ಸೇಡಂನಲ್ಲಿ ಜರುಗುವ ಭಾರತೀಯ ಸಂಸ್ಕೃತಿ ಉತ್ಸವ ಕಣ್ತುಂಬಿಕೊಳ್ಳಿ

KannadaprabhaNewsNetwork |  
Published : Jan 14, 2025, 01:01 AM IST
ನಗರದ ರಾಘವ ಕಲಾಮಂದಿರದಲ್ಲಿ ಕಲ್ಯಾಣ ಕರ್ನಾಟಕ ವಿಕಾಸ ಅಕಾಡೆಮಿಯಿಂದ ಹಮ್ಮಿಕೊಂಡಿದ್ದ ಖ್ಯಾತ ಜಾದೂಗಾರ ಕುದ್ರೋಳಿ ಗಣೇಶ್ ಅವರ ಜಾದೂ ಪ್ರದರ್ಶನಕ್ಕೆ ಚೈತನ್ಯ ವಿದ್ಯಾಸಂಸ್ಥೆಯ ಡಾ.ರಾಧಾಕೃಷ್ಣ ಚಾಲನೆ ನೀಡಿದರು.  | Kannada Prabha

ಸಾರಾಂಶ

ಕಲೆ, ವೈದ್ಯಕೀಯ, ಸಾಂಸ್ಕೃತಿಕ ನೆಲೆಗಳನ್ನು ಆಧುನಿಕ ಜಗತ್ತಿಗೆ ಪರಿಚಯಿಸುವ ಅದ್ಭುತ ಕಾರ್ಯಕ್ರಮವಾಗಿದೆ.

ಬಳ್ಳಾರಿ: ಕಲ್ಯಾಣ ಕರ್ನಾಟಕದ ಸೇಡಂನಲ್ಲಿ ಜನವರಿ ಕೊನೆಯಲ್ಲಿ ಆರಂಭವಾಗುವ ಭಾರತೀಯ ಸಂಸ್ಕೃತಿ ಉತ್ಸವವು ಕೃಷಿ, ತಂತ್ರಜ್ಞಾನ, ಕಲೆ, ವೈದ್ಯಕೀಯ, ಸಾಂಸ್ಕೃತಿಕ ನೆಲೆಗಳನ್ನು ಆಧುನಿಕ ಜಗತ್ತಿಗೆ ಪರಿಚಯಿಸುವ ಅದ್ಭುತ ಕಾರ್ಯಕ್ರಮವಾಗಿದೆ. ಇದರಲ್ಲಿ ಹೆಚ್ಚು ಜನರು ಪಾಲ್ಗೊಳ್ಳುವಂತಾಗಬೇಕು ಎಂದು ಚೈತನ್ಯ ವಿದ್ಯಾಸಂಸ್ಥೆಯ ಮಾಲೀಕ ಡಾ.ರಾಧಾಕೃಷ್ಣ ತಿಳಿಸಿದರು.ನಗರದ ರಾಘವ ಕಲಾಮಂದಿರದಲ್ಲಿ ಕಲ್ಯಾಣ ಕರ್ನಾಟಕ ವಿಕಾಸ ಅಕಾಡೆಮಿಯಿಂದ ಹಮ್ಮಿಕೊಂಡಿರುವ ಅಂತರಾಷ್ಟ್ರೀಯ ಖ್ಯಾತಿಯ ಜಾದೂಗಾರ ಕುದ್ರೋಳಿ ಗಣೇಶ್ ಅವರ ಜಾದೂ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ವಿವಿಧ ದೇಶಗಳ ತಜ್ಞರು, ವಿದ್ವಾಂಸರು ಕಲಾವಿದರು, ಕೃಷಿಕರು, ವಿಜ್ಞಾನಿಗಳು ಭಾಗವಹಿಸಲಿದ್ದಾರೆ. ಅದನ್ನು ನೋಡುವುದೇ ಒಂದು ಭಾಗ್ಯ ವಾಗಿದೆ. ಅಪರೂಪವಾಗಿ ಜರುಗುವ ಇಂತಹ ಉತ್ಸವಗಳಲ್ಲಿ ಪಾಳ್ಗೊಂಡು ಇಡೀ ಉತ್ಸವದ ಸಂಭ್ರಮವನ್ನು ಕಣ್ತುಂಬಿಕೊಳ್ಳುವಂತಾಗಬೇಕು. ಭಾರತೀಯ ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಲು ಯುವ ಸಮುದಾಯದ ಹೆಚ್ಚಾಗಿ ಭಾಗವಹಿಸಬೇಕು ಎಂದು ಹೇಳಿದರು.

ಮಾಜಿ ಮೇಯರ್ ಪಾರ್ವತಿ ಇಂದುಶೇಖರ್ ಮಾತನಾಡಿ, ಭಾರತೀಯ ಪರಂಪರೆ ಹಾಗೂ ಸಂಸ್ಕೃತಿ ಅರಿಯುವುದು ಬಹಳ ಅಗತ್ಯವಿದೆ. ಪಾಶ್ಚಾತ್ಯ ದೇಶಗಳು ಇಂದು ಭಾರತೀಯ ಸಂಸ್ಕೃತಿಯನ್ನು ಅಳವಡಿಸಿಕೊಳ್ಳುತ್ತಿರುವುದು ಕಂಡು ಬರುತ್ತದೆ. ಆದರೆ, ನಮ್ಮಲ್ಲಿ ಪಾಶ್ಚಾತ್ಯ ಸಂಸ್ಕೃತಿಗೆ ಮಾರುಹೋಗುತ್ತಿರುವುದು ತೀವ್ರ ಬೇಸರ ಮೂಡಿಸುತ್ತಿದೆ ಎಂದರಲ್ಲದೆ, ಸೇಡಂನಲ್ಲಿ ಜ.28ರಿಂದ ಫೆ.6ರವರೆಗೆ ಜರುಗುವ ಉತ್ಸವದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಿ ಎಂದು ಕರೆ ನೀಡಿದರು.

ಖ್ಯಾತ ಜಾದೂಗಾರ ಕುದ್ರೋಳಿ ಗಣೇಶ್, ಭಾರತೀಯ ಸಂಸ್ಕೃತಿ ಉತ್ಸವ ಮಹತ್ವ ತಿಳಿಸಿದರಲ್ಲದೆ, ಉತ್ಸವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಜಾಗೃತಿ ಜೂದೂ ಕಾರ್ಯಕ್ರಮ ರಾಜ್ಯದ ನಾನಾ ಕಡೆ ಆಯೋಜಿಸಲಾಗಿದೆ. ಬಳ್ಳಾರಿ ಸೇರಿದಂತೆ ಎಲ್ಲ ಕಡೆ ಉತ್ತಮ ಸ್ಪಂದನೆ ಬಂದಿರುವುದು ಸಂತಸ ತಂದಿದೆ ಎಂದು ಹೇಳಿದರು.

ಪತಂಜಲಿ ಯೋಗ ಸಮಿತಿಯ ಅಧ್ಯಕ್ಷ ಇಸ್ವಿ ಪಂಪಾಪತಿ, ಪ್ರಾಂಶುಪಾಲ ಸಂಘದ ಅಧ್ಯಕ್ಷ ಶ್ರೀಶೈಲ ಉಪಸ್ಥಿತರಿದ್ದರು.

ಕಾರ್ಯಕ್ರಮ ಶುರುಮುನ್ನ ಜಡೇಶ್ ಎಮ್ಮಿಗನೂರು ತಂಡ ಭಾವಗೀತೆಗಳನ್ನು ಪ್ರಸ್ತುತಪಡಿಸಿತು. ಕುಮಾರಿ ಕಾವ್ಯ ಅವರ ನೃತ್ಯ ಪ್ರದರ್ಶನ ಗಮನ ಸೆಳೆಯಿತು.

ಅಡವಿಸ್ವಾಮಿ ಹಾಗೂ ವೆಂಕಟೇಶ ಬಡಿಗೇರ ಕಾರ್ಯಕ್ರಮ ನಿರ್ವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ