ಶಹಾಪುರ: ಸಾಲಬಾಧೆ ತಾಳಲಾರದೆ ಮನನೊಂದು ರೈತನೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹುರಸಗುಂಡಿಗಿ ಗ್ರಾಮದಲ್ಲಿ ಶನಿವಾರ ಬೆಳಗಿನ ಜಾವ ನಡೆದಿದೆ. ಮಕ್ಬುಲ್ ಸಾಬ್ (55) ಆತ್ಮಹತ್ಯೆ ಮಾಡಿಕೊಂಡ ರೈತ. ಮೃತನಿಗೆ ಎರಡು ಗಂಡು ಮತ್ತು ಎರಡು ಹೆಣ್ಣು ಮಕ್ಕಳಿದ್ದಾರೆ. ಇತನು ಶಹಾಪುರ ಶಾಖೆ ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕಿನಲ್ಲಿ 1 ಲಕ್ಷ ರು.ಗಳ ಬೆಳೆ ಸಾಲ ಹಾಗೂ ಕೈಗಡವಾಗಿ 12 ಲಕ್ಷ ರು.ಗಳ ಸಾಲ ಮಾಡಿದ್ದ ಎನ್ನಲಾಗಿದೆ.
ಈ ಬಗ್ಗೆ ಮೃತನ ಹೆಂಡತಿ ಮುಮ್ತಾಜ್ ಬೇಗಂ ನೀಡಿರುವ ದೂರಿನನ್ವಯ ಭೀಮರಾಯನಗುಡಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.