ಕನ್ನಡಪ್ರಭವಾರ್ತೆ ಚಿತ್ರದುರ್ಗ
ಚಿತ್ರದುರ್ಗ ಸೈನ್ಸ್ ಫೌಂಡೇಷನ್, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಸಹಯೋಗದೊಂದಿಗೆ ಶಿಕ್ಷಕರ ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬುಧವಾರ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಉದ್ಘಾಟಿಸಿ ವಿಕಸಿತ ಭಾರತಕ್ಕಾಗಿ ದೇಸೀಯ ತಂತ್ರಜ್ಞಾನ ವಿಷಯ ಕುರಿತು ಮಾತನಾಡಿದ ಅವರು, ನಮ್ಮ ಸರ್ವಾಂಗೀಣ ಅಭಿವೃದ್ದಿ ಸಂವಿಧಾನ ಆಶ್ರಯವಾಗಿರಬೇಕು. ಬಂಡವಾಳ ಮತ್ತು ತಂತ್ರಜ್ಞಾನಗಳಲ್ಲಿ ಸ್ವಾವಲಂಬನೆ ಸಾಧಿಸಬೇಕಾದರೆ ಬುದ್ದ, ಬಸವ, ಗಾಂಧಿ, ಅಂಬೇಡ್ಕರ್ ಚಿಂತನೆಗಳನ್ನು ತಾತ್ವಿಕ ಅಡಿಪಾಯವಾಗಿಟ್ಟುಕೊಳ್ಳಬೇಕು. ಮತ ಧರ್ಮಗಳ ಬೇಲಿಯನ್ನು ಕಿತ್ತು ಹಾಕಿ ಸಾವಿರಾರು ವರ್ಷಗಳಿಂದ ಅನ್ವೇಷಿಸಿಕೊಂಡು ಬಂದಿರುವ ದೇಸೀಯ ತಂತ್ರಜ್ಞಾನವನ್ನು ಆಧುನಿಕ ಸಂಶೋಧನಾ ವಿಧಾನಗಳ ಮೂಲಕ ನಾವಿನ್ಯಗೊಳಿಸಬೇಕೆಂದು ಹೇಳಿದರು.
ಕೃಷಿ, ಕೈಗಾರಿಕೆ, ಮೂಲ ಸೌಲಭ್ಯ, ನೀರಾವರಿ, ಆರೋಗ್ಯ ಮುಂತಾದ ಕ್ಷೇತ್ರಗಳಲ್ಲಿ ಎಲ್ಲಿ ದೊಡ್ಡ ಪ್ರಮಾಣದ ಉತ್ಪಾದನೆ ಮತ್ತು ವಿತರಣೆಗಳು ಅನಿವಾರ್ಯವೋ ಅವುಗಳನ್ನು ಹೊರತುಪಡಿಸಿ ಉಳಿದ ಸಂದರ್ಭಗಳಲ್ಲಿ ದೇಸಿ ತಂತ್ರಜ್ಞಾನ ಬಳಸುವುದರಿಂದ ವ್ಯಕ್ತಿ, ಸಂಸ್ಥೆ ಮತ್ತು ದೇಶ ಸಾಲದ ಹೊರೆಯಿಂದ ಹಾಗೂ ಅನಪೇಕ್ಷಿತ ಅವಲಂಬನೆಯಿಂದ ಹೊರಬರಬಹುದು ಎಂದರು.ಚಿತ್ರದುರ್ಗ ಸೈನ್ಸ್ ಫೌಂಡೇಷನ್ ನಿರ್ದೇಶಕ ಪ್ರೊ. ಈ. ರುದ್ರಮುನಿ ಮಾತನಾಡಿ ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆ ಕೊರತೆ ಶಿಕ್ಷಕರಲ್ಲಿ ಎದ್ದು ಕಾಣುತ್ತಿದೆ. ಶಿಕ್ಷಕರು ಮಕ್ಕಳಿಗೆ ವಿಜ್ಞಾನ ಸರಿಯಾಗಿ ಬೋಧಿಸಬೇಕು. ವೈಜ್ಞಾನಿಕ ಮನೋಭಾವನೆ, ಆಸಕ್ತಿ, ಚಿಂತನೆಯನ್ನು ಮಕ್ಕಳಲ್ಲಿ ಮೂಡಿಸಬೇಕಿದೆ. ಪ್ರಾಥಮಿಕ ಹಂತದಲ್ಲಿಯೇ ಮಕ್ಕಳಲ್ಲಿ ವಿಜ್ಞಾನದ ಬಗ್ಗೆ ಅರಿವು ಮೂಡಿಸುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ ಎಂದು ಹೇಳಿದರು.
ಶಿಕ್ಷಕರ ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯದ ಪ್ರವಾಚಕಿ ಸುಜಾತ ಮಾತನಾಡಿ ಪ್ರಕೃತಿಯ ವಿರುದ್ಧವಾಗಿ ಹೋಗುವ ಬದಲು ಪ್ರಕೃತಿ ನಮಗೆ ನೀಡಿರುವ ಸಂಪತ್ತನ್ನು ಹಾಳು ಮಾಡದೆ ಉಳಿಸಿಕೊಳ್ಳಬೇಕಾಗಿದೆ. ಪ್ರಶಿಕ್ಷಣಾರ್ಥಿಗಳು ವೈಜ್ಞಾನಿಕ ಮನೋಭಾವನೆ ಮೈಗೂಡಿಸಿಕೊಳ್ಳಬೇಕು. ಮಕ್ಕಳ ಮನಸ್ಸಿಗೆ ನಾಟುವ ರೀತಿಯಲ್ಲಿ ಪರಿಣಾಮಕಾರಿ ಬೋಧನೆ ಮುಖ್ಯ. ವಿಜ್ಞಾನ ಎಂದರೆ ಒಂದು ಡಿಸೈನ್. ಮಿಂಚು, ಗುಡುಗಿನಲ್ಲಿ ಒಂದು ರೀತಿಯ ಆಕರ್ಷಣೆಯಿದೆ. ಕವಿ ಹೃದಯ, ವಿಜ್ಞಾನದ ಹೃದಯ ಎರಡು ಒಂದೆ ಎಂದು ನುಡಿದರು.
ಪ್ರವಾಚಕ ಜಿ.ಆರ್. ತಿಪ್ಪೇಶಪ್ಪ, ರಾಜಣ್ಣ ವೇದಿಕೆಯಲ್ಲಿದ್ದರು. ಪ್ರಶಿಕ್ಷಣಾರ್ಥಿ ಹೇಮಲತ ಪ್ರಾರ್ಥಿಸಿದರು. ಗೌತಮಿ ಸ್ವಾಗತಿಸಿದರು. ಭಾರತಿ ನಿರೂಪಿಸಿದರು.