ದೊಡ್ಡಬಳ್ಳಾಪುರ: ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಬಯಲು ಸೀಮೆ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ನೀರುಣಿಸುವ ಉದ್ದೇಶದ ನೀರಾವರಿ ಯೋಜನೆಗಳ ಅನುಷ್ಠಾನದ ಕುರಿತು ಸರ್ಕಾರದ ಗಮನ ಸೆಳೆಯುವಂತೆ ಶಾಶ್ವತ ನೀರಾವರಿ ಹೋರಾಟ ಸಮಿತಿಯಿಂದ ಶಾಸಕ ಧೀರಜ್ ಮುನಿರಾಜು ಅವರಿಗೆ ಮನವಿ ಸಲ್ಲಿಸಲಾಯಿತು.
ಇನ್ನಾದರೂ ಈ ತಾರತಮ್ಯವನ್ನು ಸರಿಪಡಿಸಲು ಪಕ್ಷಾತೀತವಾಗಿ ಎಲ್ಲರೂ ಪ್ರಾಮಾಣಿಕ ಪ್ರಯತ್ನ ನಡೆಸಬೇಕು. ಈ ದಿಸೆಯಲ್ಲಿ ಬಯಲು ಸೀಮೆ ಜಿಲ್ಲೆಗಳ ಎಲ್ಲಾ ಚುನಾಯಿತ ಜನಪ್ರತಿನಿಧಿಗಳು ಈ ಭಾಗದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ನೀರಾವರಿ ಯೋಜನೆಗಳ ತುರ್ತು ಅನುಷ್ಟಾನಕ್ಕಾಗಿ ಒಮ್ಮತದಿಂದ ಪ್ರಯತ್ನಿಸಬೇಕು ಎಂದು ಮನವಿ ಮಾಡಿದರು.
ಮುಖಂಡರಾದ ಕೆ.ಸುಲೋಚನಮ್ಮ, ಸಂಜೀವ್ನಾಯ್ಕ, ಡಿ.ಪಿ.ಅಂಜನೇಯ, ಪರಮೇಶ್, ಮುತ್ತೇಗೌಡ, ತಿಮ್ಮಣ್ಣ,ವಸಂತ್, ರೋಹಿತ್, ಮುನಿಪಾಪಯ್ಯ ಮತ್ತಿತರರು ಮನವಿ ಸಲ್ಲಿಕೆಯ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಬಾಕ್ಸ್...........ಪ್ರಾಮಾಣಿಕ ಪ್ರಯತ್ನ: ಶಾಸಕರ ಭರವಸೆ
1ಕೆಡಿಬಿಪಿ2- ಎತ್ತಿನಹೊಳೆ ಯೋಜನೆ ಅನುಷ್ಠಾನ ಕುರಿತಂತೆ ಸದನದಲ್ಲಿ ಗಮನ ಸೆಳೆಯಲು ಒತ್ತಾಯಿಸಿ ಶಾಸಕ ಧೀರಜ್ ಮುನಿರಾಜ್ ಅವರಿಗೆ ಮನವಿ ಸಲ್ಲಿಸಲಾಯಿತು.