ಕನ್ನಡಪ್ರಭ ವಾರ್ತೆ ಮಳವಳ್ಳಿ
ಸಚಿವರಾದ ನಂತರ ಇದೇ ಮೊದಲ ಬಾರಿಗೆ ತಾಲೂಕಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಅನಂತ್ರಾಂ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಂದ ಅದ್ಧೂರಿ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಕ್ಷೇತ್ರದ ಮತದಾರರ ಭರವಸೆಗೆ ಚ್ಯುತಿ ಬಾರದ ರೀತಿಯಲ್ಲಿ ಮಳವಳ್ಳಿ ಅಭಿವೃದ್ಧಿಗೆ ಜವಾಬ್ದಾರಿಯಿಂದ ದೂರ ದೃಷ್ಟಿ ಹಲವುಹೊಸ ಯೋಜನೆಗಳ ಮೂಲಕ ತಾಲೂಕನ್ನು ಅಭಿವೃದ್ಧಿ ಪಡಿಸಲಾಗುವುದು ಎಂದರು.
ಮಂಡ್ಯ ಜಿಲ್ಲೆಯ ರೈತರ ನೀರಿನ ಬವಣೆ ತಪ್ಪಿಸಲು ಕಾಂಗ್ರೆಸ್ ಸರ್ಕಾರ ಸಾವಿರಾರು ಕೋಟಿ ಅನುದಾನ ನೀಡಿ ನಾಲಾ ಆಧುನೀಕರಣ ಮಾಡಲಾಗಿದೆ. ತಾಲೂಕಿನ ಎಲ್ಲಾ ಸರ್ಕಾರಿ ಶಾಲೆಗಳಿಗೆ ಆಧುನಿಕ ಸ್ಪರ್ಶ ನೀಡಲಾಗಿದೆ. ಶಿಕ್ಷಣ, ಆರೋಗ್ಯ, ರಸ್ತೆ, ವಿದ್ಯುತ್ ಸೇರಿದಂತೆ ಹಲವಾರು ಮೂಲ ಸೌಲಭ್ಯವನ್ನು ಕಲ್ಪಿಸಿ ಸಮಗ್ರವಾಗಿ ಅಭಿವೃದ್ದಿ ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.ರಾಜಕೀಯ ವಿರೋಧಿಗಳ ಬಗ್ಗೆ ಟೀಕೆ ಮಾಡದೇ ಅಭಿವೃದ್ಧಿ ಮೂಲಕವೇ ಉತ್ತರ ನೀಡಲಾಗುವುದು. ನನ್ನ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಹಕ್ಕಿನ ಮೂಲಕ ಮಾಹಿತಿ ಪಡೆದುಕೊಳ್ಳಲಿ. ಸುಳ್ಳುಗಾರರಿಗೆ ಉತ್ತರ ಕೊಡುವ ಆಗತ್ಯವಿಲ್ಲ. ಅಭಿವೃದ್ಧಿ ಸುಳ್ಳು ಎಂದು ಸಾಬೀತು ಪಡಿಸಿದರೇ ರಾಜಕೀಯ ನಿವೃತ್ತಿಗೊಳ್ಳುವುದಾಗಿ ಸವಾಲು ಹಾಕಿದರು.
ವಿಧಾನಪ ಪರಿಷತ್ ಮಾಜಿ ಉಪಸಭಾಪತಿ ಮರಿತಿಬ್ಬೇಗೌಡ ಮಾತನಾಡಿ, ಕಳೆದ ಚುನಾವಣೆಯಲ್ಲಿ ಆರು ಮಂದಿ ಶಾಸಕರನ್ನು ಆಯ್ಕೆ ಮಾಡಲಾಗಿತ್ತು. ವರಿಷ್ಠರು ಮೀಸಲು ಕ್ಷೇತ್ರ ಮಳವಳ್ಳಿಗೆ ಸಚಿವ ಸ್ಥಾನ ಮತ್ತು ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡಿ ಸಾಮಾಜಿಕ ನ್ಯಾಯವನ್ನು ಕಲ್ಪಿಸಿದ್ದಾರೆ ಎಂದು ಪ್ರಸಂಸೆ ವ್ಯಕ್ತಪಡಿಸಿದರು.
ಮೆರವಣಿಗೆ ಮೂಲಕ ಪಟ್ಟಣದ ಪ್ರವಾಸಿ ಮಂದಿರಕ್ಕೆ ಆಗಮಿಸಿದ ವೇಳೆ ಮುಂಭಾಗವಿದ್ದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ನೂತನ ಸಚಿವರು ಮಾಲಾರ್ಪಣೆ ಮಾಡಿ ನಮಿಸಿದರು. ಈ ವೇಳೆ ಕಾಂಗ್ರೆಸ್ ಮುಖಂಡರು ಹಾಜರಿದ್ದರು.
ಮಳವಳಿ:
ಬೈಕ್ ಜಾಥಾದ ಮೂಲಕ ಅನಂತ್ರಾಂ ವೃತ್ತದ ಬಳಿ ಸೇರಿದ ಸಾವಿರಾರು ಕಾರ್ಯಕರ್ತರು ಸಂಭ್ರಮ ಮುಗಿಲು ಮುಟ್ಟಿತು. ಈ ವೇಳೆ ಸಚಿವರಿಗೆ ಕ್ರೇನ್ ಮೂಲಕ ಕೊಬ್ಬರಿ ಹಾರ ಹಾಕಿ ಸ್ವಾಗತಿಸಿದರು. ತಾಲೂಕಿನ ಗಡಿಭಾಗ 410 ಮೈಲಿಕಲ್ಲು, ಕಾಗೇಪುರ ಬಿಲ್ದಿಂಗ್ ಪಟ್ಟಣ ಸೇರಿದಂತೆ ಪ್ರತಿಯೊಂದು ಗ್ರಾಮದ ಗೇಟ್ನಲ್ಲಿ ಬೃಹತ್ ಹೂವಿನ ಹಾರ ಹಾಕಿ ಅಭಿನಂದಿಸಿದರು.