ಶಾಸಕರಿಗೂ ಭದ್ರತೆ ಇಲ್ಲದ ಪರಿಸ್ಥಿತಿ: ಶಾಸಕ ಡಾ.ಭರತ್‌ ಶೆಟ್ಟಿ

KannadaprabhaNewsNetwork |  
Published : May 26, 2025, 12:09 AM IST
ಮಂಗಳೂರು ಉತ್ತರ ಶಾಸಕ ಡಾ.ಭರತ್‌ ಶೆಟ್ಟಿ  | Kannada Prabha

ಸಾರಾಂಶ

ದೇಶದಲ್ಲಿ ಪ್ರಧಾನಿಗೂ ಅವರದ್ದೇ ಆದ ಗೌರವಾದರಗಳಿವೆ, ಅವರನ್ನು ಟೀಕೆ ಮಾಡುವ ಭರದಲ್ಲಿ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಇದೀಗ ತಮಗೆ ಟೀಕೆ ಬಂದಾಗ ಆಕ್ರೋಶಗೊಳ್ಳುತ್ತಾರೆ. ಕಾರ್ಯಕರ್ತರ ಮೂಲಕ ವಿಪಕ್ಷ ನಾಯಕರಿಗೇ ಹಲ್ಲೆ ನಡೆಸಲು ಕಾಂಗ್ರೆಸ್‌ ಮುಂದಾಗುತ್ತದೆ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಪ್ರಧಾನಿ ನರೇಂದ್ರ ಮೋದಿ ಅವರನ್ನು ಪನೌತಿ ಎಂದು ಕರೆದು ಅವಮಾನ ಮಾಡಿದ ಕಾಂಗ್ರೆಸ್ ನಾಯಕರನ್ನು ಉಲ್ಲೇಖಿಸಿ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರು ಆನೆ ನಾಯಿಯ ಗಾದೆ ಮಾತು ಹೇಳಿದರೆ ಆಕ್ರೋಶ ಯಾಕೆ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಪ್ರಶ್ನಿಸಿದ್ದಾರೆ.ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಗಾದೆ ಮಾತು ಮೂಲಕ ಛಲವಾದಿ ನಾರಾಯಣ ಸ್ವಾಮಿ ಟೀಕಿಸಿದ್ದಕ್ಕೆ ಛಲವಾದಿ ನಾರಾಯಣಸ್ವಾಮಿ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿರುವುದನ್ನು ಖಂಡನೀಯ. ಕಾಂಗ್ರೆಸ್ ನಾಯಕರು ಮಾಜಿ ಸಿಎಂ ಯಡಿಯೂರಪ್ಪ, ಈಗಿನ ಅಧ್ಯಕ್ಷ ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರಿಗೆ ಅಸಭ್ಯ ರೀತಿಯಲ್ಲಿ ಟೀಕಿಸಿ ಸಂತೋಷ ಪಡುತ್ತಾರೆ ಎಂದರು.

ದೇಶದಲ್ಲಿ ಪ್ರಧಾನಿಗೂ ಅವರದ್ದೇ ಆದ ಗೌರವಾದರಗಳಿವೆ, ಅವರನ್ನು ಟೀಕೆ ಮಾಡುವ ಭರದಲ್ಲಿ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಇದೀಗ ತಮಗೆ ಟೀಕೆ ಬಂದಾಗ ಆಕ್ರೋಶಗೊಳ್ಳುತ್ತಾರೆ. ಕಾರ್ಯಕರ್ತರ ಮೂಲಕ ವಿಪಕ್ಷ ನಾಯಕರಿಗೇ ಹಲ್ಲೆ ನಡೆಸಲು ಕಾಂಗ್ರೆಸ್‌ ಮುಂದಾಗುತ್ತದೆ. ಇಂತಹ ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ. ಪೊಲೀಸ್ ಇಲಾಖೆಯೂ ಇಂತಹ ಘಟನೆ ನಡೆಯದಂತೆ ತಡೆಯುವ ಬದಲು ಐಬಿ ಒಳಗೆ ನುಗ್ಗಿದರೂ ಏನೂ ಮಾಡದೆ ನೋಡುತ್ತಾ ಮೂಕ ಪ್ರೇಕ್ಷಕರಾಗಿದ್ದಾರೆ. ಬಿಜೆಪಿ ಕಾರ್ಯಕರ್ತರು ಕೇಸು ದಾಖಲಿಸಲು ಹೋದರೆ ಗಂಟೆಗಟ್ಟಲೆ ಕಾಯುವಂತೆ ಮಾಡುವ ಅಧಿಕಾರಿಗಳು ಕಾಂಗ್ರೆಸ್ ಸರ್ಕಾರ, ಕಾಂಗ್ರೆಸ್ ಕಾರ್ಯಕರ್ತರ ದೂರಗಳು ಎಫ್‌ಐಆರ್‌ ಆಗಿ ಬದಲಾಗುತ್ತದೆ. ಹೀಗಾಗಿ ಸಾಮಾನ್ಯ ಜನರು ಇರಲಿ, ವಿಪಕ್ಷ ನಾಯಕರು, ಶಾಸಕರೂ ಇರಲಿ ಯಾರಿಗೂ ಭದ್ರತೆ ಇಲ್ಲದಂತಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಡಾ.ಭರತ್‌ ಶೆಟ್ಟಿ ಟೀಕಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಟಿ ಆತ್ಮ*ತ್ಯೆಗೆ ಸರ್ಕಾರಿ ನೌಕರಿಗೆ ಸೇರುವಂತೆ ಕುಟುಂಬ ಒತ್ತಡ ಕಾರಣ?
ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ