ಕನ್ನಡಪ್ರಭ ವಾರ್ತೆ ಅಣ್ಣಿಗೇರಿ
ಪಟ್ಟಣದ ಪುರಸಭೆ ಹತ್ತಿರದಲ್ಲಿರುವ ರೈತ ಸಂಪರ್ಕ ಕೇಂದ್ರ ಬಳಿ ಇಂದಿರಾ ಕ್ಯಾಂಟೀನ್ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಸುಮಾರು ₹87 ಲಕ್ಷ ಅನುದಾನದಲ್ಲಿ ನಿರ್ಮಿಸುತ್ತಿರುವ ಇಂದಿರಾ ಕ್ಯಾಂಟೀನ್ ಬಡವರ, ಜನಸಾಮಾನ್ಯರ ಹಸಿವು ಮುಕ್ತವಾಗಲು ಸಹಕಾರಿಯಾಗಲಿದೆ. ಈಗಾಗಲೇ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದ್ದು, ಚಕ್ಕಡಿ ರಸ್ತೆ ನಿರ್ಮಾಣ ರೈತರಿಗೆ ಹೆಚ್ಚಿನ ಅನಕೂಲವಾಗಿದೆ.ಕ್ಷೇತ್ರವಾರು ಎಚ್.ಎಫ್.ಸಿ. ಅನುದಾನ ₹3 ಕೋಟಿ ವೆಚ್ಚದ ಕಾಮಗಾರಿ ಕೂಡಲೇ ಪ್ರಾರಂಭವಾಗಲಿದೆ. ಬರುವ ದಿನಗಳಲ್ಲಿ ಪಟ್ಟಣಕ್ಕೆ 24*7 ನೀರೊದಗಿಸುವ ಮತ್ತು ಇನ್ನು ಹೆಚ್ಚಿನ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ಮೆಹಬೂಬಿ ನವಲಗುಂದ, ಮಂಜುನಾಥ ಮಾಯಣ್ಣನವರ, ರೈಮಾನಸಾಬ ಹೊರಗಿನಮನಿ, ಜಯಲಕ್ಷ್ಮೀ ಜಕರಡ್ಡಿ, ಖಾದರಸಾಬ ಮುಳಗುಂದ, ತಿಪ್ಪಣ್ಣ ಕೊರವರ, ಮುಖ್ಯಾಧಿಕಾರಿ ವೈ.ಜಿ. ಗದ್ದಿಗೌಡ್ರು ಸೇರಿದಂತೆ ಹಲವರಿದ್ದರು.