ಯುವಕರಿಂದ ಭಾರತ ಅಭಿವದ್ಧಿ ಸಾಧ್ಯ: ಡಾ.ಗಣನಾಥ್ ಎಕ್ಕಾರ್‌

KannadaprabhaNewsNetwork |  
Published : Apr 22, 2025, 01:52 AM IST
20ಗಣ | Kannada Prabha

ಸಾರಾಂಶ

ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಎನ್ ಎಸ್ ಎಸ್ ಘಟಕನ ವಾರ್ಷಿಕ ವಿಶೇಷ ಶಿಬಿರ ನಡೆಯಿತು. ಶಿಬಿರದಲ್ಲಿ ಇಂದಿರಾ ಗಾಂಧಿ ಎನ್ ಎಸ್ ಎಸ್ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಡಾ. ಗಣನಾಥ್ ಎಕ್ಕಾರ್ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಭಾರತದಲ್ಲಿ ಯುವ ಜನತೆಯ ಸಂಖ್ಯೆ ಹೆಚ್ಚಾಗಿದ್ದು ದೇಶ ಮುಂದುವರಿಯಲು ಅವರ ಸಾಮಾಜಿಕ ಜವಾಬ್ದಾರಿ ಅತಿಮುಖ್ಯವಾಗಿದೆ ಎಂದು ಇಂದಿರಾ ಗಾಂಧಿ ಎನ್ ಎಸ್ ಎಸ್ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಡಾ. ಗಣನಾಥ್ ಎಕ್ಕಾರ್ ಹೇಳಿದ್ದಾರೆ.

ನಗರದ ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಎನ್ ಎಸ್ ಎಸ್ ಘಟಕನ ವಾರ್ಷಿಕ ವಿಶೇಷ ಶಿಬಿರದಲ್ಲಿ ಶಿಬಿರಾರ್ಥಿಗಳನ್ನು ಕುರಿತು ಮಾತನಾಡಿದರು.

ಯುವಕರಿಂದ ಮಾತ್ರ ಸಾಮಾಜಿಕ ಬದಲಾವಣೆ ಹಾಗೂ ದೇಶದ ಅಭಿವೃದ್ಧಿ ಸಾಧ್ಯ. ಆದರಿಂದ ಯುವಕರು ತಮ್ಮ ಜವಾಬ್ದಾರಿ ಅರಿತು ದೇಶವನ್ನು ಮುನ್ನೆಡೆಸಬೇಕ ಎಂದು ಅವರು ಕರೆ ನೀಡಿರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎನ್ ಎಸ್ ಎಸ್ ಘಟಕದ ಕಾರ್ಯಕ್ರಮ ಅಧಿಕಾರಿ ಡಾ. ನವೀನ್ ಚಂದ್ರ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕ ಪ್ರೊ. ಅಮೋಘ ಗಾಡ್ಕರ್ ಹಾಗೂ ಎನ್ ಎಸ್ ಎಸ್ ಕಾರ್ಯದರ್ಶಿಗಳಾದ ಅಶೋಕ ಮತ್ತು ನಂದನ್ ರೈಮಂಡ್ ಮಚಾದೋ ಉಪಸ್ಥಿತರಿದ್ದರು. ಶಿಬಿರಾರ್ಥಿ ರೂಪಾಲಿ ಸ್ವಾಗತಿಸಿದರು ಅರ್ಚನಾ ವಂದಿಸಿದರು ಪ್ರಸನ್ನ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಣಸೆ, ಹಲಸು, ನೇರಳೆಗೆ ಮಂಡಳಿ ರಚಿಸಿ: ದೇವೇಗೌಡ
ಗುಮ್ಮ ಬಂದ ಗುಮ್ಮ, ಮಕ್ಕಳಿಗೆ ಹೊಡೆಯೋ ಗುಮ್ಮ!