ಕನ್ನಡಪ್ರಭ ವಾರ್ತೆ ಮಂಡ್ಯ
ನಾವು ಗಣಿ ಮಾಲೀಕರ ಪರವಾಗಿ ಮಾತನಾಡುತ್ತಿಲ್ಲ. ಮೊದಲಿನಿಂದಲೂ ಗಣಿಗಾರಿಕೆಯನ್ನು ವಿರೋಧಿಸಿಕೊಂಡೇ ಬಂದಿದ್ದೇವೆ. ಒಮ್ಮೆ ಟ್ರಯಲ್ ಬ್ಲಾಸ್ಟ್ ವರದಿಯಲ್ಲಿ ಕೆಆರ್ಎಸ್ ಅಣೆಕಟ್ಟೆಗೆ ಅಪಾಯವಿರುವುದು ಕಂಡುಬಂದಲ್ಲಿ ಸಂಪೂರ್ಣವಾಗಿ ಗಣಿಗಾರಿಕೆ ನಿಷೇಧಿಸುವಂತೆ ಸೋಮವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಉಚ್ಛ ನ್ಯಾಯಾಲಯ ಟ್ರಯಲ್ ಬ್ಲಾಸ್ಟ್ ನಡೆಸುವಂತೆ ಸೂಚಿಸಿದೆ. ಆದರೆ, ಕೆಲವರು ರಾಜಕೀಯ ಕಾರಣಗಳಿಗೆ ಟ್ರಯಲ್ ಬ್ಲಾಸ್ಟ್ಗೆ ಅಡ್ಡಿಪಡಿಸುತ್ತಿದ್ದಾರೆ. ಸತ್ಯಾಸತ್ಯತೆ ಹೊರಬರುವ ಮುನ್ನವೇ ಅದರ ಸಾಧಕ-ಬಾಧಕಗಳನ್ನು ಕಲ್ಪನೆ ಮಾಡಿಕೊಂಡು ಯಾವುದನ್ನೂ ತೀರ್ಮಾನಿಸಲಾಗುವುದಿಲ್ಲ. ಅದಕ್ಕಾಗಿ ಟ್ರಯಲ್ ಬ್ಲಾಸ್ಟ್ಗೆ ವರದಿ ಆಧರಿಸಿ ತೀರ್ಮಾನ ಕೈಗೊಳ್ಳುವಂತೆ ಆಗ್ರಹಪಡಿಸಿದ್ದಾರೆ.ಗೋಷ್ಠಿಯಲ್ಲಿ ರಾಮೇಗೌಡ, ಎಚ್.ಎಸ್.ಚಂದ್ರಶೇಖರ್, ಕೆಂಪರಾಜು, ನಾಗರತ್ನ, ಮಾಲಿಕ್ ಆವರ್ತಿ ಇತರರಿದ್ದರು.
ಇದೊಂದು ಭಂಡ ಸರ್ಕಾರ. ಭಂಡತನದಿಂದಲೇ ಆಡಳಿತ ನಡೆಸುವ ರಾಜಕೀಯ ನಾಯಕರಿಗೆ ಕೆಆರ್ಎಸ್ ಉಳಿವಿನ ಬಗ್ಗೆ ಕನಿಷ್ಠ ಕಾಳಜಿ ಇಲ್ಲ. ರಾಷ್ಟ್ರೀಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿ ನಂತರವೂ ಗಣಿಗಾರಿಕೆಗೆ ಅವಕಾಶ ಮಾಡಿಕೊಡಲು ಉತ್ಸಾಹ ತೋರುತ್ತಿರುವ ಜನಪ್ರತಿನಿಧಿಗಳು ರೈತ ವಿರೋಧಿಗಳಾಗಿದ್ದಾರೆ. ೯೨ ವರ್ಷ ಹಳೆಯದಾದ ಅಣೆಕಟ್ಟೆಯ ಸಾಮರ್ಥ್ಯ ಪರೀಕ್ಷೆಗೆ ಹೊರಟಿರುವ ಇವರ ಧನದಾಹಿತ್ವಕ್ಕೆ ರೈತ ಸಮುದಾಯ ಮತ್ತು ಅಣೆಕಟ್ಟೆ ಬಲಿಯಾಗುವುದು ನಿಶ್ಚಿತ. ಟ್ರಯಲ್ ಬ್ಲಾಸ್ಟ್ನ್ನು ಈ ನೆಲದ ಪ್ರತಿಯೊಬ್ಬರೂ ವಿರೋಧಿಸಬೇಕು.
- ಲಿಂಗಪ್ಪಾಜಿ, ರೈತ ಮುಖಂಡರುಕೆಆರ್ ಎಸ್ ನೀರಿನ ಮಟ್ಟ
ಗರಿಷ್ಠ ಮಟ್ಟ - 124.80 ಅಡಿಇಂದಿನ ಮಟ್ಟ – 95.50 ಅಡಿ
ಒಳ ಹರಿವು – 9369 ಕ್ಯುಸೆಕ್
ಹೊರ ಹರಿವು – 518 ಕ್ಯುಸೆಕ್
ನೀರಿನ ಸಂಗ್ರಹ – 19.487 ಟಿಎಂಸಿ