ಕೊಪ್ಪಳ: ವಿಧಾನಸಭಾ ಕ್ಷೇತ್ರದ ಅಳವಂಡಿ ಜಿಪಂ ವ್ಯಾಪ್ತಿಯ ಕವಲೂರು ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ ಅವರ ಪರ ಮತಯಾಚನೆ ಮಾಡಲಾಯಿತು.
ಪಕ್ಷದ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಮತದಾರರಿಗೆ ಬಿಜೆಪಿಯ ಸಾಧನೆ ತಿಳಿಸಬೇಕು. ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಸತತವಾಗಿ ಮೂರು ಬಾರಿ ಬಿಜೆಪಿ ಗೆಲುವು ಸಾಧಿಸಿದೆ. ಈ ಬಾರಿ ಎನ್ಡಿಎ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ ಅವರಿಗೆ ಮತ ನೀಡುವ ಮೂಲಕ ದೊಡ್ಡ ಅಂತರದಲ್ಲಿ ಗೆಲ್ಲಿಸಬೇಕು ಎಂದರು.
ಹಿರಿಯರಾದ ಚಂದ್ರಶೇಖರ ಕವಲೂರು, ಈಶಪ್ಪ ಮಾದಿನೂರ, ನಾಗನಗೌಡ್ರು ಮಾಲಿಪಾಟೀಲ್, ನೀಲಕಂಠಯ್ಯ ಹಿರೇಮಠ, ಶರಣಪ್ಪ ಜಡ್ಡಿ, ಸಿದ್ದಲಿಂಗಸ್ವಾಮಿ, ಬಸವರಾಜ ಗಡ್ಡಿ, ಪ್ರದೀಪಗೌಡ್ರು ಮಾಲಿಪಾಟೀಲ್, ಅಪ್ಪಣ್ಣ ಪದಕಿ, ಹಾಗೂ ಎರಡು ಪಕ್ಷದ ಹಿರಿಯ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹತ್ತು ವರ್ಷದಲ್ಲಿ ಒಂದು ದಿನ ರಜೆ ಪಡೆಯದೇ ದೇಶದ ಅಭಿವೃದ್ಧಿಗೆ ಕೆಲಸ ಮಾಡಿದ್ದಾರೆ. ಜನರ ಜೀವನ ಮಟ್ಟ ಸುಧಾರಿಸಿದ್ದಾರೆ. ಅವರು ಮತ್ತೊಮ್ಮೆ ಪ್ರಧಾನಮಂತ್ರಿ ಆಗಬೇಕು. ಕೊಪ್ಪಳ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರಗೆ ಮತ ನೀಡಿ ಎಂದು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಹೇಳಿದರು.ಎನ್ಡಿಎ ಅಭ್ಯರ್ಥಿಯಾಗಿ ಡಾ. ಬಸವರಾಜ ಕ್ಯಾವಟರ್ ಸ್ಪರ್ಧಿಸಿದ್ದು, ಅವರನ್ನು 1 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಬೇಕು. ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಮಂತ್ರಿ ಮಾಡಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ ಭೂಮರೆಡ್ಡಿ ಹೇಳಿದರು.