ಸಂವಿಧಾನದಿಂದಲೇ ಭಾರತ ಬೆಳೆಯಲು ಸಾಧ್ಯ: ತಹಸೀಲ್ದಾರ ನಾಗೇಂದ್ರ

KannadaprabhaNewsNetwork |  
Published : Apr 17, 2025, 12:02 AM IST
ಪೊಟೋ ಪೈಲ್ ಳ 15ಬಿಕೆಲ್1 | Kannada Prabha

ಸಾರಾಂಶ

ಇಂದು ನಮ್ಮ ದೇಶ ಇಷ್ಟೊಂದು ಬೆಳೆಯಲು ಸಾಧ್ಯವಾಯಿತು.

ಭಟ್ಕಳ: ತಾಲೂಕು ಆಡಳಿತ, ತಾಪಂ, ಪುರಸಭೆ, ಜಾಲಿ ಪಪಂ, ಸಮಾಜ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ೧೩೪ನೇ ಜನ್ಮ ದಿನಾಚರಣೆ ಹಾಗೂ ಡಾ. ಬಾಬು ಜಗಜೀವನರಾಂ ೧೧೮ನೇ ಜನ್ಮ ದಿನಾಚರಣೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ತಾಪಂ ಪ್ರಭಾರ ಇಒ ವೆಂಕಟೇಶ ನಾಯಕ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಹಸಿಲ್ದಾರ್ ನಾಗೇಂದ್ರ ಕೋಳಶೆಟ್ಟಿ, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಯಾವುದೇ ಒಂದು ಜಾತಿ, ಕೋಮು ಅಥವಾ ಸಮುದಾಯಕ್ಕೆ ಸೀಮಿತರಾದವರಲ್ಲ, ಅವರು ಇಡೀ ಭಾರತದ ಸುಪುತ್ರರಾಗಿದ್ದಾರೆ. ಅವರು ರಚಿಸಿದ ಸಂವಿಧಾನದಿಂದಾಗಿಯೇ ಇಂದು ನಮ್ಮ ದೇಶ ಇಷ್ಟೊಂದು ಬೆಳೆಯಲು ಸಾಧ್ಯವಾಯಿತು. ಸಮಾಜದಲ್ಲಿ ಆಳವಾಗಿ ಬೇರೂರಿರುವ ಅನಿಷ್ಟ ಪದ್ಧತಿಗಳನ್ನು ತೊಡೆದುಹಾಕಲು ಅವರು ನಡೆಸಿದ ಹೋರಾಟ ಅವಿಸ್ಮರಣೀಯವಾಗಿದೆ. ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎಂಬ ಅವರ ಮಹಾಮಂತ್ರವನ್ನು ದೇಶದ ಎಲ್ಲ ಸಮುದಾಯಗಳು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ವಕೀಲ ರವೀಂದ್ರ ಎಸ್.ಎಂ. ಡಾ. ಅಂಬೇಡ್ಕರ್ ಕುರಿತು ಉಪನ್ಯಾಸ ನೀಡುತ್ತಾ, ಸಮಾಜದಲ್ಲಿ ಎಲ್ಲರೂ ಸಮಾನರಾಗಿ ಬದುಕುವ ಹಕ್ಕನ್ನು ಖಾತರಿಪಡಿಸಿದ ಬಾಬಾಸಾಹೇಬರು ನಮ್ಮೆಲ್ಲರಿಗೂ ಮಾರ್ಗದರ್ಶಕರಾಗಿದ್ದಾರೆ ಎಂದರು.

ಆರ್.ಎನ್.ಎಸ್. ರೂರಲ್ ಪಾಲಿಟೆಕ್ನಿಕ್ ಕಾಲೇಜಿನ ಉಪಪ್ರಾಂಶುಪಾಲ ಡಾ. ಮರಿಸ್ವಾಮಿ ಮಾತನಾಡಿದರು.

ವೇದಿಕೆಯಲ್ಲಿ ಪುರಸಭಾ ಮುಖ್ಯಾಧಿಕಾರಿ ವೆಂಕಟೇಶ ನಾವುಡ, ನೌಕರರ ಸಂಘದ ಅಧ್ಯಕ್ಷ ಎಂ.ಎನ್. ನಾಯ್ಕ, ದಲಿತ ಮುಖಂಡ ಮಾರುತಿ ಪಾವಸ್ಕರ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

ಕ್ಷೇತ್ರ ಸಂಪನ್ಮೂಲಾಧಿಕಾರಿ ವನಿತಾ ಎಚ್. ಡಾ. ಬಾಬು ಜಗಜೀವನರಾಂ ಕುರಿತು ಉಪನ್ಯಾಸ ನೀಡಿದರು. ಸಮಾಜ ಕಲ್ಯಾಣ ಇಲಾಖೆಯ ಗೀತಾ ಹೆಡಗೆ ಸ್ವಾಗತಿಸಿದರು. ಶಿಕ್ಷಕ ಸುರೇಶ ಮುರುಡೇಶ್ವರ ನಿರೂಪಿಸಿದರು. ತಹಸಿಲ್ದಾರ್ ಕಚೇರಿಯ ತಿಪ್ಪಣ್ಣ ಕೊಡತಗೇರಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಆದೇಶ
ಕಸಕ್ಕೆ ಬೆಂಕಿ: ಹೊಗೆಯಿಂದ ಮನೆಯಲ್ಲಿ ಉಸಿರಾಡಲು ಆಗುತ್ತಿಲ್ಲ:ನಟಿ ಐಂದ್ರಿತಾ