ಕನ್ನಡಪ್ರಭ ವಾರ್ತೆ ಯಾದಗಿರಿ
ಜಿಲ್ಲೆಯ ಉಳಿದ ತಾಲೂಕುಗಳಲ್ಲಿಯೂ ಮಳೆ ಅಭಾವದಿಂದ ಬೆಳೆಗಳು ಹಾನಿಗೊಳಗಾಗಿವೆ. ಬಿತ್ತನೆ ಮಾಡಿದ ಬೆಳೆಗಳು ಒಣಗಿದ್ದು, ಸಾಲ ಮಾಡಿ ಕೃಷಿ ಮಾಡಿದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೂ ಸರ್ಕಾರದ ಬರ ಪಟ್ಟಿಯಲ್ಲಿ ಜಿಲ್ಲೆಗೆ ಸೂಕ್ತ ನ್ಯಾಯ ದೊರೆತಿಲ್ಲ ಎಂದು ದೂರಿದ್ದಾರೆ.
ಜಿಲ್ಲೆಯ ಎಲ್ಲ ತಾಲೂಕುಗಳ ವಾಸ್ತವ ಪರಿಸ್ಥಿತಿಯನ್ನು ಸರ್ಕಾರದ ಗಮನಕ್ಕೆ ತಂದು ಬರ ಪಟ್ಟಿಗೆ ಸೇರಿಸುವಂತೆ ಒತ್ತಡ ಏರಬೇಕಿದ್ದ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ವಿಫಲರಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.ಮಳೆ ಆಧಾರಿತ ಕೃಷಿಯನ್ನೇ ಅವಲಂಬಿಸಿರುವ ಜಿಲ್ಲೆಯ ರೈತರಿಗೆ ಮಳೆ ಕೊರತೆ ದೊಡ್ಡ ಹೊಡೆತ ನೀಡಿದೆ. ಇಂತಹ ಸಂದರ್ಭದಲ್ಲಿ ಬರ ಘೋಷಣೆಯಲ್ಲಿ ತಾರತಮ್ಯ ಮಾಡಿರುವುದು ರೈತರ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಹೇಳಿದ್ದಾರೆ.
ರೈತರ ಸಂಕಷ್ಟದ ಬಗ್ಗೆ ಸರ್ಕಾರದ ಗಮನ ಸೆಳೆಯುವುದು ಜನಪ್ರತಿನಿಧಿಗಳ ಜವಾಬ್ದಾರಿ. ಆದರೆ ಈ ವಿಚಾರದಲ್ಲಿ ಮೌನ ವಹಿಸಿರುವುದು ಸರಿಯಲ್ಲ. ಮಳೆ ಕೊರತೆಯಿಂದ ತೊಂದರೆಗೊಳಗಾದ ರೈತರಿಗೆ ತಕ್ಷಣ ಪರಿಹಾರ ನೀಡಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಉದ್ಯೋಗದ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.