ಸಮಾಜದ ಅಭಿವೃದ್ಧಿಗೆ ಮೂಲ ಸೌಕರ್ಯ, ಶಿಕ್ಷಣ ಅವಶ್ಯ: ಸಚಿವ ಡಾ. ಎಚ್.ಕೆ. ಪಾಟೀಲ

KannadaprabhaNewsNetwork |  
Published : Sep 29, 2025, 01:05 AM IST
ಸಿ.ಸಿ ರಸ್ತೆ ಕಾಮಗಾರಿಗೆ ಸಚಿವ ಡಾ. ಎಚ್.ಕೆ.ಪಾಟೀಲ ಭೂಮಿ ಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ಗುಣಮಟ್ಟದಲ್ಲಿ ರಾಜಿ ಮಾಡಿಕೊಂಡರೆ ಅದರಿಂದ ಪ್ರತಿಫಲ ಅಪೇಕ್ಷೆ ಖಂಡಿತ ಸಿಗಲಾರದು. ಆದುದರಿಂದಲೇ ಎಲ್ಲರೂ ಉತ್ತಮ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು.

ಮುಳಗುಂದ: ಒಂದು ಸಮಾಜದ ಅಭಿವೃದ್ಧಿ ಅದರ ಮೂಲ ಸೌಕರ್ಯ ಹಾಗೂ ಶಿಕ್ಷಣದ ಗುಣಮಟ್ಟದಿಂದ ಅಳೆಯಲಾಗುತ್ತದೆ. ಇತ್ತೀಚೆಗೆ ಸರ್ಕಾರ ಕೈಗೊಂಡಿರುವ ಹಲವು ಯೋಜನೆಗಳು ಈ ಎರಡೂ ಕ್ಷೇತ್ರಗಳಲ್ಲಿ ಚೈತನ್ಯ ತುಂಬುವಂತಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ತಿಳಿಸಿದರು.

ಸಮೀಪದ ಕಬಲಾಯತಕಟ್ಟಿ ಗ್ರಾಮದಲ್ಲಿ ಭಾನುವಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿಗಳ ಹಾಗೂ ದುರ್ಗಾದೇವಿ ಸಮುದಾಯ ಭವನದ ಉದ್ಘಾಟನೆ ಹಾಗೂ ಸಿಸಿ ರಸ್ತೆ ಕಾಮಗಾರಿಯ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.ನಾವು ಮಾಡುವ ಅಭಿವೃದ್ಧಿ ಕಾಮಗಾರಿಗಳಾಗಲಿ ಅಥವಾ ನೀಡುವ ಶಿಕ್ಷಣವಾಗಿರಲಿ, ಅದು ಉನ್ನತ ಗುಣಮಟ್ಟದ್ದಾಗಿರಬೇಕು. ಆಗ ಮಾತ್ರ ಅದರಿಂದ ಸಮಾಜಕ್ಕೆ ಉತ್ತಮ ಪ್ರತಿಫಲ ಲಭ್ಯವಾಗಲಿದೆ ಎಂದರು.

ಗುಣಮಟ್ಟದಲ್ಲಿ ರಾಜಿ ಮಾಡಿಕೊಂಡರೆ ಅದರಿಂದ ಪ್ರತಿಫಲ ಅಪೇಕ್ಷೆ ಖಂಡಿತ ಸಿಗಲಾರದು. ಆದುದರಿಂದಲೇ ಎಲ್ಲರೂ ಉತ್ತಮ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು ಎಂದರು.

ರಸ್ತೆ, ಕುಡಿಯುವ ನೀರು, ಆರೋಗ್ಯ ಕೇಂದ್ರ, ವಿದ್ಯುತ್ ಮತ್ತು ವಸತಿಗೃಹಗಳ ಕಾಮಗಾರಿಗಳಿಗೆ ಸರ್ಕಾರ ಹೆಚ್ಚಿನ ಒತ್ತು ನೀಡಿದೆ. ಗ್ರಾಮೀಣ ಪ್ರದೇಶಗಳಲ್ಲಿಯೂ ಜನಸಾಮಾನ್ಯರಿಗೆ ಮೂಲ ಸೌಲಭ್ಯಗಳನ್ನು ತಲುಪಿಸುವ ಉದ್ದೇಶದಿಂದ ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜನಜೀವನ ಸುಲಭವಾಗಲು, ಗ್ರಾಮ- ನಗರ ನಡುವಿನ ಅಂತರ ಕಡಿಮೆಯಾಗಲು ಇದು ಸಹಾಯಕವಾಗಲಿದೆ ಎಂದರು.

ಸಮಾಜದ ಪ್ರಗತಿಗೆ ಒಟ್ಟಾರೆ ಸಮರ್ಪಕ ಕಾಮಗಾರಿ ಮತ್ತು ಗುಣಮಟ್ಟದ ಶಿಕ್ಷಣ, ಇವೆರಡೂ ಸಮಾಜವನ್ನು ಆರ್ಥಿಕ ಹಾಗೂ ಸಾಂಸ್ಕೃತಿಕವಾಗಿ ಮುನ್ನಡೆಸುವ ಬಲವಾದ ಆಧಾರಗಳು. ಮೂಲ ಸೌಕರ್ಯ ಒದಗಿದಾಗ ಜನಜೀವನ ಸುಲಭವಾಗುತ್ತದೆ. ಉತ್ತಮ ಶಿಕ್ಷಣ ದೊರೆತಾಗ ಮುಂದಿನ ಪೀಳಿಗೆಯ ಭವಿಷ್ಯ ಭದ್ರವಾಗುತ್ತದೆ‌ ಎಂದರು.

ಕಬಲಾಯತಕಟ್ಟಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಅಂದಾಜು ₹14 ಲಕ್ಷದಲ್ಲಿ ಶಾಲಾ ಕೊಠಡಿ ನಿರ್ಮಾಣ ಮಾಡಲಾಗಿದೆ. ಇಲ್ಲಿಂದಲೇ ದೇಶದ ಭವಿಷ್ಯ ನಿರ್ಮಾಣ ಮಾಡುವಂಥ ಮಕ್ಕಳು ಹೊರಹೊಮ್ಮಲಿ. ಉತ್ತಮವಾದ ಸೌಲಭ್ಯಗಳನ್ನು ಒದಗಿಸುವುದು ಜನಪ್ರತಿನಿಧಿಗಳಾದ ನಮ್ಮ ಜವಾಬ್ದಾರಿ. ಅವರಿಗೆ ಉತ್ತಮ ಶಿಕ್ಷಣ ಸರಿಯಾಗಿ ನೀಡುವ ಹೊಣೆಗಾರಿಕೆ ಶಿಕ್ಷಕರದ್ದಾಗಿದೆ. ಅದನ್ನು ಶಿಕ್ಷಕರು ಶ್ರದ್ಧೆಯಿಂದ ನಿರ್ವಹಿಸಬೇಕು ಎಂದರು.

ಈ ವೇಳೆ ಕಬಲಾಯತಕಟ್ಟಿಯ ದುರ್ಗಾದೇವಿ ದೇವಸ್ಥಾನದ ಸಮಿತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು. ಈ ವೇಳೆ ಸಿದ್ದು ಪಾಟೀಲ, ಅಶೋಕ‌ ಮಂದಾಲಿ, ಮಲ್ಲಯ್ಯ ಕೆ. ಸೇರಿದಂತೆ ಗ್ರಾಮದ ಹಿರಿಯರು, ಗಣ್ಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ