ನೆಲಮಂಗಲ/ದಾಬಸ್ಪೇಟೆ: 20ನೇ ಶತಮಾನ ಭಾರತದ ರಾಜಕೀಯ ಸ್ವಾತಂತ್ರ್ಯದ ಹೋರಾಟಕ್ಕೆ ಸಾಕ್ಷಿಯಾಗಿದ್ದರೆ, 21ನೇ ಶತಮಾನ ದೇಶದ ಅಭಿವೃದ್ಧಿ ಮತ್ತು ಜಾಗತಿಕ ನಾಯಕತ್ವವನ್ನು ನಿರ್ಧರಿಸುತ್ತದೆ ಎಂದು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಿಳಿಸಿದರು.
ಗ್ರಾಮೀಣರ ಆರೋಗ್ಯ ರಕ್ಷಣೆಯಲ್ಲಿನ ಅಸಮಾನತೆ, ಮಧುಮೇಹ ಮತ್ತು ಕ್ಯಾನ್ಸರ್ನಂತಹ ಕಾಯಿಲೆಗಳ ಹೆಚ್ಚಳ ಮತ್ತು ಮಾನಸಿಕ ಆರೋಗ್ಯದ ಸವಾಲುಗಳಿಗೆ ಕೇವಲ ಆಸ್ಪತ್ರೆಗಳಿಂದಲೇ ಪರಿಹಾರ ಸಿಗದು, ಭವಿಷ್ಯದ ವೈದ್ಯರ ಸಂಶೋಧನೆ ಮತ್ತು ನಾವೀನ್ಯತೆಗಳಿಂದ ಇದು ಸಾಧ್ಯವಾಗಲಿದೆ. ದೇಶದ ಅಭಿವೃದ್ಧಿಗೆ ಯುವಪೀಳಿಗೆ ಶಕ್ತಿಯಾಗಿದ್ದು, ದುಶ್ಚಟಗಳಿಗೆ, ಬಲಿಯಾಗಬಾರದು. 2047ರ ವೇಳೆಗೆ ಭಾರತವನ್ನು ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿಗೆ ಯುವ ಪೀಳಿಗೆಯೇ ಪ್ರಮುಖ ಶಿಲ್ಪಿಗಳಾಗಿದ್ದಾರೆ ಎಂದು ಹೇಳಿದರು.
ವಿದ್ಯಾರ್ಥಿಗಳೊಂದಿಗಿನ ಪ್ರಶ್ನೋತ್ತರ ಸಂವಾದದಲ್ಲಿ ಶೇಖಾವತ್ ಅವರು ತಮ್ಮ ವೈಯಕ್ತಿಕ ಜೀವನದ ಅನುಭವಗಳನ್ನು ಹಂಚಿಕೊಂಡರು. ಜಾಗತೀಕರಣದ ಈ ಯುಗದಲ್ಲಿ ಯುವ ಪೀಳಿಗೆ ತಮ್ಮ ಗುರುತನ್ನು ಕಳೆದುಕೊಳ್ಳದೆ ಹೇಗೆ ಮುನ್ನಡೆಯಬಹುದು ಎಂಬ ವಿದ್ಯಾರ್ಥಿಯೊಬ್ಬರ ಪ್ರಶ್ನೆಗೆ ಸಚಿವರು ಉತ್ತರಿಸಿದರು.ಇದೇ ಸಂದರ್ಭದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬಿಜಿಎಸ್ ಪಿಯು ಕಾಲೇಜಿನ ಆವರಣದಲ್ಲಿ ಸಸಿ ನೆಟ್ಟು ನೀರುಣಿಸಿದರು. ಪರಿಸರ ಮಾಲಿನ್ಯ ತಡೆಗಟ್ಟುವ ಮೂಲಕ ಸಸಿಗಳನ್ನು ನೆಟ್ಟು ಪೋಷಣೆ ಮಾಡುವಂತೆ ಸಲಹೆ ನೀಡಿದರು.
ಕೋಟ್..........
- ನಿರ್ಮಲಾನಂದನಾಥ ಸ್ವಾಮೀಜಿ, ಪೀಠಾಧ್ಯಕ್ಷರು, ಆದಿಚುಂಚನಗಿರಿ ಮಠ
ನೆಲಮಂಗಲದ ನಗರೂರಿನ ಬಿಜಿಎಸ್ ಎಂಸಿಎಚ್ ಆಸ್ಪತ್ರೆಯ ಸೂಪರ್ ಸ್ಪೆಷಾಲಿಟಿ ಸೇವೆಗಳಿಗೆ ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಚಾಲನೆ ನೀಡಿದರು. ನಿರ್ಮಲಾನಂದನಾಥ ಸ್ವಾಮೀಜಿ, ಸೌಮ್ಯನಾಥ ಸ್ವಾಮೀಜಿ, ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಇತರರು ಹಾಜರಿದ್ದರು.