
ಕನ್ನಡಪ್ರಭ ವಾರ್ತೆ ಕಲಬುರಗಿ
ನಗರದ ಶರಣಬಸವ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಿದ ಭಾರತೀಯ ಶಿಕ್ಷಣ ಮಂಡಲ ಕರ್ನಾಟಕ ಉತ್ತರ ಪ್ರಾಂತದ ಜಿಲ್ಲಾ ಕಾರ್ಯಕಾರಿಣಿ ಪದಗ್ರಹಣ ಸಭೆ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣದಲ್ಲಿ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಅಸ್ಮಿತೆಯಿರಲಿ ಎಂದು ಹೇಳಿದರು. ಪ್ರತಿಯೊಬ್ಬ ಭಾರತೀಯ, ನಡೆ ನುಡಿಯಲ್ಲಿ ತನ್ನ ದೇಶದ ಜೀವನ ವಿಧಾನವನ್ನು ಅಳವಡಿಸಿಕೊಳ್ಳಬೇಕು, ದೇಶದ ಸಾಂಸ್ಕೃತಿಕ ವೈಭವವನ್ನು ಎತ್ತಿ ಹಿಡಿಯಬೇಕು. ದೇಶದ ಅಭಿವೃದ್ಧಿ ದೃಷ್ಟಿಯಿಂದ ಮತ್ತು ಮಕ್ಕಳ ಸರ್ವಾಂಗೀಣ ವಿಕಾಸಕ್ಕಾಗಿ ಪಾಲಕರು, ಶಿಕ್ಷಕರು ಮತ್ತು ಸಂಸ್ಥಾಚಾಲಕರು, ಸಾಮಾಜಿಕ ಸಂಘಟನೆಗಳು ಪರಸ್ಪರ ಪೂರಕವಾಗಿ ಕಾರ್ಯ ನಿರ್ವಹಿಸಬೇಕು ಎಂದರು.ಭಾರತೀಯ ಶಿಕ್ಷಣ ಮಂಡಲದ ಜಿಲ್ಲಾಧ್ಯಕ್ಷ ಬಸವರಾಜ ದೇಶಮುಖ ಮಾತನಾಡಿ, ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಗೆ ನಾವೆಲ್ಲರೂ ಕೈಜೊಡಿಸೋಣ. ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಲ್ಲಿ ಇರುವ ಪರೀಕ್ಷಾ ಭಯ ಹೋಗಲಾಡಿಸಲು ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬುವ ಕಾರ್ಯಕ್ರಮ ಮತ್ತು ಕಾರ್ಯಗಾರಗಳನ್ನು ಆಯೋಜಿಸೋಣ ಎಂದರು.
ಪ್ರಾಸ್ತಾವಿಕವಾಗಿ ಮಾತಾಮಾಡಿದ ಭಾರತೀಯ ಶಿಕ್ಷಣ ಮಂಡಲದ ಪ್ರಾಂತ ಸಹ ಕಾರ್ಯದರ್ಶಿ, ಡಾ. ಪಲ್ಲವಿ ಪಾಟೀಲ ಸೇಡಂ, ರಾಷ್ಟ್ರದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅಮೂಲ್ಯ ವಾದದ್ದು, ಶಿಕ್ಷಕ ವಿಷಯ ಶಿಕ್ಷಕನಾಗದೆ, ಗುರುವಾಗುವಡೆಗೆ ಸಾಗಬೇಕು ಎಂದರು.
ಮಕ್ಕಳಿಗೆ ಮುಕ್ತ ಶೈಕ್ಷಣಿಕ ವಾತವರಣ ಕಲ್ಪಿಸಬೇಕು, ವರ್ತಮಾನದ ಶೈಕ್ಷಣಿಕ ವ್ಯವಸ್ಥೆ ಮಕ್ಕಳಿಗೆ ಅಕ್ಷರ ಜ್ಞಾನ ನೀಡುತ್ತಿದೆ. ಮಕ್ಕಳ ಸರ್ವಾಂಗೀಣ ವಿಕಾಸಕ್ಕಾಗಿ ಒತ್ತು ನೀಡುತ್ತಿಲ್ಲ ಎಂದರು.
ಪ್ರಾಂತ ವಿದ್ಯಾಲಯ ಗತಿವಿಧಿ ಪ್ರಮುಖ ಶರಣು ಉದನೂರ ನಿರೂಪಿಸಿದರು. ಡಾ.ಶರಭಯ್ಯ ಸ್ವಾಮಿ ಪರಿಚಯಸಿ ಸ್ವಾಗತಿಸಿದರು, ಡಾ.ಉದಯ ಪಾಟೀಲ ವಂದಿಸಿದರು.