ಆಪರೇಷನ್‌ ಸಿಂದೂರದ ಮೂಲಕ ಭಾರತದ ಶಕ್ತಿ ಸಾಬೀತು

KannadaprabhaNewsNetwork |  
Published : May 16, 2025, 01:48 AM IST
ಫೋಟೋ 15ಪಿವಿಡಿ6ಪಾವಗಡ ಕ್ಷಿಪಣಿಗಳನ್ನು ಹೊಡೆದುರಳಿಸುವ ಮೂಲಕ ಪಾಕಿಸ್ತಾನದ ಭಯೋತ್ವಾದಕರನ್ನು ಸರಿಯಾದ ಬುದ್ದಿಕಲಿಸಿದ್ದ ಹಿನ್ನಲೆಯಲ್ಲಿ ಸಂಸದ ಗೋವಿಂದಕಾರಜೋಳ ಹಾಗೂ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ನೇತೃತ್ವದಲ್ಲಿ ಇಲ್ಲಿನ ಕಾರ್ಯಕರ್ತರು ಪಟ್ಟಣದಲ್ಲಿ ತಿರಂಗಯಾತ್ರೆ ನಡೆಸಿ ಭಾರತದ ಸೇನೆಗೆ ಅಭಿನಂದನೆ ಸಲ್ಲಿಸಿದರು.ಫೋಟೋ 15ಪಿವಿಡಿ7ಖಾಸಗಿ ಕಾರ್ಯಕ್ರಮದ ನಿಮಿತ್ತ ಗುರುವಾರ ಪಾವಗಡಕ್ಕೆ ಅಗಮಿಸಿದ್ದ ರಾಜ್ಯ ಜೆಡಿಎಸ್‌ ಯುವ ಘಟಕದ ಅಧ್ಯಕ್ಷರಾದ ನಿಖಿಲ್‌ ಕುಮಾರಸ್ವಾಮಿ ಅವರನ್ನು ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ,ಜಿಲ್ಲಾಧ್ಯಕ್ಷ ಆರ್‌.ಸಿ.ಅಂಜಿನಪ್ಪ ತಾಲೂಕು ಜೆಡಿಎಸ್‌ ಅಧ್ಯಕ್ಷ ಎನ್‌.ಎ.ಈರಣ್ಣ,ಬಲರಾಮರೆಡ್ಡಿ ರಾಜಶೇಖರಪ್ಪ ಇತರೆ ಮುಖಂಡರು ಸ್ವಾಗತಿಸಿ ಬರಮಾಡಿಕೊಂಡರು.    | Kannada Prabha

ಸಾರಾಂಶ

ಆಪರೇಷನ್‌ ಸಿಂದೂರದ ಮೂಲಕ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಸರಿಯಾದ ಪಾಠ ಕಲಿಸಿದ್ದ ಗುರುವಾರ ತಾಲೂಕು ಬಿಜೆಪಿ ಹಾಗೂ ಜೆಡಿಎಸ್‌ ಘಟಕದ ನೂರಾರು ಮಂದಿ ಕಾರ್ಯಕರ್ತರು ತಿರಂಗ ಯಾತ್ರೆ ನಡೆಸಿ ಭಾರತದ ಸೇನೆಗೆ ಅಭಿನಂದನೆ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಪಾವಗಡ ಆಪರೇಷನ್‌ ಸಿಂದೂರದ ಮೂಲಕ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಸರಿಯಾದ ಪಾಠ ಕಲಿಸಿದ್ದ ಗುರುವಾರ ತಾಲೂಕು ಬಿಜೆಪಿ ಹಾಗೂ ಜೆಡಿಎಸ್‌ ಘಟಕದ ನೂರಾರು ಮಂದಿ ಕಾರ್ಯಕರ್ತರು ತಿರಂಗ ಯಾತ್ರೆ ನಡೆಸಿ ಭಾರತದ ಸೇನೆಗೆ ಅಭಿನಂದನೆ ಸಲ್ಲಿಸಿದರು.

ಸಂಜೆ 5ಗಂಟೆಗೆ ಪಟ್ಟಣದ ಟೋಲ್‌ಗೇಟ್‌ ಬಳಿ ಜಮಾಯಿಸಿದ ದೇಶ ಭಕ್ತರು, ಇಲ್ಲಿನ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆಗೆ ಮಾರ್ಲಾಪಣೆ ಸಲ್ಲಿಸಿ ಭಾರತ ಸೇನೆ ಪರ ಜೈಕಾರ ಮೊಳಗಿಸಿದರು. ಬಳಿಕ ಬಳ್ಳಾರಿ ರಸ್ತೆ ಮೂಲಕ ಎಸ್‌ಎಸ್‌ಕೆ ವೃತ್ತದವರೆವಿಗೆ ತಿರಂಗಯಾತ್ರೆ ನಡೆಸಿದ ಎರಡು ಪಕ್ಷದ ಕಾರ್ಯಕರ್ತರು, ಜೈ ಭಾರತ ಎಂಬ ಘೋಷಣೆ ಮೊಳಗಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತದ ಸೇನೆಗೆ ಅಭಿನಂದನೆ ಸಲ್ಲಿಸಿದರು.

ಇದೇ ವೇಳೆ ಶ್ರಿಶನೇಶ್ವರಸ್ವಾಮಿ ವೃತ್ತದ ಬಳಿ ಈ ಭಾಗದ ಚಿತ್ರದುರ್ಗ ಲೋಕಸಭಾ ಸಂಸದರಾದ ಗೋವಿಂದ ಎಂ.ಕಾರಜೋಳ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ, ಪದೇ ಪದೇ ಅಕ್ರಮ ದಾಳಿ ನಡೆಯುವ ಮೂಲಕ ಭಾರತಕ್ಕೆ ಹಾನಿ ಮಾಡುತ್ತಿದ್ದ ಪಾಕಿಸ್ತಾನಕ್ಕೆ ಪ್ರಧಾನಿ ನೇತೃತ್ವದ ಭಾರತ ಸೇನೆ ಸರಿಯಾದ ಪಾಠ ಕಲಿಸಿದೆ. ಪ್ರಧಾನಿ ತೆಗೆದುಕೊಂಡ ನಿರ್ಣಯ ಅತ್ಯಂತ ಸೂಕ್ತವಾದ ನಿರ್ಧಾರವಾಗಿದೆ. ಪಾಕಿಸ್ತಾನದ ಭಯೋತ್ಪಾದಕರನ್ನು ಮಟ್ಟ ಹಾಕಿ ಭಾರತದ ಶಕ್ತಿ ಏನು ಎಂಬುವುದು ಸಾಬೀತುಪಡಿಸಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಮಾತನಾಡಿ, ಪಾಕಿಸ್ತಾನ ಭಯೋತ್ಪಾದಕರ ವಿರುದ್ಧ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಭಾರತ ಸೇನೆ ತೆಗೆದುಕೊಂಡ ನಿರ್ಣಯ ಅತ್ಯಂತ ಸೂಕ್ತವಾಗಿದೆ. ವಿಶ್ವದಲ್ಲಿ ಭಾರತ ಶಕ್ತಿಯುತ ರಾಷ್ಟ್ರವಾಗಿ ಹೊರಹೊಮ್ಮಿದ್ದು ಸಂತಸಕರ ವಿಚಾರ. ಪ್ರಧಾನಿ ಮೋದಿ ಹಾಗೂ ಪಾಕಿಸ್ತಾನ ಮಟ್ಟಹಾಕಲು ಸರಿಯಾದ ದಿಕ್ಕಿನಲ್ಲಿ ಹೋರಾಟ ನಡೆಸಿದ್ದ ಭಾರತದ ಸೇನೆಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಇದೇ ವೇಳೆ ಮಧುಗಿರಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಹನುಮಂತೇಗೌಡ, ಸಮಾಜ ಸೇವಕ ನಾಗೇಂದ್ರಕುಮಾರ್‌, ಕೊರಟಗೆರೆ ಅನಿಲ್‌ಕುಮಾರ್‌,ಜಿಲ್ಲಾ ಬಿಜೆಪಿ ರೈತಮೋರ್ಚಾ ಪ್ರಧಾನ ಕಾರ್ಯದರ್ಶಿ ಪಾವಗಡದ ಪುರುಷೋತ್ತಮಗೌಡ, ಪಾಕಿಸ್ತಾನದ ವಿರುದ್ಧ ಭಾರತ ಸೇನೆಯ ಕೈಗೊಂಡಿದ್ದ ನಿರ್ಣಯ ಹಾಗೂ ಧ್ವಂಸದ ನಿಲುವಿನ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು.

ತಾಲೂಕು ಬಿಜೆಪಿ ಅಧ್ಯಕ್ಷ ಅಶೋಕ್‌ , ಡಾ.ಜಿ.ವೆಂಕಟರಾಮಯ್ಯ,ಮೆಡಿಕಲ್‌ ದೇವರಾಜ್‌,ಮುರಳಿ ನೆಲಗಾನಹಳ್ಳಿ ಮಂಜುನಾಥ್‌ ಹಾಗೂ ಇತರೆ ನೂರಾರು ಮಂದಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ