ಜಿಡಿಎಸ್ ನೌಕರರಿಂದ ಅನಿರ್ಧಿಷ್ಟಾವಧಿ ಮುಷ್ಕರ

KannadaprabhaNewsNetwork | Published : Dec 13, 2023 1:00 AM

ಸಾರಾಂಶ

ಚನ್ನಪಟ್ಟಣ: ಕಮಲೇಶ್‌ ಚಂದ್ರ ಸಮಿತಿ ಶಿಫಾರಸ್ಸು ಜಾರಿ ಹಾಗೂ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಒಕ್ಕೂಟ ಹಾಗೂ ಗ್ರಾಮೀಣ ಅಂಚೆ ಸೇವಕರ ರಾಷ್ಟ್ರೀಯ ಒಕ್ಕೂಟದ ಸಹಯೋಗದಲ್ಲಿ ಅಂಚೆ ಇಲಾಖೆಯ ಜಿಡಿಎಸ್ ನೌಕಕರು ಮಂಗಳವಾರದಿಂದ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.

ಚನ್ನಪಟ್ಟಣ: ಕಮಲೇಶ್‌ ಚಂದ್ರ ಸಮಿತಿ ಶಿಫಾರಸ್ಸು ಜಾರಿ ಹಾಗೂ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಒಕ್ಕೂಟ ಹಾಗೂ ಗ್ರಾಮೀಣ ಅಂಚೆ ಸೇವಕರ ರಾಷ್ಟ್ರೀಯ ಒಕ್ಕೂಟದ ಸಹಯೋಗದಲ್ಲಿ ಅಂಚೆ ಇಲಾಖೆಯ ಜಿಡಿಎಸ್ ನೌಕಕರು ಮಂಗಳವಾರದಿಂದ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.

ನಗರದ ಕೇಂದ್ರ ಅಂಚೆ ಇಲಾಖೆ ಕಚೇರಿ ಮುಂದೆ ಜಮಾಯಿಸಿದ ಜಿಡಿಎಸ್ ನೌಕರರು, ಜಿಡಿಎಸ್ ನೌಕಕರಿಗೂ ಅಂಚೆ ಇಲಾಖಾ ನೌಕರರಿಗೆ ನೀಡುವ ಸಲವತ್ತುಗಳಲ್ಲಿ ತಾರಾತಮ್ಯ ಮಾಡುತ್ತಿದೆ. ಗ್ರಾಮೀಣ ಭಾಗದಲ್ಲಿ ಕರ್ತವ್ಯ ನಿರ್ವಹಿಸುವ ಜಿಡಿಎಸ್ ನೌಕರರೇ ಅಂಚೆ ಇಲಾಖೆಗೆ ಬೆನ್ನೆಲುಬಾಗಿದ್ದರೂ ಅವರನ್ನು ಕಡೆಗಣಿಸಲಾಗುತ್ತಿದೆ. ಅಂಚೆ ಇಲಾಖೆಯಲ್ಲಿ ಶೇ.50ರಷ್ಟು ಜಿಡಿಎಸ್ ನೌಕರರೇ ಕಾರ್ಯನಿರ್ವಹಿಸುತ್ತಿದ್ದರೂ ಅವರ ಸೇವೆಗೆ ತಕ್ಕ ಸವಲತ್ತು ನೀಡದೇ ಅನ್ಯಾಯ ಮಾಡಲಾಗುತ್ತಿದೆ ಎಂದರು.

ಜಿಡಿಎಸ್ ನೌಕರರ ಬೇಡಿಕೆಗಳ ಕುರಿತು ಸಾಕಷ್ಟು ಬಾರಿ ಸರ್ಕಾರದ ಗಮನ ಸೆಳೆದರೂ ಪ್ರಯೋಜವಾಗಿಲ್ಲ. ಯಾರು ಎಷ್ಟೇ ಒತ್ತಡ ಹೇರಿದರೂ ಈ ಬಾರಿ ನಮ್ಮ ಬೇಡಿಕೆಗಳು ಈಡೇರುವವರೆಗೆ ಮುಷ್ಕರ ಹಿಂಪಡೆಯುವುದಿಲ್ಲ ಎಂದು ಘೋಷಿಸಿದರು.

ಕಮಲೇಶ್‌ಚಂದ್ರ ಶಿಫಾರಸ್ಸು ಜಾರಿ: ಜಿಡಿಎಸ್ ನೌಕರರ ಬೇಡಿಕೆಗಳ ಕುರಿತು ರಚಿಸಿದ್ದ ಕಮಲೇಶ್‌ಚಂದ್ರ ಸಮಿತಿ 2018ರಲ್ಲೇ ವರದಿ ಸಲ್ಲಿಸಿದ್ದರೂ ಸಮಿತಿ ಶಿಫಾರಸ್ಸುಗಳನ್ನು ಜಾರಿಗೆ ತರದೇ ಕಾಲಹರಣ ಮಾಡಲಾಗುತ್ತಿದೆ. 2018ರಲ್ಲಿ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮುಷ್ಕರ ನಡೆಸಿದ್ದಾಗ ಕೇಂದ್ರ ಸರ್ಕಾರದ ಸಚಿವರು ನಮ್ಮ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು. ಆದರೆ, ಇಂದಿಗೂ ಈ ಭರವಸೆ ಹಾಗೆ ಉಳಿದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗ್ರಾಮೀಣರಿಗೆ ಪಿಂಚಣಿ ಸೇರಿದಂತೆ ಇನ್ನಿತರ ಸೇವೆ ಒದಗಿಸುವ ನಮಗೇ ಪಿಂಚಿಣಿ ಸವಲತ್ತು ಇಲ್ಲವಾಗಿದೆ. ಕೇಂದ್ರ ಸರ್ಕಾರದ ಆರೋಗ್ಯ ಯೋಜನೆಯಡಿ ವೈದ್ಯಕೀಯ ಸೌಲಭ್ಯ ಒದಗಿಸಬೇಕು. ಗ್ರಾಚುಯಿಟಿ ಸೇರಿ ವಿವಿಧ ಸೌಲಭ್ಯ ನೀಡಬೇಕು ಎಂದು ಒತ್ತಾಯಿಸಿದರು.

ಎಐಜಿಡಿಎಸ್‌ಯು ವಿಭಾಗೀಯ ಅಧ್ಯಕ್ಷ ಮಂಜುನಾಥ್, ವಿಭಾಗೀಯ ಕಾರ್ಯಾಧ್ಯಕ್ಷರಾದ ಮೋಹನ್ ಕುಮಾರ್, ಪದಾಧಿಕಾರಿಗಳಾದ ಬೈಲಪ್ಪ, ಎಸ್.ಕುಮಾರ್, ಶಿವಣ್ಣ, ಸುಖಾನಂದ್, ನಂದೀಶ್ ಇತರರಿದ್ದರು.

ಪೊಟೋ೧೨ಸಿಪಿಟಿ೨:

ಚನ್ನಟಪಟ್ಟಣ ಅಂಚೆ ಕಚೇರಿ ಬಳಿ ಜಿಡಿಎಸ್ ನೌಕರರು ಮುಷ್ಕರ ನಡೆಸಿದರು.

Share this article