ಬಜೆಟ್‌ನಲ್ಲಿ ಜೈನ ಸಮಾಜಕ್ಕೆ ಅನ್ಯಾಯ: ಗುಣಧರನಂದಿ ಮಹಾರಾಜ

KannadaprabhaNewsNetwork |  
Published : Mar 10, 2025, 12:20 AM IST
ಬಜೆಟ್‌ನಲ್ಲಿ ಜೈನ ಸಮಾಜಕ್ಕೆ ಅನ್ಯಾಯ: ಗುಣಧರನಂದಿ ಮಹಾರಾಜ | Kannada Prabha

ಸಾರಾಂಶ

₹4 ಲಕ್ಷ ಕೋಟಿಗಳಿಗೆ ಬಜೆಟ್ ಗಾತ್ರ ಏರಿಕೆ ಮಾಡಿದರೂ ನಮ್ಮ ಸಮಾಜಕ್ಕೆ ನೀಡುವ ಅನುದಾನ ಕಡಿಮೆ ಆಗುತ್ತ ಬರುತ್ತಿದೆ ಆಚಾರ್ಯ ಗುಣಧರನಂದಿ ಮಹಾರಾಜರು ಆರೋಪಿಸಿದ್ದಾರೆ.

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಜೈನ ಸಮುದಾಯದ ಯಾವುದೇ ಬೇಡಿಕೆಗಳನ್ನು ಈಡೇರಿಸದೇ ನಿರ್ಲಕ್ಷಿಸಿದ್ದಾರೆ. ಶೀಘ್ರವೇ ಸರ್ಕಾರದ ವಿರುದ್ಧ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ವರೂರು ನವಗ್ರಹ ತೀರ್ಥಕ್ಷೇತ್ರದ ಆಚಾರ್ಯ ಬಜೆಟ್‌ನಲ್ಲಿ ಜೈನ ಸಮಾಜಕ್ಕೆ ಅನ್ಯಾಯ: ಗುಣಧರನಂದಿ ಮಹಾರಾಜ ಹೇಳಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿ, ₹4 ಲಕ್ಷ ಕೋಟಿಗಳಿಗೆ ಬಜೆಟ್ ಗಾತ್ರ ಏರಿಕೆ ಮಾಡಿದರೂ ನಮ್ಮ ಸಮಾಜಕ್ಕೆ ನೀಡುವ ಅನುದಾನ ಕಡಿಮೆ ಆಗುತ್ತ ಬರುತ್ತಿದೆ. ಇದೀಗ ಬಜೆಟ್‌ನಲ್ಲಿ ಅಲ್ಪಸಂಖ್ಯಾತರ ಸಮುದಾಯಗಳಿಗೆ ಕೇವಲ ₹100 ಕೋಟಿ ನೀಡಲಾಗಿದೆ. ಇದರಲ್ಲಿ ಜೈನರು, ಕ್ರೈಸ್ತರು, ಸಿಖ್ಖರು ಹಾಗೂ ಬೌದ್ಧರು ಹಂಚಿಕೊಂಡರೇ ₹33 ಕೋಟಿ ಬರುತ್ತದೆ. ಸರ್ಕಾರ ನಡೆಸಲು ಹಣದ ಕೊರತೆಯಾದರೆ, ನಮಗೆ ಬರುವ ಪಾಲನ್ನು ವಾಪಸ್‌ ಕೊಡಲು ಜೈನ ಸಮಾಜ ಸಿದ್ಧವಿದೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ನಿಗಮ ಸ್ಥಾಪನೆಯೂ ಇಲ್ಲ

ಈ ಹಿಂದೆಯೇ ಜೈನ ಅಭಿವೃದ್ದಿ ನಿಗಮ ಸ್ಥಾಪನೆ ಅತ್ಯಗತ್ಯತೆ ಕುರಿತು ಸರ್ಕಾರಕ್ಕೆ ಮನವರಿಕೆ ಮಾಡಲಾಗಿತ್ತು. ಇದಕ್ಕೆ ಗೃಹಸಚಿವರಾದಿಯಾಗಿ ಎಲ್ಲರೂ ನಿಗಮ ಸ್ಥಾಪನೆ ಮಾಡುವ ಭರವಸೆ ನೀಡಿದ್ದರು. ಆದರೂ ಬಜೆಟ್‌ನಲ್ಲಿ ಈ ಬಗ್ಗೆ ಪ್ರಸ್ತಾಪಿಸದೇ ಸಮಾಜಕ್ಕೆ ಅನ್ಯಾಯ ಮಾಡಲಾಗಿದೆ ಎಂದರು..

ಸರ್ಕಾರದ ಈ ನೀತಿಯನ್ನು ಸಮಾಜವು ತೀವ್ರವಾಗಿ ಖಂಡಿಸುತ್ತದೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಈ ವರೆಗೆ ಜೈನ ಸಮುದಾಯ ಶಾಂತಿಯುತ ಹೋರಾಟ ಮಾಡುತ್ತ ಬಂದಿದೆ. ಆದರೆ, ಸರ್ಕಾರದ ನಿರ್ಲಕ್ಷ್ಯದ ಬಗ್ಗೆ ಸಮುದಾಯದ ಜನರಲ್ಲಿ ಬೇಸರ ಮೂಡಿಸಿದೆ. ಶೀಘ್ರವೇ ಜೈನ ಸಮುದಾಯದ ಮುಖಂಡರ ಸಭೆ ನಡೆಸಿ ಮುಂದಿನ ದಿನಗಳಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಸಲು ರೂಪರೇಷೆಗಳನ್ನು ಸಿದ್ಧಪಡಿಸಲಾಗುವುದು ಎಂದು ಗುಣಧರನಂದಿ ಶ್ರೀಗಳು ಎಚ್ಚರಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''