ಅಪಾಯಕಾರಿ ಮರ, ಕೊಂಬೆ ಬಗ್ಗೆ ಮಾಹಿತಿ ಕೊಡಿ: ಪಾಲಿಕೆ

KannadaprabhaNewsNetwork |  
Published : May 18, 2024, 01:34 AM ISTUpdated : May 18, 2024, 08:42 AM IST
ಮರ | Kannada Prabha

ಸಾರಾಂಶ

ನಗರದಲ್ಲಿ ರಸ್ತೆ ಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿಯನ್ನು ಪಾಲಿಕೆ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಬಿಬಿಎಂಪಿ ಕೋರಿದೆ.

ಬೆಂಗಳೂರು :ನಗರದಲ್ಲಿ ರಸ್ತೆ ಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿಯನ್ನು ಪಾಲಿಕೆ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಬಿಬಿಎಂಪಿ ಕೋರಿದೆ.

ಒಣಗಿರುವ ಮರಗಳು ಬುಡ ಸಮೇತ ಬೀಳುತ್ತಿದ್ದು, ಮರಗಳ ಹಸಿ ರೆಂಬೆಗಳು ಸಹ ಗಾಳಿಯಿಂದ ಆಕಸ್ಮಿಕವಾಗಿ ಮುರಿದು ಬೀಳುತ್ತಿರುವುದು ವರದಿಯಾಗುತ್ತಿದೆ. ಇದರಿಂದಾಗಿ ಸಾರ್ವಜನಿಕರಿಗೆ ಹಾಗೂ ಆಸ್ತಿ ಪಾಸ್ತಿಗೆ ಹಾನಿಯಾಗುತ್ತಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಈಗಾಗಲೇ ರಸ್ತೆ ಬದಿ, ಸರ್ಕಾರಿ ಜಾಗಗಳಲ್ಲಿ ಒಣಗಿರುವ, ಅಪಾಯ ಸ್ಥಿತಿಯ ಮರಗಳು ಹಾಗೂ ಒಣಗಿರುವ ರೆಂಬೆ ಕೊಂಬೆಗಳನ್ನು ಅರಣ್ಯ ವಿಭಾಗದ ವತಿಯಿಂದ ತೆರವುಗೊಳಿಸುವ ಕಾರ್ಯವನ್ನು ನಿರ್ವಹಿಸಲಾಗುತ್ತಿದೆ.

ಬೆಂಗಳೂರು ನಗರದ ಸಾರ್ವಜನಿಕರು ತಮ್ಮ ಪ್ರದೇಶಗಳಲ್ಲಿ ಒಣಗಿರುವ, ಅಪಾಯ ಸ್ಥಿತಿಯ ಮರಗಳು ಹಾಗೂ ಒಣಗಿರುವ ಅಪಾಯ ಸ್ಥಿತಿಯ ರೆಂಬೆಗಳು ಕಂಡುಬಂದಲ್ಲಿ ಬಿಬಿಎಂಪಿ ಅರಣ್ಯ ಇಲಾಖೆಯ ಅಧಿಕಾರಿಗಳಿಗಳಿಗೆ ದೂರವಾಣಿ ಮೂಲಕ (ವಾಟ್ಸ್ ಅಪ್ ಫೋಟೋ ಲಗತ್ತಿಸಿ) ಮಾಹಿತಿ ನೀಡಲು ಬಿಬಿಎಂಪಿ ಪ್ರಕಟಣೆಯಲ್ಲಿ ಕೋರಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ