ನಗರಸಭೆ ಪೌರಕಾರ್ಮಿಕರಿಂದ ಅನಿರ್ದಿಷ್ಟಾವಧಿ ಧರಣಿ

KannadaprabhaNewsNetwork |  
Published : Feb 11, 2025, 12:48 AM IST
10ುಲು1 | Kannada Prabha

ಸಾರಾಂಶ

ಸರ್ಕಾರದ ವಿವಿಧ ಸೌಲಭ್ಯಕ್ಕಾಗಿ ನಗರಸಭೆಯಲ್ಲಿ ದುಡಿಯುತ್ತಿರುವ ಪೌರಕಾರ್ಮಿಕರು, ವಿವಿಧ ಸ್ವಚ್ಛತಾ ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರು ನಗರಸಭೆಯ ಮುಂದೆ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.

ಸರ್ಕಾರದ ವಿವಿಧ ಸೌಲಭ್ಯಕ್ಕಾಗಿ ಹೋರಾಟ

ಕನ್ನಡಪ್ರಭ ವಾರ್ತೆ ಗಂಗಾವತಿ

ಸರ್ಕಾರದ ವಿವಿಧ ಸೌಲಭ್ಯಕ್ಕಾಗಿ ನಗರಸಭೆಯಲ್ಲಿ ದುಡಿಯುತ್ತಿರುವ ಪೌರಕಾರ್ಮಿಕರು, ವಿವಿಧ ಸ್ವಚ್ಛತಾ ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರು ನಗರಸಭೆಯ ಮುಂದೆ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಐಸಿಸಿಟಿಯು ಜಿಲ್ಲಾಧ್ಯಕ್ಷ ವಿಜಯ್ ದೊರೆರಾಜು ಅವರು, ಪೌರಕಾರ್ಮಿಕರಿಗೆ ಕಳೆದ 6-7 ತಿಂಗಳಿಂದ ವೇತನ ಬಾಕಿ ನೀಡಿಲ್ಲ. ಗೃಹಭಾಗ್ಯ ಯೋಜನೆಯಡಿ ಎಲ್ಲ ಸ್ವಚ್ಛತಾ ಕಾರ್ಮಿಕರಿಗೆ ವಸತಿ ನಿವೇಶನ ನೀಡುವುದು, ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸುವುದು, ಪಿಎಫ್ ಮತ್ತು ಇಎಸ್‌ಐ ಸೌಲಭ್ಯ ಒದಗಿಸುವುದು, ಮೃತ ಪೌರಕಾರ್ಮಿಕರ ಕುಟಂಬದ ಸದಸ್ಯರಿಗೆ ಮಾನವೀಯತೆ ದೃಷ್ಟಿಯಿಂದ ಕೆಲಸ ನೀಡುವುದು ಸೇರಿದಂತೆ ಇತರ ಬೇಡಿಕೆಗಳಿಗೆ ಸ್ಪಂದಿಸಿಲ್ಲ ಎಂದು ದೂರಿದರು.

ಪೌರಕಾರ್ಮಿಕರ ಸೇವೆ ದಿನನಿತ್ಯ ಅಗತ್ಯಸೇವೆ ಎಂದು ಪರಿಗಣಿಸಿ, ನಗರಸಭೆಗೆ ಎಚ್ಚರಿಕೆಗಾಗಿ ಈಗಾಗಲೇ ಫೆಬ್ರವರಿ-1ರಿಂದ ಕಪ್ಪು ಪಟ್ಟಿ ಧರಿಸಿ ಪೌರಕಾರ್ಮಿಕರು ಕರ್ತವ್ಯ ನಿರ್ವಹಿಸಿದ್ದು, ಆದಾಗ್ಯೂ ಪೌರಕಾರ್ಮಿಕರ ಹಾಗೂ ವಿವಿಧ ಸ್ವಚ್ಛತಾ ಕಾರ್ಮಿಕರ ಬೇಡಿಕೆಗಳಿಗೆ ನಗರಸಭೆ ಸ್ಪಂದಿಸದೇ ಇರುವುದರಿಂದ ಈ ಅನಿರ್ದಿಷ್ಟಾವಧಿ ಧರಣಿ ಅನಿವಾರ್ಯವಾಗಿದೆ ಎಂದು ಹೇಳಿದರು.

ಈ ಅನಿರ್ದಿಷ್ಟಾವಧಿ ಧರಣಿಯಲ್ಲಿ ನಗರಸಭೆಯ ಪೌರಕಾರ್ಮಿಕರು, ವಾಹನ ಚಾಲಕರು, ಲೋಡರ್ಸ್‍ಗಳು, ಗಾರ್ಡಗಳು ಪಾಲ್ಗೊಂಡಿದ್ದರು.ಎಐಸಿಸಿಟಿಯು ಸಂಘಟನೆಯ ಸಣ್ಣ ಹನುಮಂತಪ್ಪ ಹುಲಿಹೈದರ, ಪ್ರಗತಿಪರ ಪೌರಕಾರ್ಮಿಕರು ಹಾಗೂ ವಾಹನ ಚಾಲಕರ ಸಂಘಟನೆಗಳ ಪರಶುರಾಮ, ಕೇಶವ ನಾಯಕ, ಬಾಬರ್, ರಮೇಶ ಕೆ., ಕನಕಪ್ಪ ನಾಯಕ, ಭೀಮಣ್ಣ, ಮಾಯಮ್ಮ, ಪಾರ್ವತಮ್ಮ, ಹೊನ್ನಾಳಪ್ಪ, ಕೊಟ್ರೋಶ, ಹುಲಿಗೆಮ್ಮ, ಕೆಂಚಮ್ಮ, ಗಿಡ್ಡಪ್ಪ, ಹನುಮಂತ, ಹೇಮಣ್ಣ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಜಯನಗರ ಪಾಲಿಕೆ ಬಜಾರ್‌ ಮಳಿಗೆಗಳ ಇ-ಹರಾಜು ಮೂಲಕ ವಿತರಿಸಿ: ಮಹೇಶ್ವರ್ ರಾವ್ ಸೂಚನೆ
ರಸ್ತೆ ಅಪಘಾತ ಸೈಕಲ್‌ ಸವಾರ ಸಾವು