ಹುಬ್ಬಳ್ಳಿ:
ಇಲ್ಲಿನ ಅಮರಗೋಳದ ಎಪಿಎಂಸಿ ಪ್ರಾಂಗಣದಲ್ಲಿನ ವಿವಿಧೋದ್ದೇಶ ವಸ್ತು ಪ್ರದರ್ಶನದಲ್ಲಿ ದಶಕದ ನಂತರ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ (ಕೆಸಿಸಿಐ) ಆಯೋಜಿಸಿರುವ ಇನ್ಕಾಮೆಕ್ಸ್-2026 ಉದ್ಘಾಟಿಸಿ ಅವರು ಮಾತನಾಡಿದರು.
ಜಾಗತಿಕ ಮಟ್ಟದಲ್ಲಿ ಸಾಕಷ್ಟು ಅಸ್ಥಿರತೆ ಇದೆ. ಅತ್ತ ಮಧ್ಯಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆಯುತ್ತಿದೆ. ರಷ್ಯಾ ಮತ್ತು ಉಕ್ರೇನ್ ಮಧ್ಯೆ ಸಂಘರ್ಷವಿದೆ. ಇವೆಲ್ಲವೂ ಇಂಧನ ಪೂರೈಕೆ ಮತ್ತು ಪೂರೈಕೆ ಸರಪಳಿಗಳಿಗೆ ಅಡ್ಡಿಪಡಿಸಿವೆ. ಆದರೂ ಭಾರತದಲ್ಲಿ ಒಂದೇ ಒಂದು ಪೆಟ್ರೋಲ್ ಪಂಪ್ ಕೂಡ ಖಾಲಿಯಾಗಿಲ್ಲ. ಇದು ನಮ್ಮ ವ್ಯವಸ್ಥೆಗಳ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ. ಜಾಗತಿಕ ಅಸ್ಥಿರತೆ ಹೊರತಾಗಿಯೂ ದೇಶಾದ್ಯಂತ ನಿರಂತರ ಇಂಧನ ಪೂರೈಕೆಯಾಗುತ್ತಿದೆ ಎಂದರು.ಭಾರತವು ನಾಲ್ಕು ಟ್ರಿಲಿಯನ್ ಆರ್ಥಿಕತೆ ಹೊಂದಿದ ದೇಶವಾಗಿ ಹೊರಹೊಮ್ಮುತ್ತಿದೆ. ಇದು ಆರ್ಥಿಕ ಸದೃಢತೆಯ ಲಕ್ಷಣ ಎಂದ ಸಚಿವರು, ಉತ್ಪಾದನಾ ಆಧಾರಿತ ಪ್ರೋತ್ಸಾಹಕ ಯೋಜನೆಯ ಯಶಸ್ಸು ಎಂದು ನುಡಿದರು.
ಉಕ ಮೇಲೆ ಗಮನ:
ಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಗಳು ಪ್ರಗತಿಯಲ್ಲಿವೆ ಮತ್ತು ಹುಬ್ಬಳ್ಳಿ-ಧಾರವಾಡ ಪ್ರಮುಖ ಕೇಂದ್ರವಾಗಿ ಹೊರಹೊಮ್ಮುವ ನಿರೀಕ್ಷೆಯಿದೆ. ಹೆಚ್ಚುವರಿಯಾಗಿ ಜಾಗತಿಕ ಸ್ಪರ್ಧಾತ್ಮಕತೆಯನ್ನು ಸುಧಾರಿಸಲು 2035ರ ವೇಳೆಗೆ ಲಾಜಿಸ್ಟಿಕ್ಸ್ ವೆಚ್ಚವನ್ನು ಶೇ. 12ರಿಂದ ಶೇ. 6ಕ್ಕೆ ಇಳಿಸಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
ಮಾರ್ಗದರ್ಶನ ಅಗತ್ಯ:
ಬಿಯಾಂಡ್ ಬೆಂಗಳೂರು ಎಂದಾಕ್ಷಣ ಹುಬ್ಬಳ್ಳಿ-ಧಾರವಾಡ ಎನ್ನಲಾಗುತ್ತದೆ. ಆದರೆ, ಇಲ್ಲಿನ ಕೈಗಾರಿಕೆ ಪ್ರದೇಶದಲ್ಲಿ ಭೂ ಬೆಲೆ ಜಾಸ್ತಿ ಇದೆ ಎನ್ನಲಾಗುತ್ತಿದೆ. ಆದರೆ, ಹುಬ್ಬಳ್ಳಿ-ಧಾರವಾಡ ಸುತ್ತ ನವಲಗುಂದ, ಕುಂದಗೋಳ, ಹಾವೇರಿ, ಗದಗ ಸೇರಿದಂತೆ ಹತ್ತಾರು ಕಡೆಗಳಲ್ಲಿ ಕೈಗಾರಿಕೆ ಸ್ಥಾಪನೆಗೆ ಅವಕಾಶವಿದೆ. ಹೀಗಾಗಿ ಇದನ್ನು ಕೈಗಾರಿಕೋದ್ಯಮಿಗಳಿಗೆ ಮನವರಿಕೆ ಮಾಡುವ ಕೆಲಸವನ್ನು ಸರ್ಕಾರ ಮತ್ತು ಕೆಸಿಸಿಐಗಳಂತಹ ಸಂಸ್ಥೆಗಳು ಮಾಡಬೇಕು ಎಂದು ಕರೆ ನೀಡಿದರು.
ಶಾಸಕರಾದ ಮಹೇಶ ಟೆಂಗಿನಕಾಯಿ, ಎನ್.ಎಚ್. ಕೋನರಡ್ಡಿ, ಎಸ್.ವಿ. ಸಂಕನೂರ, ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ, ಕೆಎಲ್ ಸಂಸ್ಥೆ ಮಾಜಿ ನಿರ್ದೇಶಕ ಶಂಕರಣ್ಣ ಮುನವಳ್ಳಿ, ಕಾರ್ಯಕ್ರಮದಲ್ಲಿ ಕೆಸಿಸಿಐ ಅಧ್ಯಕ್ಷ ಜಿ.ಕೆ. ಆದಪ್ಪಗೌಡರ, ಮಹದೇವ ಕರಮರಿ, ರವಿ ಅಂಗಡಿ, ಪ್ರಕಾಶ ಶೃಂಗೇರಿ, ಸಿದ್ದೇಶ್ವರ ಕಮ್ಮಾರ, ಶಶಿಧರ ಶೆಟ್ಟರ, ಉದಯ ರೇವಣಕರ, ವೀರಣ್ಣ ಕಲ್ಲೂರ, ಜಯಪ್ರಕಾಶ ತೆಂಗಿನಕಾಯಿ, ಪಿ.ಕೆ. ಮುದಗಲ್, ಎಂ.ಸಿ. ಹಿರೇಮಠ, ಲಿಂಗನಗೌಡರ ಸೇರಿದಂತೆ ಇತರರು ಇದ್ದರು.