ಗದಗ: ಭಾರತವು ವೈವಿಧ್ಯತೆಯಲ್ಲಿ ಏಕತೆಯನ್ನು ಹೊಂದಿರುವ ಸುಂದರ ಶಾಂತಿಯ ತೋಟವಾಗಿದೆ. ಭಾರತ ಎಂಬ ಪವಿತ್ರ ಶಬ್ದದಲ್ಲೇ ವಿಶೇಷವಾದ ಆಧ್ಯಾತ್ಮಿಕತೆಯ ಶಕ್ತಿಯಿದೆ ಎಂದು ಮುಂಡರಗಿ ಅನ್ನದಾನೀಶ್ವರ ಮಠದ ಡಾ. ಅನ್ನದಾನೀಶ್ವರ ಸ್ವಾಮಿಗಳು ಹೇಳಿದರು.
ಇದೇ ವೇಳೆ ಕನ್ಹೇರಿ ಮಠದ ಕಾಡಸಿದ್ದೇಶ್ವರ ಶ್ರೀಗಳ ಕಾರ್ಯವನ್ನು ಶ್ಲಾಘಿಸಿದ ಮುಂಡರಗಿ ಶ್ರೀಗಳು, ಕಾಡಸಿದ್ದೇಶ್ವರ ಶ್ರೀಗಳ ಮಠದಲ್ಲಿ ಎಲ್ಲ ಜಾತಿಯ ಗೋವುಗಳನ್ನು ಅತ್ಯಂತ ಪ್ರೀತಿಯಿಂದ ಸಾಕಿ ಸಲಹಲಾಗುತ್ತಿದೆ. ಅವರು ಪ್ರಸ್ತುತ ದಿನಗಳಲ್ಲಿ ಭೂಮಿಯ ಫಲವತ್ತತೆಯನ್ನು ಕಾಪಾಡುವ ಸಾವಯವ ಕೃಷಿಗೆ ಅತಿ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಸಾವಯವ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವುದರಿಂದ ಮಾತ್ರ ಭೂಮಿತಾಯಿಯ ಗುಣಮಟ್ಟವನ್ನು ಉತ್ತಮವಾಗಿ ಇಡಲು ಸಾಧ್ಯವಿದ್ದು, ರೈತರ ಸರ್ವಾಂಗೀಣ ಬೆಳವಣಿಗೆಯಲ್ಲಿ ಕಾಡಸಿದ್ದೇಶ್ವರ ಶ್ರೀಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದರು.
ಚಂದ್ರು ಬಾಳಿಹಳ್ಳಿಮಠ ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಮಿತಿಯ ಗೌರವಾಧ್ಯಕ್ಷ ವಸಂತಗೌಡ ಪೊಲೀಸಪಾಟೀಲ ಸ್ವಾಗತಿಸಿದರು. ಐತಿಹಾಸಿಕ ಸಮಾವೇಶದಲ್ಲಿ ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ್ದ 300ಕ್ಕೂ ಹೆಚ್ಚಿನ ಶ್ರೀಗಳು ಉಪಸ್ಥಿತರಿದ್ದು ಆಶೀರ್ವದಿಸಿದರು. ನರಗುಂದ ಶಾಸಕ ಸಿ.ಸಿ. ಪಾಟೀಲ, ವಿಧಾನಪರಿಷತ್ ಮಾಜಿ ಸದಸ್ಯ ಎಸ್.ವಿ. ಸಂಕನೂರ, ಪ್ರಮುಖ ಮುಖಂಡರಾದ ರಾಜು ಖಾನಪ್ಪನವರ, ಕಿರಣ ಭೂಮಾ ಉಪಸ್ಥಿತರಿದ್ದರು. ವಿ.ಕೆ. ಗುರುಮಠ ಮತ್ತು ಶಿವಲಿಂಗ ಶಾಸ್ತ್ರಿ ಸಿದ್ದಾಪೂರ ನಿರೂಪಿಸಿದರು.ಡಾ. ಉಪಾಧ್ಯ ಅವರು ರಚಿಸಿರುವ ಬಸವ ಶೈವದಲ್ಲಿ ಹಿಂದುತ್ವ (ಭಾಗ-2) ಹಾಗೂ ಬೆಂಗಳೂರಿನ ಡಾ. ಸಿ. ಶಿವಕುಮಾರ ಅವರು ರಚಿಸಿರುವ ವಚನಾನುಸಂಧಾನ ಎಂಬ ಎರಡು ಮಹತ್ವದ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು.ಕನ್ನೇರಿ ಮಠಕ್ಕೆ ಭೇಟಿ ನೀಡಿ: ಸಿ.ಸಿ. ಪಾಟೀಲ ಮನವಿ