ದಕ್ಷಿಣ ಕ್ಷೇತ್ರದಲ್ಲಿ ಇಂಡಿಯನ್ ಪೊಲಿಟಿಕಲ್ ಕಾಂಗ್ರೆಸ್ ಪಕ್ಷ ಸ್ಪರ್ಧೆ

KannadaprabhaNewsNetwork |  
Published : Feb 28, 2026, 01:30 AM IST
27ಕಡಿವಿಜಿ5-ದಾವಣಗೆರೆಯಲ್ಲಿ ಶುಕ್ರವಾರ ಇಂಡಿಯನ್ ಪೊಲಿಟಿಕಲ್ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಈ.ಆನಂದ, ವಿ.ಉಮಾ, ವಿ.ವಿಜಯಾ ಸುದ್ದಿಗೋಷ್ಟಿಯಲ್ಲಿ ಪಕ್ಷದ ಬಾವುಟ ಪ್ರದರ್ಶಿಸಿದರು. ..........................27ಕಡಿವಿಜಿ6-ದಾವಣಗೆರೆಯಲ್ಲಿ ಶುಕ್ರವಾರ ಇಂಡಿಯನ್ ಪೊಲಿಟಿಕಲ್ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಈ.ಆನಂದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಇಂಡಿಯನ್ ಪೊಲಿಟಿಕಲ್ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಈ.ಆನಂದ ಹೇಳಿದ್ದಾರೆ.

- ಇನ್ನು ಲೋಕಸಭೆ, ವಿಧಾನಸಭೆ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷ ಕಣಕ್ಕೆ: ಈ.ಆನಂದ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಇಂಡಿಯನ್ ಪೊಲಿಟಿಕಲ್ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಈ.ಆನಂದ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕ್ಷೇತ್ರದ ಉಪ ಚುನಾವಣೆಗೆ ನಮ್ಮ ಪಕ್ಷದಿಂದ ಸೂಕ್ತ ಅಭ್ಯರ್ಥಿಯನ್ನೇ ಕಣಕ್ಕಿಳಿಸಲಿದ್ದೇವೆ. ಉಪ ಚುನಾವಣೆಗೆ ಪಕ್ಷದ ಸ್ಪರ್ಧೆಯು ಖಚಿತ ಎಂದರು.

ಈಗಾಗಲೇ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ.ಬಿ. ವಿನಯಕುಮಾರ ಅವರನ್ನು ಸಂಪರ್ಕಿಸಿ, ನಮ್ಮ ಪಕ್ಷಕ್ಕೆ ಬರುವಂತೆ ಆಹ್ವಾನಿಸಿದ್ದೇವೆ. ಪಕ್ಷದ ನೂತನ ಜಿಲ್ಲಾಧ್ಯಕ್ಷ ಈರಣ್ಣ ಸೇರಿದಂತೆ ಇಲ್ಲಿ ಮೂವರು ಆಕಾಂಕ್ಷಿಗಳಿದ್ದಾರೆ. ಮುಂದಿನ ದಿನಗಳಲ್ಲಿ ನಾವೆಲ್ಲರೂ ಸಭೆ ಮಾಡಿ, ಎಲ್ಲ ರೀತಿಯಲ್ಲೂ ಚರ್ಚಿಸಿ, ಅಂತಿಮ ಅಭ್ಯರ್ಥಿಗೆ ದಕ್ಷಿಣ ಉಪ ಚುನಾವಣಾ ಕಣಕ್ಕಿಳಿಸುತ್ತೇವೆ ಎಂದು ಹೇಳಿದರು.

ಇಂಡಿಯನ್ ಪೊಲಿಟಿಕಲ್ ಕಾಂಗ್ರೆಸ್ ಪಕ್ಷವನ್ನು ಒಂದು ವರ್ಷದ ಹಿಂದೆ ಆರಂಭಿಸಿದ್ದೇವೆ. ಪಕ್ಷ ಸ್ಥಾಪಿಸುವ ಮುನ್ನ ಹಲವಾರು ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ್ದೇನೆ. ಪಕ್ಷ ಸಂಘಟನೆ, ಹೋರಾಟದ ವೇಳೆ ಸಿಗುತ್ತಿದ್ದ ಮಾನ್ಯತೆಯು ಚುನಾವಣೆಗೆ ಬಿ ಫಾರಂ ನೀಡುವಾಗ ಇರುತ್ತಿರಲಿಲ್ಲ. ಹಾಗಾಗಿ ರಾಜಕೀಯ ಅವಕಾಶ ವಂಚಿತರಾಗಿರುವವರಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಡುವ ಉದ್ದೇಶದಿಂದ ರಾಜ್ಯವ್ಯಾಪಿ ಪಕ್ಷ ಸಂಘಟನೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೆವು. ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆ, ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಸೇರಿದಂತೆ ಎಲ್ಲ ಹಂತದ ಚುನಾವಣೆಗಳಲ್ಲೂ ನಮ್ಮ ಪಕ್ಷ ಸ್ಪರ್ಧಿಸಲಿದೆ. ವಿಧಾನಸಭೆ, ಲೋಕಸಭೆ ಚುನಾವಣೆ ಮಾತ್ರವಲ್ಲದೇ, ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲೂ ಪಕ್ಷ ಸ್ಪರ್ಧಿಸುತ್ತದೆ ಎಂದು ಈ.ಆನಂದ್ ಸ್ಪಷ್ಟಪಡಿಸಿದರು.

ಪಕ್ಷದ ರಾಜ್ಯಾಧ್ಯಕ್ಷ ಡಾ. ಎಸ್.ಎಸ್. ರೆಡ್ಡರಾ, ಮಹಿಳಾ ವಿಭಾಗದ ರಾಷ್ಟ್ರೀಯ ಅಧ್ಯಕ್ಷೆ ವಿ.ಉಮಾ, ಪ್ರಧಾನ ಕಾರ್ಯದರ್ಶಿ ವಿ.ವಿಜಯಾ, ಜಿಲ್ಲಾಧ್ಯಕ್ಷ ಈರಣ್ಣ, ಪ್ರಶಾಂತ, ಅನಿಲ್ ಇತರರು ಇದ್ದರು.

- - -

-27ಕೆಡಿವಿಜಿ5: ದಾವಣಗೆರೆಯಲ್ಲಿ ಶುಕ್ರವಾರ ಇಂಡಿಯನ್ ಪೊಲಿಟಿಕಲ್ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಈ.ಆನಂದ, ವಿ.ಉಮಾ, ವಿ.ವಿಜಯಾ ಸುದ್ದಿಗೋಷ್ಠಿಯಲ್ಲಿ ಪಕ್ಷದ ಬಾವುಟ ಪ್ರದರ್ಶಿಸಿದರು. -27ಕೆಡಿವಿಜಿ6: ರಾಷ್ಟ್ರೀಯ ಅಧ್ಯಕ್ಷ ಈ.ಆನಂದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರರಿಗೆ ಸಚಿವ ಸ್ಥಾನ ನೀಡಿ
56 ಸಾವಿರ ಹುದ್ದೆಗಳ ಭರ್ತಿ ಹೇಳಿಕೆ ಬಿಜೆಪಿ ಹೋರಾಟದ ಫಲ