ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿ ಸಂಸತ್ತು ಗ್ಘಾಟನೆಗೊಂಡಿತು. ಎಂಜಿಎಂ ಕಾಲೇಜಿನ ನಿವೃತ್ತ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಉಡುಪಿ
ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಹೆತ್ತವರು ಮತ್ತು ಶಿಕ್ಷಕರು ಹೆಚ್ಚಿನ ಉತ್ತೇಜನ ನೀಡಬೇಕಾಗಿದೆ. ಜಾಗತೀಕರಣದ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ವಿಯಾಗಲು ಇಚ್ಛಾ ಶಕ್ತಿ, ಕೌಶಲಾ ಶಕ್ತಿ, ಸಂವಹನ ಶಕ್ತಿ ಅಗತ್ಯ. ಇದನ್ನು ಅಭಿವೃದ್ಧಿಗೊಳಿಸುವಲ್ಲಿ ಇಂತಹ ಪಠ್ಯೇತರ ಚಟುವಟಿಕೆಗಳು ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತದೆ ಎಂದು ಎಂಜಿಎಂ ಕಾಲೇಜಿನ ನಿವೃತ್ತ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಹೇಳಿದರು.
ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿ ಸಂಸತ್ತು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವ ಸಂಸದೀಯ ವ್ಯವಸ್ಥೆ ಸಂವಿಧಾನದ ಆಶಯಗಳ ಕುರಿತಾಗಿ ಅರಿವು ಮೂಡಿಸುವುದು ಇಂದಿನ ಅನಿವಾರ್ಯತೆ ಎಂದು ಅಭಿಪ್ರಾಯಿಸಿದರು.ಶಾಲಾ ಸಂಚಾಲಕ ಕೆ.ಅಣ್ಣಪ್ಪ ಶೆಣೈ ಅಧ್ಯಕ್ಷತೆವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾ ಆಡಳಿತ ಮಂಡಳಿ ಸದಸ್ಯರಾದ ಕೆ.ರತ್ನಾಕರ ಶೆಣೈ, ವಿದ್ಯಾ ಅಮರ ಪೈ, ರಕ್ಷಕ ಶಿಕ್ಷಕ ಸಂಘ ಅಧ್ಯಕ್ಷ ಆತ್ರಾಡಿ ದಿನೇಶ್ ಹೆಗ್ಡೆ, ಉಪಾಧ್ಯಕ್ಷ ಶಶಿಧರ ಕುಂದರ್ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.ಶಾಲಾ ಮುಖ್ಯೇೂಪಾಧ್ಯಾಯ ಕೆ.ವಿನಾಯಕ ಕಿಣಿ ಪ್ರತಿಜ್ಞಾ ವಿಧಿ ಬೇೂಧಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.