ, ಪರಶುರಾಮ ಕುರಕುಂದಿ, ದೇವಿಂದ್ರನಾಥ ನಾದ, ಮಲ್ಲಪ್ಪ ಮೇಳಗಿ, ರಾಜಾ ವೇಣು ಮಾದವ ನಾಯಕ, ಗುರು ಕಾಮಾ, ನಿಂಗಪ್ಪ ಹತ್ತಿಮನಿ, ರಮೇಶ ದೊಡ್ಮನಿ, ವಿಲಾಸ್ ಪಾಟೀಲ್, ಸುರೇಶ ಅಂಬಿಗೇರ, ಶ್ರೀಕಾಂತ ಸುಂಗಲಕರ್, ವಿರುಪಾಕ್ಷಯ್ಯಸ್ವಾಮಿ ಹೆಡಗಿಮದ್ರಿ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

---

13ವೈಡಿಆರ್‌13 : ಪಿಎಸೈ ಪರಶುರಾಮ ಸಾವಿನ ತನಿಖೆಗೆ ಆಗ್ರಹಿಸಿ ಯಾದಗಿರಿಯಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ