ಪೌರ ವೃಂದದ ನೌಕರರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಂಗಳವಾರ ಗದಗ-ಬೆಟಗೇರಿ ನಗರಸಭೆಯ ಪೌರ ನೌಕರರು ಅನಿರ್ದಿಷ್ಟಾವಧಿ ಮುಷ್ಕರವನ್ನು ಪ್ರಾರಂಭಿಸಿದರು.
ಗದಗ:ಪೌರ ವೃಂದದ ನೌಕರರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಂಗಳವಾರ ಗದಗ-ಬೆಟಗೇರಿ ನಗರಸಭೆಯ ಪೌರ ನೌಕರರು ಅನಿರ್ದಿಷ್ಟಾವಧಿ ಮುಷ್ಕರವನ್ನು ಪ್ರಾರಂಭಿಸಿದರು.
ರಾಜ್ಯ ಸರ್ಕಾರ ಪೌರ ವೃಂದದ ನೌಕರರ ಪ್ರಮುಖ ಬೇಡಿಕೆಗಳಾದ ಪೌರ ನೌಕರರನ್ನು ಸರ್ಕಾರಿ ನೌಕರರಂದು ಘೋಷಿಸುವುದು ಹಾಗೂ ಕೆ.ಜಿ.ಆಯ್.ಡಿ ಜಿ.ಪಿ.ಎಫ್, ಜ್ಯೋತಿ ಸಂಜೀವಿನಿ, ಸೇರಿದಂತೆ ಸರ್ಕಾರಿ ನೌಕರರಿಗೆ ಸಿಗುವ ಸೌಲಭ್ಯವನ್ನು ಪೌರ ನೌಕರರಿಗೂ ಜಾರಿ ಮಾಡುವುದು ಹಾಗೂ ಸುಮಾರು 25-30 ವರ್ಷಗಳಿಂದ ಹೊರಗುತ್ತಿಗೆ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು, ಲೋಡರ್ಸ್, ಘನತಾಜ್ಯ ವಾಹನ ಚಾಲಕರು, ಕ್ಲೀನರ್ಸ್, ಸೂಪರವೈಸರ್, ನೀರು ಸರಬರಾಜು ಸಿಬ್ಬಂದಿಗಳು. ಕಂಪ್ಯೂಟರ ಆಪರೇಟರ್, ಜ್ಯೂನಿಯರ್ ಪ್ರೋಗ್ರಾಮರ್, ಇನ್ನಿತರೆ ಗುತ್ತಿಗೆ/ಹೊರಗುತ್ತಿಗೆ ಮೂಲಕ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ನೇರಪಾವತಿ ವೇತನ ಮಾಡುವುದು, ಕಾಯಂ ಮಾಡುವುದು ಸೇರಿದಂತೆ ಹೊಸದಾಗಿ ಸನ್ 2022-23ನೇ ಸಾಲಿನಲ್ಲಿ ಪೌರಕಾರ್ಮಿಕರ ವಿಷೇಶ ನೇವಕಾತಿಯಡಿ ಪೌರಕಾರ್ಮಿಕರು ನೇಮಕಾತಿ ಹೊಂದಿದ್ದು ಸದರಿ ನೌಕರರಿಗೆ ಮಾನ್ಯ ಘನ ಸರ್ಕಾರವು ನಗರ ಸ್ಥಳೀಯ ಸಂಸ್ಥೆ ಸ್ಥಳೀಯ ನಿಧಿಯಿಂದ ವೇತನ ಪಡೆಯಲು ಆದೇಶಿಸಿಲಾಗಿದ್ದನ್ನು ರದ್ದುಪಡಿಸಿ, ಎಸ್.ಎಫ್.ಸಿ ಅನುದಾನದಡಿ ವೇತನ ನೀಡುವುದು ಸೇರಿದಂತೆ ಪ್ರಮುಖ ಬೇಡಿಕೆಗಳಿಗಾಗಿ ಪ್ರತಿಭಟನೆ ನಡೆಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.