ಜೀವನದಲ್ಲಿ ಛಲ, ಶಿಸ್ತು ಮತ್ತು ಸಂಯಮ ಮೈಗೂಡಿಸಿಕೊಳ್ಳಿ

KannadaprabhaNewsNetwork |  
Published : Mar 09, 2026, 01:45 AM IST
8ಕೆಎಂಎನ್ ಡಿ16 | Kannada Prabha

ಸಾರಾಂಶ

ನನಗೆ ಪೋಲಿಯೋದಿಂದಾಗಿ ಬಾಲ್ಯದಲ್ಲೇ ಕೈ-ಕಾಲುಗಳನ್ನು ಕಳೆದುಕೊಂಡರೂ, ಅಚಲ ಆತ್ಮವಿಶ್ವಾಸ ಹಾಗೂ ನಿಮ್ಮೆಲ್ಲರ ಸಹಕಾರದಿಂದ 2024ರ ಸಾಲಿನಲ್ಲಿ ದೇಶದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯನ್ನು ಭಾರತ ಸರ್ಕಾರ ನೀಡಿ ಗೌರವಿಸಿದೆ. ಇದಕ್ಕೆ ನನ್ನೋಳಗಿನ ಛಲ, ಶಿಸ್ತು ಮತ್ತು ಸಂಯಮ.

ಕನ್ನಡಪ್ರಭ ವಾರ್ತೆ ಮದ್ದೂರು

ಜೀವನದಲ್ಲಿ ಛಲ, ಶಿಸ್ತು ಮತ್ತು ಸಂಯಮವನ್ನು ಮೈಗೂಡಿಸಿಕೊಂಡ ವ್ಯಕ್ತಿ ಮೇರು ಸಾಧನೆ ಮಾಡಲು ಸಾಧ್ಯ ಎಂದು ಪದ್ಮಶ್ರೀ ಪುರಸ್ಕೃತ ಡಾ.ಕೆ.ಎಸ್.ರಾಜಣ್ಣ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ತಾಲೂಕಿನ ಕೆಸ್ತೂರು ಗ್ರಾಮದ ಶ್ರೀವಿವೇಕಾನಂದ ಶಾಲೆಯಲ್ಲಿ ನಡೆದ ವಿವೇಕ ಸಂಭ್ರಮ ಶಾಲಾ ವಾರ್ಷಿಕೋತ್ಸವದಲ್ಲಿ ಮಾತನಾಡಿ, ವಿದ್ಯೆ ಯಾರು ಕದಿಯಲಾಗದ ಆಸ್ತಿ. ಇದಕ್ಕೆ ಯಾವುದು ಸರಿಸಾಟಿಯಲ್ಲ ಎಂಬುವುದನ್ನು ತಿಳಿದು ವಿದ್ಯಾರ್ಥಿಗಳು ಕಠಿಣ ಪರಿಶ್ರಮಪಟ್ಟು ವ್ಯಾಸಂಗ ಮಾಡಿ ಉನ್ನತ ಸ್ಥಾನಗಳನ್ನು ಗಳಿಸಿ ರಾಷ್ಟ್ರ ಮತ್ತು ಅಂತಾರಾಷ್ಟ್ರಿಯ ಮಟ್ಟದಲ್ಲಿ ಸಾಧನೆ ಮಾಡಬೇಕೆಂದು ತಿಳಿಸಿದರು.

ಗ್ರಾಮಾಂತರ ಪ್ರದೇಶದಲ್ಲಿ ಸಿ.ನಾಗೇಗೌಡ ಶೋಭಾ ದಂಪತಿ ಶಿಕ್ಷಣ ಸಂಸ್ಥೆ ಆರಂಭಿಸಿ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡುವ ಜತೆಗೆ ಮಾನವೀಯ ಮೌಲ್ಯ ಕಲಿಸುತ್ತಿರುವುದು ಪ್ರಶಂಸನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನನಗೆ ಪೋಲಿಯೋದಿಂದಾಗಿ ಬಾಲ್ಯದಲ್ಲೇ ಕೈ-ಕಾಲುಗಳನ್ನು ಕಳೆದುಕೊಂಡರೂ, ಅಚಲ ಆತ್ಮವಿಶ್ವಾಸ ಹಾಗೂ ನಿಮ್ಮೆಲ್ಲರ ಸಹಕಾರದಿಂದ 2024ರ ಸಾಲಿನಲ್ಲಿ ದೇಶದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯನ್ನು ಭಾರತ ಸರ್ಕಾರ ನೀಡಿ ಗೌರವಿಸಿದೆ. ಇದಕ್ಕೆ ನನ್ನೋಳಗಿನ ಛಲ, ಶಿಸ್ತು ಮತ್ತು ಸಂಯಮವನ್ನು ಮೈಗೂಡಿಸಿಕೊಂಡಿರುವುದಕ್ಕೆ ಈ ಸಾಧನೆ ಮಾಡುವುದಕ್ಕೆ ಸಾಧ್ಯವಾಯಿತು ಎಂದರು.

ಪಾಲಕರು ಶಾಲೆಗೆ ಮಕ್ಕಳನ್ನು ಸೇರಿಸಿದರೇ ನಮ್ಮದೇನು ಜವಾಬ್ದಾರಿಯಿಲ್ಲ ಎಂದುಕೊಳ್ಳಬಾರದು. ಮಕ್ಕಳಿಗೆ ದೇಶದ ಮಹಾನ್ ಸಾಧಕರ ಬಗ್ಗೆ ಹೆಚ್ಚು ಪರಿಚಯಿಸಿದಾಗ ಮಾತ್ರ ಅವರು ಕೂಡ ಯಶಸ್ಸನ್ನು ಸಾಧಿಸಲು ಸಾಧ್ಯ. ಅಂಗವಿಕಲ ಮಕ್ಕಳು ಶಾಪವಲ್ಲ. ದೇವರೆಂದು ಭಾವಿಸಬೇಕು. ಅವರಲ್ಲಿಯೂ ಅಗಾಧ ಪ್ರತಿಭೆ ಅನಾವರಣ ಮಾಡಿದಾಗ ಮಾತ್ರ ದೇಶದ ಮಹಾನ್ ವ್ಯಕ್ತಿಗಳ ಸಾಲಿನಲ್ಲಿ ನಿಲ್ಲುತ್ತಾರೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಧನಂಜಯ ಮಾತನಾಡಿದರು. ಕ್ರೀಡೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಹಾಗೂ ಪಾಲಕರಿಗೆ ಗಣ್ಯರು ಬಹುಮಾನ ವಿತರಿಸಲಾಯಿತು. ಸಂಸ್ಥೆ ಅಧ್ಯಕ್ಷ ಸಿ.ನಾಗೇಗೌಡ, ಕಾರ್ಯದರ್ಶಿ ಎ.ಆರ್.ಶೋಭಾ, ಆರಕ್ಷಕ ಉಪ ನಿರೀಕ್ಷಕ ಶ್ರವಣ್‌ಎಸ್.ದಾಸರೆಡ್ಡಿ, ಇಸಿಒ ರಮೇಶ್, ಸಿಆರ್‌ಪಿ ಮಹದೇವು, ಎಸ್‌ಎಸ್‌ಐ ರಾಜು, ಯೋಗಣ್ಣ, ಶಾಲೆಯ ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಟಿ ವೈದ್ಯೆ ಸಾಧನೆ: ಕಬ್ಬಿನಾಲೆ ಹಿರಿ ಜೀವದ ಕಾರ್ಯ ರಾಜ್ಯಕ್ಕೇ ಮಾದರಿ
ಗಲ್ಫ್‌ ಕನ್ನಡಿಗರ ರಕ್ಷಣೆಗೆ ಸಂಸದ ಕೋಟ ಮನವಿ