ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದ ಜಿಎಂ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಎಚ್ಆರ್ ಕಾನ್ಕ್ಲೇವ್-2026 ಮಹಾ ಸಮಾವೇಶ ಉದ್ಘಾಟಿಸಿ ಮಾತನಾಡಿ, ಭಾರತದ ಐಟಿ ಉದ್ಯಮವು ಸುಮಾರು 315 ಬಿಲಿಯನ್ ಅಮೆರಿಕನ್ ಡಾಲರ್ನಷ್ಟು ಆದಾಯವನ್ನು ಪ್ರಸಕ್ತ ಸಾಲಿನಲ್ಲಿ ಗಳಿಸುವ ನಿಟ್ಟಿನಲ್ಲಿ ಸಾಗುತ್ತಿದೆ ಎಂದರು.
ಇಡೀ ದೇಶದ ಎಸ್ಟಿಪಿಐ ಘಟಕಗಳಿಂದ ನಡೆಯುವ ಒಟ್ಟು ರಫ್ತಿನಲ್ಲಿ ಕರ್ನಾಟಕದ ಪಾಲು ಶೇ.42.5ರಷ್ಟು ಇದ್ದು, ರಾಜ್ಯವು ಐಟಿ ಮತ್ತು ಸ್ಟಾರ್ಟಪ್ ಕ್ಷೇತ್ರದಲ್ಲಿ ಭಾರೀ ಮುನ್ನಡೆಯನ್ನು ಸಾಧಿಸುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. 2022ರಲ್ಲಿ ದಾವಣಗೆರೆಯಲ್ಲಿ ಸ್ಥಾಪಿತ ಎಸ್ಟಿಪಿಐ ಕೇಂದ್ರವು ಕೇಂದ್ರದ ಮಾಜಿ ಸಚಿವ ಡಾ.ಜಿ.ಎಂ.ಸಿದ್ದೇಶ್ವರ ಬೆಂಬಲದೊಂದಿಗೆ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದರು.ದಾವಣಗೆರೆ ಎಸ್ಟಿಪಿಐ ಘಟಕಗಳಿಂದ ಸುಮಾರು 3.8 ಕೋಟಿ ರು. ಮೌಲ್ಯದ ರಫ್ತು ವಹಿವಾಟು ಆಗಿರುವುದು ಮಧ್ಯ ಕರ್ನಾಟಕ ಈ ಊರು ತಂತ್ರಜ್ಞಾನ ಕೇಂದ್ರವಾಗಿ ಬೆಳೆಯುವ ಮುನ್ಸೂಚನೆ ನೀಡುತ್ತಿದೆ. ಕರ್ನಾಟಕ ಐಟಿ ನೀತಿ 2025-2030 ಹಾಗೂ ಸ್ಟಾರ್ಟಪ್ ನೀತಿ ಮೂಲಕ ಬೆಂಗಳೂರು ಹೊರತಾದ ಜಿಲ್ಲೆಗಳಲ್ಲೂ 10 ಸಾವಿರಕ್ಕೂ ಅಧಿಕ ಹೊಸ ಸ್ಟಾರ್ಟಪ್ಗಳಿಗೆ ಉತ್ತೇಜನ ನೀಡುವ ಗುರಿ ಹೊಂದಲಾಗಿದೆ. ಇದು ದಾವಣಗೆರೆ ಜಿಲ್ಲೆಯ ಯುವ ಜನರಿಗೂ ಸುವರ್ಣಾವಕಾಶ ಕಲ್ಪಿಸಲಿದೆ ಎಂದು ತಿಳಿಸಿದರು.
ಕೇಂದ್ರದ ಮಾಜಿ ಸಚಿವ ಡಾ.ಜಿ.ಎಂ.ಸಿದ್ದೇಶ್ವರ ಮಾತನಾಡಿ, ಕೃತಕ ಬುದ್ಧಿ ಮತ್ತೆ ಬಂದ ಮೇಲೆ ಕೆಲಸಗಳೆಲ್ಲಾ ಹೋಗುತ್ತವೆಂಬ ವದಂತಿ ಹರಡಿತ್ತು. ಅಂತಹ ವದಂತಿಗಳಿಗೆ ತೆರೆ ಎಳೆದು, ಉದ್ಯೋಗಾವಕಾಶಗಳ ಬಗ್ಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಧೈರ್ಯ ತುಂಬುವ ಉದ್ದೇಶದಿಂದ ಜಿಎಂ ವಿವಿ ಮಹಾ ಸಮ್ಮೇಳನವನ್ನು ಆಯೋಜಿಸಿದೆ ಎಂದರು.
ಇನ್ಫೋಸಿಸ್ ಫಿನಾಕಲ್ ಪ್ರಾಡಕ್ಟ್ ಮ್ಯಾನೇಜ್ಮೆಂಟ್ ಗ್ಲೋಬಲ್ ಹೆಡ್ ಕೃಷ್ಣಸ್ವಾಮಿ ಸುಬ್ಬರಾವ್, ಸಂಕೇತ್ ರಾಮ ಕೃಷ್ಣಮೂರ್ತಿ ಪ್ರಮುಖ ಭಾಷಣ ಮಾಡಿದರು. ಕುಲಪತಿ ಡಾ.ಎಸ್.ಆರ್. ಶಂಕಪಾಲ್, ಉಪ ಕುಲಪತಿ ಡಾ.ಎಂ.ವೇಣುಗೋಪಾಲರಾವ್, ಕುಲ ಸಚಿವ ಡಾ.ಬಿ.ಎಸ್.ಸುನಿಲಕುಮಾರ, ಪ್ರಾಚಾರ್ಯರು, ಡೀನ್, ನಿರ್ದೇಶಕರು, ಮುಖ್ಯಸ್ಥರು, ಜಿಎಂ ಶೈಕ್ಷಣಿಕ ಸಮೂಹದವರು, ವಿದ್ಯಾರ್ಥಿಗಳು, ಸಿಬ್ಬಂದಿ ಇದ್ದರು.
ವಿ.ಮಹಾದೇಶ ನಿರ್ದೇಶಕ, ಎಸ್ಟಿಪಿಐ ಬೆಂಗಳೂರು.