ಹಬ್ಬಗಳ‌ ಆಚರಣೆಗಳಿಂದಲೇ ವಿಶ್ವಮಟ್ಟದಲ್ಲಿ ಭಾರತ ಪ್ರಸಿದ್ಧ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

KannadaprabhaNewsNetwork | Published : Oct 4, 2024 1:19 AM

ಭಾರತ ಹಳ್ಳಿಗಳ ದೇಶ, ಹಬ್ಬಗಳ ದೇಶ.‌ ವಿಶೇಷ ಹಬ್ಬಗಳ ಆಚರಣೆಗಳಿಂದ ಇಡೀ ವಿಶ್ವವೇ ಇಂದು ನಮ್ಮನ್ನು ಗುರುತಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕನ್ನಡಪ್ರಭ ವಾರ್ತೆ ಮೂಡಲಗಿ

ಭಾರತ ಹಳ್ಳಿಗಳ ದೇಶ, ಹಬ್ಬಗಳ ದೇಶ.‌ ವಿಶೇಷ ಹಬ್ಬಗಳ ಆಚರಣೆಗಳಿಂದ ಇಡೀ ವಿಶ್ವವೇ ಇಂದು ನಮ್ಮನ್ನು ಗುರುತಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ 41ನೇ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿದ ಸಚಿವರು, ಭಾರತದಲ್ಲಿ ಎಲ್ಲಾ ಸಮುದಾಯಗಳು ಸೇರಿ ಹಬ್ಬಗಳನ್ನು ಆಚರಣೆ ಮಾಡುತ್ತೇವೆ. ನಮ್ಮ ಹಬ್ಬಗಳ ವೈಶಿಷ್ಟ್ಯ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದ ಅವರು, ರಾಜ್ಯದ ಅತಿದೊಡ್ಡ ಹಬ್ಬ ನವರಾತ್ರಿ. ಇದು ದೇಶದ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತವೆ. ನಮ್ಮದು ಸಾಂಸ್ಕೃತಿಕವಾಗಿ ಶ್ರೀಮಂತ ದೇಶವಾಗಿರುವುದರಿಂದ ಇಡೀ ವಿಶ್ವವೇ ಭಾರತವನ್ನು ಅನುಕರಣೆ ಮಾಡುತ್ತಿದೆ. ನಾವು ಎಲ್ಲಾ ವಸ್ತುಗಳಲ್ಲಿ, ಸಂಬಂಧಗಳಲ್ಲಿ ದೇವರನ್ನು ಕಾಣುತ್ತೇವೆ. ಹಿರಿಯರಲ್ಲಿ, ಮಕ್ಕಳಲ್ಲಿ, ಮುತ್ತೈದೆಯರಲ್ಲಿ ದೇವರನ್ನು ಕಾಣುತ್ತೇವೆ. ನಮ್ಮ ಸಂಸ್ಕೃತಿ ಉಳಿಸಿ, ಬೆಳೆಸುವುದು ಪ್ರತಿ ಮನೆಯ ಗೃಹಿಣಿ, ನಮ್ಮ ಸಂಸ್ಕೃತಿಯ ರಾಯಭಾರಿಗಳು ಗೃಹಿಣಿಯರು ಎಂದು ಸಚಿವರು ಹೇಳಿದರು. ‌

ಗಣ್ಯರಿಂದ ಪುರ್ಷ್ಪಾಚನೆ

ಬಂಡಿಗಣಿಯ ಬಸವಗೋಪಾಲ ನೀಲಮಾಣಿಕ್ಯ ಮಠದ ದಾಸೋಹ ರತ್ನ ಅನ್ನದಾನೇಶ್ವರರು, ಬಬಲಾದಿಯ ಸಿದ್ದರಾಮೇಶ್ವರ ಮಹಾಸ್ವಾಮೀಜಿ, ಅರಿಕೇರಿಯ ಅಮೋಘಸಿದ್ಧ ಪೀಠಿದ ಅವದೂತ ಮಹಾರಾಜರು, ಹುಳ್ಯಾಳದ ಜಯಶ್ರೀ ಅಮ್ಮನವರು, ಸುಕ್ಷೇತ್ರ ಭೂಕೈಲಾಸ ಮಾಲಿಂಗರಾಯ ಮಹಾರಾಜರು, ಸಚಿವೆ ಲಕ್ಷ್ಮಿ ಹೆಬ್ಬಾಳಕರ್, ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಡಾ. ಮಹಾಂತೇಶ ಕಡಾಡಿ, ನವರಾತ್ರಿ ಉತ್ಸವ ಸ್ವಾಗತ ಸಮಿತಿ ಅಧ್ಯಕ್ಷ ರಾವಸಾಹೇಬ್ ಬೆಳಕೂಡ ಹಾಗೂ ಮತ್ತಿತರರು ಸೇರಿದಂತೆ ಆನೆಯ ಅಂಬಾರಿ ಮೇಲೆ ಉತ್ಸವ ಮೂರ್ತಿಗೆ ಮತ್ತು ನವರಾತ್ರಿ ಪ್ರತಿಷ್ಠಾಪನೆ ದುರ್ಗಾದೇವಿ ಮೂರ್ತಿಗೆ ಪುಪ್ಪಾರ್ಚನೆ ಮಾಡಿದರು.

ಗಮನಸೆಳೆದ ಅದ್ದೂರಿ ಮೆರವಣಿಗೆ:

ನವರಾತ್ರಿಯ ದುರ್ಗಾದೇವಿ ಮೂರ್ತಿಯ ಮೆರವಣಿಗೆಯಲ್ಲಿ ಜಂಬೂ ಸವಾರಿಯಲ್ಲಿ ಮಹಿಳೆಯರ ಕುಂಭಮೇಳದೊಂದಿಗೆ ಡೊಳ್ಳು, ಸಂಬಾಳ ವಾದನ, ಕರಡಿ ಮೇಳ, ಝಾಂಜ್‌ ಪಥಕ್‌ ಸೇರಿದಂತೆ ಹಲವಾರು ಸಂಪ್ರದಾಯಿಕ ವಾದ್ಯಗಳು ಉತ್ಸವಕ್ಕೆ ಮೆರಗು ನೀಡಿದವು.

ಮುಖಂಡರಾದ ಲಕ್ಕಣ್ಣ ಸವಸುದ್ದಿ, ಬಸವರಾಜ ಬೆಳಕೂಡ, ಬಸವರಾಜ ಕಡಾಡಿ, ರಾಮಪ್ಪ ಬೆಳಕೂಡ, ಉಮೇಶ ಬಿ.ಪಾಟೀಲ, ಸಿದ್ದಪ್ಪ ಮುಗಳಿ, ಗಿರಿಮಲ್ಲಪ್ಪ ಸವಸುದ್ದಿ, ಭೀಮರಾಯ ಕಡಾಡಿ, ಶಿವಪ್ಪ ಜಗದಾಳ, ಪರಪ್ಪ ಮಟಗಾರ, ಶಂಕರ ಗೋಶಿ, ಭೀಮಶಪ್ಪ ಖಾನಾಪೂರ, ಪಂಚಾಕ್ಷರಿ ಹೆಬ್ಬಾಳ, ಹಣಮಂತ ಸಂಗಟ, ಭಗವಂತ ಪತ್ತಾರ, ಧರೆಪ್ಪ ಖಾನಗೌಡ್ರ, ನವರಾತ್ರಿ ಉತ್ಸವ ಕಮಿಟಿಯ ಸದಸ್ಯರು,ದೇವಸ್ಥಾನದ ಅರ್ಚಕರು ಹಾಗೂ ಕಮಿಟಿಯ ಸದಸ್ಯರು, ಕಲ್ಲೋಳಿ ಪಟ್ಟಣದ ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮೇರವಣಿಗೆಯಲ್ಲಿ ಭಾಗವಹಿಸಿದ್ದರು.