ಹೊನ್ನಾಳಿ: ಶತಮಾನಗಳಿಂದ ಭಾರತದ ಮೇಲೆ ಪಾಶ್ಚಮಾತ್ಯರಿಂದ ಎಷ್ಟೇ ಆಕ್ರಮಣಗಳಾದರೂ ಹಿಂದೂ ಧರ್ಮ, ದೈವ, ಗುರು ಸಂಸ್ಕೃತಿಗಳ ಬಲದಿಂದ ಇಂದಿಗೂ ದೇಶ ಅಚಲವಾಗಿದೆ. ಅಭಿವೃದ್ಧಿಯಿಂದಾಗಿ ಇಡೀ ವಿಶ್ವವೇ ಭಾರತದ ಕಡೆಗೆ ನೋಡುವಂತಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.
ಕಾರ್ಯಕ್ರಮದಲ್ಲಿ ಗೋವಿನಕೋವಿ ಹಾಲಸ್ವಾಮಿ ಮಠದ ಸದ್ಗುರು ಶಿವಯೋಗಿ ಮಹಾಲಿಂಗ ಹಾಲಸ್ವಾಮೀಜಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹೊನ್ನಾಳಿ ಹಿರೇಕಲ್ಮಠದಲ್ಲಿ ಪ್ರತಿವರ್ಷ ಹತ್ತು ದಿನಗಳ ಕಾಲ ಶರನ್ನವರಾತ್ರಿ ಮತ್ತು ದಸರಾ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಂಡು ಭಕ್ತರಿಗೆ ಧಾರ್ಮಿಕ ಮತ್ತು ಸಾಂಸ್ಕೃತಿಕ ದಾಸೋಹ ನೀಡುತ್ತಿದೆ ಎಂದರು.
ಸಾನ್ನಿಧ್ಯವನ್ನು ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಜಿ ಆಶೀರ್ವಚನ ನೀಡಿದರು. ಅನಂತರ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ರುದ್ರೇಶ್ ಸ್ವಾಗತಿಸಿ, ಟಿ.ಎಂ. ಬಸವರಾಜಯ್ಯ ಶಾಸ್ತ್ರಿ ನಿರೂಪಿಸಿದರು.- - -
-26ಎಚ್ಎಲ್ಐ1:ಶರನ್ನವರಾತ್ರಿ ಕಾರ್ಯಕ್ರಮದಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಮಾತನಾಡಿದರು.