ಇಂದ್ರಾಳಿ ಮೇಲು ಸೇತುವೆ 22ರಂದು ಸಂಚಾರಕ್ಕೆ ಮುಕ್ತ: ಕೋಟ ಭರವಸೆ

KannadaprabhaNewsNetwork |  
Published : Sep 13, 2025, 02:05 AM IST
12ಕೋಟ | Kannada Prabha

ಸಾರಾಂಶ

ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಅಂತಿಮ ಹಂತದ ಕೆಲಸಗಳು ನಡೆಯುತ್ತಿದ್ದು 22ರಂದು ವಾಹನ ಸಂಚಾರಕ್ಕೆ ಮುಕ್ತ ಗೊಳಿಸಲಾಗುವುದು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಭರವಸೆ ವ್ಯಕ್ತಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ರಾಷ್ಟ್ರೀಯ ಹೆದ್ದಾರಿ 169 ಎ ಇದರ ಇಂದ್ರಾಳಿ ಮೇಲ್ಸೇತುವೆ ಹಾಗೂ ಕೆಳ ಪರ್ಕಳ ರಸ್ತೆ ಕಾಮಗಾರಿ ಸ್ಥಳಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭ ಮಾತನಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಅಂತಿಮ ಹಂತದ ಕೆಲಸಗಳು ನಡೆಯುತ್ತಿದ್ದು 22ರಂದು ವಾಹನ ಸಂಚಾರಕ್ಕೆ ಮುಕ್ತ ಗೊಳಿಸಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದರು.ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ, ಕೆಳ ಪರ್ಕಳ ರಸ್ತೆ ಸಂಪೂರ್ಣ ಹದಗೆಟ್ಟು ವಾಹನ ಸಂಚಾರ ದುಸ್ತರವಾದ ಹಿನ್ನೆಲೆಯಲ್ಲಿ ಸಂಸದರ ವಿಶೇಷ ಮುತುವರ್ಜಿಯಿಂದ ರಾಷ್ಟ್ರೀಯ ಹೆದ್ದಾರಿ ಇಲಾಖೆ ವಿಶೇಷ ಅನುದಾನ ಒದಗಿಸಿದ್ದು ಅತ್ಯಂತ ವೈಜ್ಞಾನಿಕ ರೀತಿಯಲ್ಲಿ ಕಾಮಗಾರಿ ಸೋಮವಾರದಿಂದ ಆರಂಭಗೊಳ್ಳಲಿದೆ. ಒಂದು ವಾರದ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರು, ವಾಹನ ಸವಾರರು ಸಹಕಾರ ನೀಡುವಂತೆ ಮನವಿ ಮಾಡಿದರು.ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಹೆಚ್ಚುವರಿ ಅಧೀಕ್ಷಕ ಸುಧಾಕರ ನಾಯ್ಕ್, ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್ ಮಂಜುನಾಥ ನಾಯಕ್, ನಗರಸಭಾ ಸದಸ್ಯರಾದ ಸುಮಿತ್ರಾ ನಾಯಕ್, ಗಿರೀಶ್ ಅಂಚನ್, ಅಶೋಕ್ ನಾಯ್ಕ್ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫೆ.೮ರಂದು ಶ್ರೀ ರಾಮಲಿಂಗೇಶ್ವರ ಮಠ ಲೋಕಾರ್ಪಣೆ
ಚಳಿ ಹೆಚ್ಚಿದಂತೆ ಏರುತ್ತಿದೆ ಮೊಟ್ಟೆ ದರ