ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಬಿಎಲ್ಡಿಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಶನಿವಾರ ನಡೆದ 12ನೇ ಘಟಿಕೋತ್ಸವದಲ್ಲಿ ಅವರು ಭಾಷಣ ಮಾಡಿದರು. ಭಾರತದಲ್ಲಿ ಹೇರಳವಾದ ಪ್ರಾಕೃತಿಕ ಮತ್ತು ಮಾನವ ಸಂಪನ್ಮೂಲವಿದೆ. ಪ್ರಾಚೀನ ಭಾರತದ ಆರ್ಯಭಟರಿಂದ ಹಿಡಿದು ಶಲ್ಯರವರೆಗೆ ಮತ್ತು ಇಂದಿನ ಯುವ ವೃತ್ತಿಪರ, ಪ್ರಾಮಾಣಿಕ ಮತ್ತು ಕೌಶಲ್ಯಯುತ ಯುವಕರು ದೇಶದ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡುತ್ತಿದ್ದಾರೆ. ನಮ್ಮ ದೇಶದಲ್ಲಿ ಮೂಲಭೂತ ಸೌಕರ್ಯಗಳು ಹೆಚ್ಚಾಗುತ್ತಿರುವ ಪರಿಣಾಮ ಇಲ್ಲಿಗೆ ಹೂಡಿಕೆ ಮಾಡಲು ವಿದೇಶಿಗರೂ ಉಳಿದ ದೇಶಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ ಎಂದರು.ಭಾರತ ಈಗ ಪ್ರತಿಯೊಂದು ಕ್ಷೇತ್ರಗಳಲ್ಲಿ ಅಭಿವೃದ್ಧಿಯಾಗುತ್ತಿದ್ದು, ಜಗತ್ತಿಗೆ ನಾನಾ ವಸ್ತುಗಳನ್ನು ಸರಬರಾಜು ಮಾಡುವಲ್ಲಿ ಮುಂಚೂಣಿಯಲ್ಲಿದೆ. ಇಲ್ಲಿರುವ ವೈದ್ಯಕೀಯ ಶಿಕ್ಷಣ, ಆರೋಗ್ಯ ಸೇವೆಗಳು, ಹೂಡಿಕೆಗಳಿಗೆ ಇರುವ ಅವಕಾಶಗಳನ್ನು ಹಾಗೂ ವಿದೇಶಿಗರನ್ನು ಆಕರ್ಷಿಸುತ್ತಿದ್ದು, ಶೀಘ್ರದಲ್ಲಿ ಭಾರತ ಜಗತ್ತಿನ ವೈದ್ಯಕೀಯ ಮತ್ತು ಉತ್ಪಾದನೆ ಕ್ಷೇತ್ರಗಳ ಹಬ್ ಆಗಲಿದೆ ಎಂದು ಭರವಸೆ ನೀಡಿದರು.
ಉತ್ತರ ಕರ್ನಾಟಕದಲ್ಲಿ ವಿಜಯಪುರದ ಬಿಎಲ್ಡಿಇ ಸಂಸ್ಥೆಯನ್ನು ಕಟ್ಟಿದ ಡಾ.ಫ.ಗು.ಹಳಕಟ್ಟಿ, ಬಂಥನಾಳ ಶ್ರೀಗಳು, ಬಿ.ಎಂ.ಪಾಟೀಲರು ಮತ್ತು ಈಗ ಅಧ್ಯಕ್ಷರಾಗಿರುವ ಎಂ.ಬಿ.ಪಾಟೀಲರು ಈ ಭಾಗದಲ್ಲಿ ಶಿಕ್ಷಣ ಕ್ರಾಂತಿ ಮಾಡಿದ್ದಾರೆ. ಸಚಿವ ಎಂ.ಬಿ.ಪಾಟೀಲ ಅವರ ಕೆಲಸಗಳು ಜನಮೆಚ್ಚುಗೆಗೆ ಪಾತ್ರವಾಗಿವೆ. ಅಲ್ಲದೇ, ಈ ಶಿಕ್ಷಣ ಸಂಸ್ಥೆಯಲ್ಲಿ ಓದಿರುವ ಜನ ನಾನಾ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಲು ಅವರು ಕಾರಣರಾಗಿದ್ದಾರೆ. ಮುಂಬರುವ ದಿನಗಳಲ್ಲಿ ಬಿಎಲ್ಡಿಇ ಡೀಮ್ಡ್ ವಿಶ್ವವಿದ್ಯಾಲಯ ವಿಶ್ವದ ಶ್ರೇಷ್ಠ ವಿದ್ಯಾಲಯಗಳಲ್ಲಿ ಒಂದಾಗಲಿ. ಇಲ್ಲಿನ ಕ್ರೀಡಾಪಟುಗಳು ಓಲಂಪಿಕ್ಸ್ನಲ್ಲಿ ಪ್ರತಿನಿಧಿಸಿ ಬಸವನಾಡಿನ ಕೀರ್ತಿಯನ್ನು ಬೆಳಗುವಂತಾಗಲಿ ಎಂದು ಹಾರೈಸಿದರು.ಗೌರವ ಡಾಕ್ಟರೆಟ್ ಪ್ರದಾನ:
ಇಬ್ಬರಿಗೆ 11 ಚಿನ್ನದ ಪದಕ:
ಈ ವೇಳೆ ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ, ವಿವಿ ಸಮಕುಲಾಧಿಪತಿ ಡಾ.ವೈ.ಎಂ.ಜಯರಾಜ, ಕುಲಪತಿ ಡಾ.ಆರ್.ಎಸ್.ಮುಧೋಳ, ಸಮಕುಲಪತಿ ಡಾ.ಅರುಣ ಇನಾಮದಾರ, ಕಾಲೇಜಿನ ಪ್ರಾಚಾರ್ಯ ಡಾ.ಅರವಿಂದ ಪಾಟೀಲ, ರಿಜಿಸ್ಟ್ರಾರ್ ಡಾ.ಆರ್.ವಿ.ಕುಲಕರ್ಣಿ, ವೈದ್ಯಕೀಯ ನಾನಾ ವಿಭಾಗಗಳ ಡಾ.ತೇಜಸ್ವಿನಿ ವಲ್ಲಭ, ಡಾ.ಎಸ್.ವಿ.ಪಾಟೀಲ, ಡಾ.ಚಂದ್ರಿಕಾ ದೊಡ್ಡಿಹಾಳ, ಡಾ.ಎಸ್.ಎಸ್.ದೇವರಮನಿ, ಡಾ.ಮಲ್ಲಪ್ಪ ಹುಗ್ಗಿ, ಡಾ.ಲತಾದೇವಿ, ವಿದ್ಯಾರ್ಥಿಗಳು, ಪಾಲಕರು ಉಪಸ್ಥಿತರಿದ್ದರು.
ಕೋಟ್.....
- ಪ್ರಹ್ಲಾದ್ ಜೋಶಿ, ಕೇಂದ್ರ ಸಚಿವ