ಯೋಗಕ್ಕೆ ಭಾರತವೇ ವಿಶ್ವಗುರು: ಜಿಲ್ಲಾಧಿಕಾರಿ ಡಾ.ಕುಮಾರ

KannadaprabhaNewsNetwork |  
Published : Jun 22, 2025, 01:18 AM IST
೨೧ಕೆಎಂಎನ್‌ಡಿ-೧ಮಂಡ್ಯದ ಪಿಇಟಿ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗಾಭ್ಯಾಸ ನಡೆಸಲಾಯಿತು. | Kannada Prabha

ಸಾರಾಂಶ

ಯೋಗ ಎಂಬುದು ಕೇವಲ ದೈಹಿಕವಾದ ವ್ಯಾಯಾಮ ಮಾತ್ರವಲ್ಲ, ಪ್ರತಿಯೊಬ್ಬರ ಜೀವನ ಕ್ರಮ ಮತ್ತು ಆರಾಧನೆಯ ಭಾಗವಾಗಬೇಕು. ಜನರು ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಲು ಯೋಗದ ಅವಶ್ಯಕತೆ ಇದೆ. ರೋಗ ಬರುವ ಮೊದಲು ಯೋಗವನ್ನು ರೂಢಿಸಿಕೊಳ್ಳಿ. ಯೋಗದಿಂದ ಜೀವನಶೈಲಿ ಸಹ ಬದಲಾಗುತ್ತದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಯೋಗ ಎಂದರೆ ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತಾಗಿದೆ. ಯೋಗಕ್ಕೆ ಭಾರತವೇ ವಿಶ್ವಗುರು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಶನಿವಾರ ನಗರದ ಪಿಇಟಿ ಕ್ರಿಕೆಟ್ ಮೈದಾನದಲ್ಲಿ ಆಯೋಜಿಸಲಾಗಿದ್ದ ೧೧ ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿ, ಯೋಗ ಎನ್ನುವುದು ದೇಶದ ಸಂಸ್ಕೃತಿಯ ಪ್ರತೀಕ. ಪ್ರತಿಯೊಬ್ಬರೂ ಯೋಗ ಕಲಿತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ನುಡಿದರು.

ಯೋಗ ಎಂಬುದು ಕೇವಲ ದೈಹಿಕವಾದ ವ್ಯಾಯಾಮ ಮಾತ್ರವಲ್ಲ, ಪ್ರತಿಯೊಬ್ಬರ ಜೀವನ ಕ್ರಮ ಮತ್ತು ಆರಾಧನೆಯ ಭಾಗವಾಗಬೇಕು. ಜನರು ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಲು ಯೋಗದ ಅವಶ್ಯಕತೆ ಇದೆ ಎಂದರು.

ರೋಗ ಬರುವ ಮೊದಲು ಯೋಗವನ್ನು ರೂಢಿಸಿಕೊಳ್ಳಿ. ಯೋಗದಿಂದ ಜೀವನಶೈಲಿ ಸಹ ಬದಲಾಗುತ್ತದೆ. ವಿದ್ಯಾರ್ಥಿಗಳು ಚಿಕ್ಕಂದಿನಿಂದಲೇ ಯೋಗವನ್ನು ಅಭ್ಯಾಸ ಮಾಡಿದರೆ ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬಹುದು ಎಂದರು.

ಶ್ರೀಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮೀಜಿ ಮಾತನಾಡಿ, ಯೋಗಾಸನವನ್ನು ಕೇವಲ ಒಂದು ದಿನಕ್ಕೆ ಮೀಸಲಿಡದೆ ಪ್ರತಿದಿನ ಅಭ್ಯಾಸ ಮಾಡಿ ಆರೋಗ್ಯದ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಿ. ಎಲ್ಲಾ ವಯೋಮಿತಿ ಅವರು ಯೋಗಾಭ್ಯಾಸವನ್ನು ಮಾಡಬಹುದು ಎಂದರು.

ಕಾರ್ಯಕ್ರಮದಲ್ಲಿ ಚಂದ್ರವನ ಆಶ್ರಮದ ಬೇಬಿ ಮಠದ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ, ನಗರಸಭೆ ಅಧ್ಯಕ್ಷ ಎಂ.ವಿ.ಪ್ರಕಾಶ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಧ್ಯಕ್ಷೆ ಮೀರಾ ಶಿವಲಿಂಗಯ್ಯ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಪುಷ್ಪಾ ಸೇರಿದಂತೆ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ-ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಒತ್ತಾಯ