ಕನ್ನಡಪ್ರಭವಾರ್ತೆ ಚಿತ್ರದುರ್ಗ
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು 16, 17, 18ರಂದು ದೇಶದ ಮಹಿಳೆಯರಿಗೆ ಮೀಸಲಾತಿ ಕೊಡಬೇಕು ಎಂಬ ಹಿನ್ನೆಲೆಯಲ್ಲಿ ಬಹಳಷ್ಟು ಪ್ರಯತ್ನಿಸಿದರು. ಆದರೆ, ಕಾಂಗ್ರೆಸ್ ಈ ವಿಷಯದಲ್ಲಿ ರಾಜಕೀಯ ಮಾಡುವ ಮೂಲಕ ಮಹಿಳಾ ವಿರೋಧಿ ಎಂಬುದನ್ನು ಸಾಬೀತು ಪಡಿಸಿದೆ ಎಂದರು.
ಮಹಿಳಾ ಮೀಸಲು ವಿಚಾರದಲ್ಲಿ 900 ವರ್ಷಗಳಿಂದಲೂ ಸೋಲನ್ನು ಕಂಡಿದ್ದೇವೆ. ಬಸವಣ್ಣನ ಕಾಲಘಟ್ಟದಲ್ಲೂ ಕೂಡ ಮಹಿಳೆಯರ ವಿಚಾರದಲ್ಲಿ ಇಂತಹುದೇ ಸೋಲುಗಳು ಆಗಿದ್ದವು. ಪುರುಷ ಪ್ರಧಾನ ಸಮಾಜದಲ್ಲಿ ಇದೊಂದು ಕಹಿ ಘಟನೆಯಾಗಿದೆ. ಪ್ರಧಾನಿ ಮೋದಿ ಅವರಿಗೆ ಮಹಿಳೆಯರ ಮೀಸಲಾತಿ ಜಾರಿಗೊಳಿಸುವ ಕುರಿತು ತುಂಬಾ ಆಸೆ ಇತ್ತು ಎಂದು ಹೇಳಿದರು.ಕ್ಷೇತ್ರ ಮರುವಿಂಗಡಣೆ ವಿಷಯದಲ್ಲೂ ಕಾಂಗ್ರೆಸ್ ತರ್ಕವಿಲ್ಲದ ಆರೋಪಗಳನ್ನು ಮಾಡುತ್ತಿದೆ. ಲೋಕಸಭಾ ಕ್ಷೇತ್ರಗಳು ಹೆಚ್ಚಾಗುವುದನ್ನು ತಡೆದು ಸಂಭ್ರಮಿಸುತ್ತಿರುವ ರಾಹುಲ್ ಗಾಂಧಿ ಅಪ್ರಬುದ್ಧ ರಾಜಕಾರಣಿ. ಈತನಿಗೆ ಸರಿಯಾದ ರಾಜಕೀಯ ನಿಲುವುಗಳು ಇಲ್ಲ. ಉತ್ತರ ಭಾರತಕ್ಕಿಂತ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗಲಿದೆ ಎಂದು ಹೇಳುತ್ತಾ ಜನರ ದಾರಿ ತಪ್ಪಿಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಕೂಡ ಈ ವಿಷಯದಲ್ಲಿ ರಾಹುಲ್ ಹಾಗೂ ಗಾಂಧಿ ಮನೆತನದವರ ಮಾತುಗಳನ್ನು ಕೇಳಿ ದೂರದೃಷ್ಟಿ ಇಲ್ಲದ ನಾಯಕನಂತೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ದುರಾಡಳಿತ ಮಾಡುತ್ತಿದೆ. ಇದನ್ನು ಜನರು ಖಂಡಿಸಬೇಕು ಎಂದರು.
ಪ್ರಧಾನಿ ಮೋದಿಯವರು 12ಕೋಟಿ ಶೌಚಾಲಯ ನಿರ್ಮಾಣ ಮಾಡಿದ್ದಾರೆ. 15 ಕೋಟಿ ಜನರಿಗೆ ಕುಡಿಯುವ ನೀರಿಗಾಗಿ ಯೋಜನೆ ಜಾರಿ ಮಾಡಿದ್ದಾರೆ ಎಂದರು. ಕಾಂಗ್ರೆಸ್ ಪಕ್ಷ ಎಷ್ಟು ಮಂದಿ ಮಹಿಳೆಯರಿಗೆ ದೇಶದ ವಿವಿಧ ರಾಜ್ಯಗಳಲ್ಲಿ ಮುಖ್ಯಮಂತ್ರಿ ಮಾಡಿದ್ದಾರೆ. ಬಿಜಿಪಿ ಈ ವಿಷಯದಲ್ಲಿ ಮಹಿಳಾ ಪ್ರಾತಿನಿಧ್ಯಕ್ಕೆ ಹೆಚ್ಚು ಅವಕಾಶ ನೀಡಿದೆ. ಬಾಬಾ ಸಾಹೇಬರ ಸಂವಿಧಾನ ದೇಶದ ಕಾಶ್ಮೀರದಲ್ಲಿ ಜಾರಿ ಇರಲೇ ಇಲ್ಲ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ 370 ರದ್ದು ಮಾಡಿದ ಮೇಲೆ ಬಾಬಾ ಸಾಹೇಬರ ಸಂವಿಧಾನ ಜಾರಿಯಾಗಿದೆ ಎಂದರು.
ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಹೊಸದುರ್ಗದ ಎಸ್.ಲಿಂಗಮೂರ್ತಿ, ಸೂರನಹಳ್ಳಿ ಶ್ರೀನಿವಾಸ್, ಬಾಳೆಕಾಯಿ ರಾಮದಾಸ್,ಶ್ಯಾಮಲಾ, ಬಿಜೆಪಿ ಮಾಜಿ ಅಧ್ಯಕ್ಷ ಮುರಳಿ, ಪ್ರಧಾನ ಕಾರ್ಯದರ್ಶಿ ಡಾ.ಪಿ.ಎಂ. ಮಂಜುನಾಥ್, ಡಾ.ಸಿದ್ದಾರ್ಥ್ ಇದ್ದರು.