ಭಾರತೀಯ ಚಿತ್ರರಂಗದ ಮೇರು ನಟ ಡಾ. ರಾಜ್‌ಕುಮಾರ್: ಟಿ.ಬಿ. ಹರಿಕಾಂತ

KannadaprabhaNewsNetwork |  
Published : Apr 25, 2026, 02:45 AM IST
ಕಾರವಾರ ನಗರದ ಸಾಮಾಜಿಕ ಅರಣ್ಯ ವಿಭಾಗದ ಸಭಾಂಗಣದಲ್ಲಿ ಶುಕ್ರವಾರ ಡಾ. ರಾಜ್‌ಕುಮಾರ್ ಅವರ 97ನೇ ಜನ್ಮ ದಿನಾಚರಣೆ ನಡೆಯಿತು. | Kannada Prabha

ಸಾರಾಂಶ

ಕಾರವಾರ ನಗರದ ಸಾಮಾಜಿಕ ಅರಣ್ಯ ವಿಭಾಗದ ಸಭಾಂಗಣದಲ್ಲಿ ಶುಕ್ರವಾರ ಡಾ. ರಾಜ್‌ಕುಮಾರ್ ಅವರ 97ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ವರನಟ ಡಾ. ರಾಜಕುಮಾರ್ ಕನ್ನಡ ಅಭಿಮಾನಿಗಳ ಸಂಘದ ಅಧ್ಯಕ್ಷ ಟಿ.ಬಿ. ಹರಿಕಾಂತ ಉದ್ಘಾಟಿಸಿದರು.

ಕಾರವಾರ: ಭಾರತೀಯ ಚಿತ್ರರಂಗಕ್ಕೆ ಡಾ. ರಾಜಕುಮಾರ ಕೊಡುಗೆ ಅಪಾರವಾಗಿದ್ದು, ಅವರು ಭಾರತೀಯ ಚಿತ್ರರಂಗದ ಮೇರು ನಟ ಎಂದು ವರನಟ ಡಾ. ರಾಜಕುಮಾರ್ ಕನ್ನಡ ಅಭಿಮಾನಿಗಳ ಸಂಘದ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಟಿ.ಬಿ. ಹರಿಕಾಂತ ಹೇಳಿದರು.

ನಗರದ ಸಾಮಾಜಿಕ ಅರಣ್ಯ ವಿಭಾಗದ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾದ ಡಾ. ರಾಜ್‌ಕುಮಾರ್ ಅವರ 97ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಡಾ. ರಾಜ್‌ಕುಮಾರ್ ಅವರು ಸೌಮ್ಯ ಸ್ವಭಾವ ಮತ್ತು ಮಾನವೀಯತೆ ಗುಣಗಳನ್ನು ಹೊಂದಿದ್ದ ಅಪರೂಪದ ಕಲಾ ಪ್ರತಿಭೆ. ಇಂತಹ ವ್ಯಕ್ತಿತ್ವ ಹೊಂದಿರುವ ಮತ್ತೊಬ್ಬ ನಟನನ್ನು ಕಾಣಲು ಸಾಧ್ಯವಿಲ್ಲ ಎಂದು ಹೇಳಿದರು.

ಕನ್ನಡ ಚಿತ್ರರಂಗಕ್ಕೆ 1954ರಲ್ಲಿ ಪದಾರ್ಪಣೆ ಮಾಡಿ 2006ರ ವರೆಗೆ 200ಕ್ಕೂ ಹೆಚ್ಚು ಚಿತ್ರದಲ್ಲಿ ಅಭಿನಯಿಸುವ ಮೂಲಕ ಕನ್ನಡ ಚಿತ್ರರಂಗದ ಹೆಸರನ್ನು ದೇಶಾದ್ಯಂತ ಪರಿಚಯಿಸಿದ ಡಾ. ರಾಜಕುಮಾರ್, ನಟನೆ ಮತ್ತು ಗಾಯನದಲ್ಲಿ ಪ್ರೌಢತೆಯನ್ನು ಸಾಧಿಸಿದ ಭಾರತೀಯ ಚಿತ್ರರಂಗದ ಏಕೈಕ ನಟ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಾಮಾಜಿಕ ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗಜಾನನ ಹೆಗಡೆ, ಮೇರು ನಟ, ಎಂದೆಂದಿಗೂ ಅಚ್ಚಳಿಯದೇ ಮನದಲ್ಲಿ ಉಳಿದಿರುವ ನಟ, ಡಾ. ರಾಜ್‌ಕುಮಾರ್ ತಮ್ಮ ಜೀವನದ್ದೂಕ್ಕೂ ಯಾವುದೇ ಕಪ್ಪುಚುಕ್ಕೆ ಇಲ್ಲದೇ ಜೀವನ ನಡೆಸಿದ ಮಹಾನ್ ವ್ಯಕ್ತಿ ಎಂದರು.

ಹಿರಿಯ ಪರ್ತಕರ್ತ ಪ್ರಮೋದ ಹರಿಕಾಂತ ಡಾ. ರಾಜ್ ಕುಮಾರ್ ಕುರಿತು ವಿಶೇಷ ಉಪನ್ಯಾಸ ನೀಡಿ, ರಾಜಕುಮಾರ ಕರ್ನಾಟಕದ ಜನತೆಯ ಮೆಚ್ಚುಗೆ ಪಡೆದ ಮೇರು ನಟ. ಅವರ ಸೌಮ್ಯ ಸ್ವಭಾವ, ಅಭಿನಯ ಗಾಂಭೀರ್ಯತೆ, ಕನ್ನಡ ಚಿತ್ರರಂಗದ ಅಭಿಮಾನಿಗಳ ಮನಸೂರೆಗೊಂಡಿತು. ನಟನೆ ಮತ್ತು ಸಂಗೀತದಲ್ಲಿ ರಾಷ್ಟ್ರ ಪ್ರಶಸ್ತಿ ಪಡೆದ ಹಾಗೂ ಅಮೆರಿಕದಲ್ಲಿ ಸಂಗೀತ ರಸಮಂಜರಿ ನೀಡಿದ ಏಕೈಕ ನಟ ಡಾ. ರಾಜ್‌ಮಾರ್ ಎಂದರು.

ವೈಶಾಲಿ ಮಾಂಜ್ರೇಕರ್ ಮೆಲೋಡಿ ವಾಯ್ಸ್ ತಂಡದಿಂದ ಡಾ. ರಾಜ್‌ಕುಮಾರ್ ಅಭಿನಯದ ಚಿತ್ರಗಳಲ್ಲಿನ ಗೀತೆಗಳ ಗಾಯನ ಕಾರ್ಯಕ್ರಮ ಜರುಗಿತು.

ಜಿಲ್ಲಾಧಿಕಾರಿ ಕಚೇರಿಯ ಚುನಾವಣೆ ಶಾಖೆಯ ತಹಸೀಲ್ದಾರ್‌ ಪ್ರಮೋದ ನಾಯ್ಕ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಬಿ. ಶಿವಕುಮಾರ, ಕನ್ನಡಪ್ರಭ ಪತ್ರಿಕೆಯ ಹಿರಿಯ ಪತ್ರಕರ್ತ ವಸಂತಕುಮಾರ ಕತಗಾಲ ಇದ್ದರು. ವನಿತಾ ಶೇಟ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭೂಮಿ ಸಂರಕ್ಷಣೆ ಮಾಡಲು ಪ್ರತಿಯೊಬ್ಬರೂ ಮುಂದಾಗಬೇಕು
ದೇಶ ಜೋಡಿಸುವ ಕಾರ್ಯ ಮಾಡಿದ ಡಾ. ಬಿ.ಆರ್. ಅಂಬೇಡ್ಕರ್‌: ಎನ್. ಮಹೇಶ್