ಹುಬ್ಬಳ್ಳಿ: ನಗರದೆಲ್ಲೆಡೆ 79ನೇ ಸ್ವಾತಂತ್ರ ದಿನಾಚರಣೆಯನ್ನು ಸಡಗರ-ಸಂಭ್ರಮದಿಂದ ಆಚರಿಸಲಾಯಿತು. ತಾಲೂಕಾಡಳಿತ, ಈದ್ಗಾ ಮೈದಾನ, ಮಹಾನಗರ ಪಾಲಿಕೆ, ವಿವಿಧ ಪಕ್ಷಗಳ ಕಚೇರಿ, ಶಾಲೆ-ಕಾಲೇಜುಗಳು, ಸಂಘ-ಸಂಸ್ಥೆಗಳಲ್ಲಿ ಧ್ವಜಾರೋಹಣ ಮಾಡಿ ಧ್ವಜವಂದನೆ ಸಲ್ಲಿಸಲಾಯಿತು.
ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ದೇಶ ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿದೆ.ವಿಜ್ಞಾನ, ತಂತ್ರಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತ ತನ್ನದೇ ಛಾಪು ಮೂಡಿಸಿದೆ. 2047ರಲ್ಲಿ ದೇಶ ವಿಕಸಿತ ಭಾರತವಾಗಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೇಕ್ ಇನ್ ಇಂಡಿಯಾ, ಸ್ಕಿಲ್ ಇಂಡಿಯಾ ಸೇರಿದಂತೆ ಸಾಕಷ್ಟು ಅಭಿವೃದ್ಧಿ ಪರ ಯೋಜನೆ ಜಾರಿಗೆ ತಂದಿದ್ದಾರೆ. ಅವರ ದೂರದೃಷ್ಟಿಯಿಂದ ದೇಶದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಕೋವಿಡ್ ಸಂದರ್ಭದಲ್ಲಿ ದೇಶದಲ್ಲೇ ಲಸಿಕೆ ಕಂಡು ಹಿಡಿದಿದ್ದು ನಮ್ಮ ಹಿರಿಮೆಯಾಗಿದೆ ಎಂದರು.
ಈ ವೇಳೆ ವಿವಿಧ ತಂಡಗಳು ಪಥ ಸಂಚಲನ ನಡೆಸಿದವು. ಪಥ ಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗಿಯಾದ ತಂಡಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ವಿಪ ಸದಸ್ಯ ಪ್ರದೀಪ್ ಶೆಟ್ಟರ್, ಗ್ರೇಡ್ 2 ತಹಸೀಲ್ದಾರ್ ಶಿವಾನಂದ ಹೆಬ್ಬಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪಾಲಿಕೆಯಲ್ಲಿ ಧ್ವಜಾರೋಹಣ
2025ರ ಸ್ವಚ್ಛ ಸರ್ವೇಕ್ಷಣೆಯಲ್ಲಿ ಮಹಾನಗರ ರಾಜ್ಯದಲ್ಲಿ 2ನೇ ಸ್ಥಾನ ಪಡೆದಿದೆ. 2025-26ರ ಸಾಲಿನ ಮೊದಲ 50 ದಿನಗಳಲ್ಲಿ ₹100 ಆಸ್ತಿ ತೆರಿಗೆ ಸಂಗ್ರಹಿಸಲಾಗಿದೆ. ನಗರವನ್ನು ಮತ್ತಷ್ಟು ಸುಂದರವಾಗಿ ಮಾರ್ಪಡಿಸುವ ಜವಾಬ್ದಾರಿ ನಮ್ಮದಾಗಿದೆ ಎಂದು ತಿಳಿಸಿದರು.
ಈ ವೇಳೆ ಆಯುಕ್ತ ರುದ್ರೇಶ ಘಾಳಿ, ಉಪ ಆಯುಕ್ತ ವಿಜಯಕುಮಾರ್ ಆರ್., ವಿರೋಧ ಪಕ್ಷದ ನಾಯಕ್ ಇಮ್ರಾನ್ ಎಲಿಗಾರ, ಪಾಲಿಕೆ ಸದಸ್ಯರು, ಸಿಬ್ಬಂದಿ, ಸಾರ್ವಜನಿಕರು ಉಪಸ್ಥಿತರಿದ್ದರು.ಈದ್ಗಾ ಮೈದಾನದಲ್ಲಿ ಧ್ವಜಾರೋಹಣ
ಈ ವೇಳೆ ಶಾಸಕ ಮಹೇಶ ಟೆಂಗಿನಕಾಯಿ, ಮೇಯರ್ ಜ್ಯೋತಿ ಪಾಟೀಲ, ಸದಸ್ಯ ರಾಜಣ್ಣ ಕೊರವಿ, ವಿರೋಧ ಪಕ್ಷದ ನಾಯಕ ಇಮ್ರಾನ್ ಎಲಿಗಾರ, ಶಿವು ಮೆಣಸಿನಕಾಯಿ, ಮೋಹನ ಹಿರೇಮನಿ ಸೇರಿದಂತೆ ಪಾಲಿಕೆ ಸದಸ್ಯರು, ಸಿಬ್ಬಂದಿ ಸಾರ್ವಜನಿಕರು ಉಪಸ್ಥಿತರಿದ್ದರು.