-ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ -ರಾಜ್ಯಾದ್ಯಂತ ಸೋಮವಾರ ಏಕಕಾಲದಲ್ಲಿ ಆಯಾ ಜಿಲ್ಲಾ ಕೇಂದ್ರಗಳಲ್ಲಿ ಮುಷ್ಕರ ಆರಂಭಕನ್ನಡಪ್ರಭ ವಾರ್ತೆ ರಾಮನಗರ
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ಪಿಡಿಒಗಳು, ದ್ವಿತೀಯ ದರ್ಜೆ ಸಹಾಯಕರು, ಡೇಟಾ ಎಂಟ್ರಿ ಅಪರೇಟರ್ಸ್ ಗಳು , ಕರವಸೂಲಿಗಾರರು, ನೀರುಘಂಟಿಗಳು, ಸ್ವಚ್ಛತಗಾರರು ತಮ್ಮ ಕೆಲಸ ಕಾರ್ಯ ಸ್ಥಗಿತಗೊಳಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಧರಣಿ ಕುಳಿತಿದ್ದು, ಗ್ರಾಮ ಪಂಚಾಯಿತಿ ಮಟ್ಟದ ಎಲ್ಲಾ ಅಧಿಕಾರಿಗಳು ಹಾಗೂ ನೌಕರರ ವಿವಿಧ ಬೇಡಿಕೆಗಳನ್ನು ಶೀಘ್ರದಲ್ಲಿಯೇ ಈಡೇರಿಸಬೇಕು ಎಂದು ಎಚ್ಚರಿಸಿದರು.
ಕಳೆದ ಮೂರು ದಿನಗಳ ಹಿಂದೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ರಾಜ್ಯ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಆದರೆ, ಬೇಡಿಕೆ ಈಡೇರಿಸುವ ಸಂಬಂಧ ಇಲಾಖೆ ಹಾಗೂ ಸರ್ಕಾರದಿಂದ ಸೂಕ್ತ ಸ್ಪಂದನೆ ವ್ಯಕ್ತವಾಗದ ಹಿನ್ನೆಲೆಯಲ್ಲಿ ಸೋಮವಾರ ರಾಜ್ಯಾದ್ಯಂತ ಏಕಕಾಲದಲ್ಲಿ ಆಯಾ ಜಿಲ್ಲೆಯ ಜಿಪಂ ಆವರಣದಲ್ಲಿ ಸಂಘಟನೆ ವತಿಯಿಂದ ಅನಿರ್ದಿಷ್ಟಾವಧಿ ಮುಷ್ಕರ ಪ್ರಾರಂಭಿಸಲಾಗಿದೆ.ಪಿಡಿಒಗಳ ಬೇಡಿಕೆ:
ಪಂಚಾಯಿತಿ ಇತರೆ ನೌಕರರ ಬೇಡಿಕೆಗಳು:
ಗ್ರಾಮ ಪಂಚಾಯಿತಿ ಪಂಚ ನೌಕರುಗಳಿಗೆ ನಿವೃತ್ತ ಉಪಧನವನ್ನು 60 ತಿಂಗಳ ವೇತನದ ಮೊತ್ತವನ್ನು ಉಪಧವನ್ನು ನೀಡಬೇಕು. ಕ್ಲರ್ಕ್ , ಡಿಇಒ ಬಿಲ್ ಕಲೆಕ್ಟರ್ ಗಳು ಹೆಚ್ಚುವರಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಇವುಗಳನ್ನು ನಿವಾರಣೆ ಮಾಡಬೇಕು ಎಂದು ಪ್ರತಿಭಟನಾ ನಿತರರು ಆಗ್ರಹಿಸಿದರು.
ವೃಂದದ ಜೇಷ್ಠತಾ ಪಟ್ಟಿಯನ್ನು ತುರ್ತಾಗಿ ಪ್ರಕಟಣೆ ಮಾಡಿ ಪಿಡಿಒ ವೃಂದಕ್ಕೆ ಮುಂಬಡ್ತಿ ನೀಡಬೇಕು. 7 ವರ್ಷದಿಂದ ಒಂದೇ ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರನ್ನು ಜಿಲ್ಲೆಯ ಬೇರೆ ತಾಲೂಕಿಗೆ ವರ್ಗಾಯಿಸುವ ಅಧಿಸೂಚನೆಯನ್ನ ಹಿಂಪಡೆಯಬೇಕು.
ಗ್ರೇಡ್-2 ಹುದ್ದೆಯಿಂದ ಗ್ರೇಡ್-1 ಕಾರ್ಯದರ್ಶಿಗಳ ಹುದ್ದೆಗೆ ಕಳೆದ ಹಲವು ವರ್ಷಗಳಿಂದ ಮುಂಬಡ್ತಿ ಇಲ್ಲ. ಜತೆಗೆ, ನೇರ ನೇಮಕಾತಿ ಕೋಟಾದಡಿಯಲ್ಲಿ ಒಂದು ಬಾರಿ ಏಕ ಕಾಲಕಾಲದಲ್ಲಿ ಬಡ್ತಿ ನೀಡಬೇಕು. ರಾಜ್ಯ ಮಟ್ಟದ ಜೇಷ್ಠತಾ ಪಟ್ಟಿಯನ್ನು ಕೈಬಿಟ್ಟು ಜಿಲ್ಲಾ ಮಟ್ಟ ಜೇಷ್ಠತಾ ಪಟ್ಟಿಂನ್ನು ಮಾಡಬೇಕು. ಗ್ರೇಡ್-1 ಕಾರ್ಯದರ್ಶಿಗೆ ಹುದ್ದೆಎ ಬಡ್ತಿ ಶೇ.33ರಷ್ಟಿದ್ದು ಅದನ್ನು ಶೇ.80ಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ಗ್ರೇಡ್-2 ಗ್ರಾಪಂಗಳಿಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆ ಸೃಜಿಸಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ಗ್ರೇಡ್ -1 ಗ್ರಾಪಂಗಳಿಗೆ ಪ್ರಥಮ ದರ್ಜೆ ಲೆಕ್ಕ ಸಹಾಯಕ ಹುದ್ದೆಯನ್ನು ಸೃಷ್ಟಿಸಿ ಮುಂಬಡ್ತಿ ನೀಡಬೇಕು. ಕಳೆದ 10 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ಒಂದೇ ಬಾರಿಗೆ ಶೇ.100ರಷ್ಟು ಬಡ್ತಿ ನೀಡಿ ಗ್ರೇಡ್- ಕಾರ್ಯದರ್ಶಿ ಹುದ್ದೆಗೆ ಪರಿಗಣಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.