ಕನ್ನಡಪ್ರಭ ವಾರ್ತೆ ತುಮಕೂರು
ಸಿದ್ದಗಂಗಾ ಮಠದ ವತಿಯಿಂದ ನಡೆಯುವ ಶ್ರೀಸಿದ್ದಲಿಂಗೇಶ್ವರ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.
ಸುಮಾರು 61 ವರ್ಷಗಳ ಹಿಂದೆ ಡಾ. ಶಿವಕುಮಾರ ಸ್ವಾಮೀಜಿಗಳು ಮಠಕ್ಕೆ ಬರುವ ಭಕ್ತರಿಗೆ ಧಾರ್ಮಿಕ ಉತ್ಸವ, ಆಚರಣೆಗಳ ಜೊತೆಗೆ, ಕೃಷಿ ಮತ್ತು ಕೃಷಿಗೆ ಪೂರಕವಾದ ಅಂಶಗಳ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಈ ವಸ್ತುಪ್ರದರ್ಶನವನ್ನು ಆಯೋಜಿಸಿದ್ದು, ಶ್ರೀಸಿದ್ದಲಿಂಗಸ್ವಾಮೀಜಿಗಳು ಅದನ್ನು ಮುಂದುವರೆಸಿಕೊಂಡು ಬರುತಿದ್ದಾರೆ ಎಂದರು.ಸಿದ್ದಗಂಗಾ ಮಠದ ಭಕ್ತರು, ಇಲ್ಲಿಗೆ ಬರುವ ರೈತರು, ಉದ್ಯಮಿದಾರರಿಗೆ ದೇಶದಲ್ಲಿ ನಡೆಯುವ ಹೊಸ ಅವಿಷ್ಕಾರದ ಬಗ್ಗೆ ತಿಳುವಳಿಕೆ ನೀಡುವ ಉದ್ದೇಶದಿಂದ ಆರಂಭಿಸಿದ ವಸ್ತು ಪ್ರದರ್ಶನವನ್ನು ಜಿಲ್ಲಾಡಳಿತದ ಸಹಕಾರದೊಂದಿಗೆ ಯಾವುದೇ ರೀತಿಯ ಲೋಪದೋಷಗಳು ಬರದಂತೆ ಹಲವಾರು ವರ್ಷಗಳಿಂದ ಸುಸೂತ್ರವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಪ್ರತಿವರ್ಷ ಹೊಸತನವನ್ನು ಈ ವಸ್ತುಪ್ರದರ್ಶನದಲ್ಲಿ ಕಾಣಬಹುದು. ಇದರಿಂದ ಶ್ರೀಶಿವಕುಮಾರ ಸ್ವಾಮೀಜಿಗಳ ಆಶಯ ಈಡೇರಿದಂತಾಗಿದೆ ಎಂದು ಶಾಸಕ ಜಿ.ಬಿ.ಜೋತಿಗಣೇಶ್ ನುಡಿದರು.
ಕೃಷಿ ನಮ್ಮ ದೇಶದ ಬೆನ್ನೆಲುಬು. ಹಾಗಾಗಿ ಕೃಷಿಕರಿಗೆ ಈ ಕ್ಷೇತ್ರದಲ್ಲಿನ ಹೊಸ ಬೆಳವಣಿಗೆಗಳ ಮಾಹಿತಿ ನೀಡುವುದು, ಹೊಸದಾಗಿ ಉದ್ಯಮ ಆರಂಭಿಸುವವರಿಗೆ ಅಗತ್ಯ ಮಾಹಿತಿ ನೀಡುವುದರ ಜೊತೆಗೆ, ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಸರ್ಕಾರದ ಸವಲತ್ತುಗಳನ್ನು ಜನರು ಹೇಗೆ ಪಡೆದುಕೊಳ್ಳಬೇಕು ಎಂಬುದು ಪ್ರತಿ ಇಲಾಖೆ ತಮ್ಮ ಮಳಿಗೆ ತೆರೆದು ಮಾಹಿತಿ ನೀಡುತಿದ್ದಾರೆ. 15 ದಿನಗಳ ಕಾಲ ನಡೆಯುವ ಈ ವಸ್ತುಪ್ರದರ್ಶನದ ಪ್ರಯೋಜನವನ್ನು ರೈತರು ಪಡೆದುಕೊಳ್ಳಬೇಕು ಎಂದು ಸಿದ್ದಲಿಂಗ ಸ್ವಾಮೀಜಿ ಮನವಿ ಮಾಡಿದರು.
ಕಾರ್ಯಕ್ರಮಕ್ಕೂ ಮುನ್ನ ವಿವಿಧ ಇಲಾಖೆಗಳಿಂದ ತೆರೆದಿರುವ ಮಳಿಗೆಗಳನ್ನು ಶಾಸಕರು ವೀಕ್ಷಿಸಿ ಮಾಹಿತಿ ಪಡೆದರು.ಫೋಟೋ: ಸಿದ್ದಗಂಗಾ ಮಠದ ವತಿಯಿಂದ ನಡೆಯುವ ಶ್ರೀಸಿದ್ದಲಿಂಗೇಶ್ವರ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.