ಹೊಟ್ಟೆಯಲ್ಲೇ ಮಗು ಸಾವು:ವೈದ್ಯರ ನಿರ್ಲಕ್ಷ್ಯ ಆರೋಪ

KannadaprabhaNewsNetwork |  
Published : Jan 24, 2026, 03:45 AM IST
ಪೊಟೋ: 23ಎಸ್‌ಎಂಜಿಕೆಪಿ06ಶಿವಮೊಗ್ಗದ ಪತ್ರಿಕಾಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ(ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ರಾಜ್ಯ ಸಂಚಾಲಕ ಎಂ. ಗುರುಮೂರ್ತಿ ಮಾತನಾಡಿದರು. | Kannada Prabha

ಸಾರಾಂಶ

ವೈದ್ಯರ ನಿರ್ಲಕ್ಷ್ಯದಿಂದ ತುಂಬು ಗರ್ಭಿಣಿ ಹೊಟ್ಟೆಯಲ್ಲೇ ಮಗು ಸಾವಿಗೀಡಾಗಿದೆ ಎಂದು ವೈದ್ಯರ ವಿರುದ್ಧ ಪೋಷಕರು ಆರೋಪಿಸಿದ್ದಾರೆ.

ಮಡಿಕೇರಿ: ವೈದ್ಯರ ನಿರ್ಲಕ್ಷ್ಯದಿಂದ ತುಂಬು ಗರ್ಭಿಣಿ ಹೊಟ್ಟೆಯಲ್ಲೇ ಮಗು ಸಾಬಿಗೀಡಾಗಿದೆ ಎಂದು ವೈದ್ಯರ ವಿರುದ್ಧ ಪೋಷಕರು ಆರೋಪಿಸಿದ್ದಾರೆ. ಮಡಿಕೇರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ರಾತ್ರಿ ಪಾಳಿಯಲ್ಲಿದ್ದ ವೈದ್ಯರ ವಿರುದ್ಧ ಪೋಷಕರ ಆರೋಪ ಮಾಡಿದ್ದಾರೆ. ಬುಧವಾರ ಸಂಜೆ ಗೋಣಿಕೊಪ್ಪಲು ಸರ್ಕಾರಿ‌ ಆಸ್ಪತ್ರೆಯಿಂದ ಆಗಮಿಸಿದ್ದ ಗರ್ಭಿಣಿ ಸರೋಜ ಗಂಭೀರ ಪರಿಸ್ಥಿತಿಯಲ್ಲಿ ಆಸ್ಪತ್ರೆ ದಾಖಲಾಗಿದ್ದರು. ರಾತ್ರಿ ಪಾಳಿಯಲ್ಲಿದ್ದ ಹಿರಿಯ ವೈದ್ಯರು ಬೆಳಗ್ಗೆವರೆಗೂ ಗರ್ಭಿಣಿಯನ್ನು ಪರೀಕ್ಷಿಸಲಿಲ್ಲ. ಇದರಿಂದಲೇ ಮಗು ಹೊಟ್ಟೆಯಲ್ಲೇ ಮೃತಪಟ್ಟಿದೆ ಎಂದು ಆರೋಪಿಸಿದ್ದಾರೆ. ಸ್ಥಳಕ್ಕೆ ಎಚ್ಒಡಿ ಡಾ. ಸೋಮಶೇಖರ್ ಆಗಮಿಸಿದ ಸಂದರ್ಭ ಪೋಷಕರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ವೈದ್ಯರ ವಿರುದ್ಧ ತನಿಖೆ‌ ಮಾಡಿ ಕ್ರಮ‌ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣಕ್ಕೆ ಸಿದ್ಧಗಂಗಾ ಮಠದ ಕೊಡುಗೆ ಅನನ್ಯ
ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರ ಹಿತ ಕಾಪಾಡಿ