ಕನ್ನಡಪ್ರಭ ವಾರ್ತೆ ಕೊಪ್ಪಳ
ಬಹದ್ದೂರಬಂಡಿ ಗ್ರಾಪಂ ವತಿಯಿಂದ ನರೇಗಾ ಯೋಜನೆಯಡಿ ಹೂವಿನಾಳ ರಸ್ತೆಯ ಬದಿ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕೂಲಿ ಕೆಲಸ, ಕಾರ್ಯನಿರ್ವಹಣೆ ಕುರಿತು ಪರಿಶೀಲನೆ ಮಾಡಿದರು. ಸ್ಥಳದಲ್ಲಿದ್ದ ಕೂಲಿಕಾರರ ಜೊತೆಗೆ ಚರ್ಚಿಸಿದರು.
ಬಳಿಕ ಮಾತನಾಡಿದ ಅವರು, ಜಾಬ್ಕಾರ್ಡ್ಗಳಲ್ಲಿ ಕೂಲಿ ಕೆಲಸ ನಿರ್ವಹಿಸಿದ ಬಗ್ಗೆ ಸಂಪೂರ್ಣ ಮಾಹಿತಿ ಅಪಡೇಟ್ ಮಾಡತಕ್ಕದ್ದು. ಇದರಿಂದ ಕೂಲಿಕಾರರಿಗೆ ವರ್ಷದಲ್ಲಿ ಎಷ್ಟು ದಿನಗಳ ಕೂಲಿ ಕೆಲಸ ನಿರ್ವಹಿಸಿದ್ದೇವೆ ಹಾಗೂ ಎಷ್ಟು ಕೂಲಿ ಹಣ ಪಾವತಿಯಾಗಿದೆ ಎಂಬುದರ ಸಂಪೂರ್ಣ ಮಾಹಿತಿ ತಿಳಿಯುತ್ತದೆ. ಮೆಟ್ ಗಳು ನಿಮ್ಮ ಕೂಲಿಕಾರರಿಗೆ ಅಳತೆ ಕುರಿತು ಸರಿಯಾಗಿ ಮಾಹಿತಿ ನೀಡಿರಿ. ಇದರಿಂದ ಅವರಿಗೂ ಕೂಡಾ ಅಳತೆಯ ಬಗ್ಗೆ ತಿಳಿಯುತ್ತದೆ ಎಂದರು.ನಾಲಾ ಹೂಳೆತ್ತುವ ಕಾಮಗಾರಿಯ ಕಡತದ ಅಂದಾಜು ಪತ್ರಿಕೆಯಲ್ಲಿ ಅಳವಡಿಸಿಕೊಂಡಿರುವ ಮಾಹಿತಿಯನ್ನು ಪರಿಶೀಲಿಸಿದರು. ಬೇಸಿಗೆ ಇರುವುದರಿಂದ ನಿರಂತರವಾಗಿ ಕೂಲಿಕಾರರಿಗೆ ಕೂಲಿ ಕೆಲಸ ಲಭ್ಯವಿದೆ. ಆ ಕಾರಣಕ್ಕಾಗಿ ಗ್ರಾಮ ಪಂಚಾಯತಿಯಿಂದ ಕ್ರಮವಹಿಸಲು ಸೂಚಿಸಿದರು.
2023-24 ಮತ್ತು 2024-25ನೇ ಸಾಲಿನಲ್ಲಿ ಕೋಳೂರು ಗ್ರಾಪಂಯಿಂದ ಕಾಟರಳ್ಳಿ ಗ್ರಾಮದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಲಾದ ಶೌಚಾಲಯ, ಅಡುಗೆ ಕೋಣೆ ಇತ್ಯಾದಿ ಶಾಲಾಭಿವೃದ್ಧಿ ಕಾಮಗಾರಿಗಳನ್ನು, ಸ್ಥಳದಲ್ಲಿ ಕಾಮಗಾರಿಗೆ ಬಳಕೆ ಮಾಡಿಕೊಂಡಿರುವ ಬಗ್ಗೆ ದಾಖಲಾತಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ, ಆಯುಕ್ತಾಲಯದ ಜಂಟಿ ನಿರ್ದೇಶ (ತೋಟಗಾರಿಕೆ) ಶ್ರೀಶೈಲ ದಿಡ್ಡಿಮನಿ, ಜಿಪಂ ಉಪ ಕಾರ್ಯದರ್ಶಿ ಮಲ್ಲಪ್ಪ ತೊದಲಬಾಗಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಕ ಕೃಷ್ಣ ಉಕ್ಕುಂದ, ರಾಜ್ಯ ಯೋಜನಾ ಅಭಿಯಂತರ ಯಶವಂತ, ತಾಪಂ ಇಒ ದುಂಡಪ್ಪ ತುರಾದಿ, ನರೇಗಾ ಸಹಾಯಕ ನಿರ್ದೇಶಕ ಯಂಕಪ್ಪ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಶಂಕ್ರಪ್ಪ, ಸಾಮಾಜಿಕ ವಲಯ ಅರಣ್ಯಾಧಿಕಾರಿ ಗುರನಗೌಡ, ಜಿಪಂ ಎಡಿಪಿಸಿ ಮಹಾಂತಸ್ವಾಮಿ, ಜಿಲ್ಲಾ ಐಇಸಿ ಸಂಯೋಜಕ ಶ್ರೀನಿವಾಸ ಚಿತ್ರಗಾರ, ಎಂಐಎಸ್ ಸಂಯೋಜಕ ಮೈನುದ್ದೀನ್, ತಾಲೂಕ ನರೇಗಾ ಸಿಬ್ಬಂದಿ, ಪಿಡಿಒಗಳು, ತಾಂತ್ರಿಕ ಸಹಾಯಕರು, ಬೇರ್ ಪೂಟ್ ಟೆಕ್ನಿಷಿಯನ್ಗಳು, ಗ್ರಾಮ ಕಾಯಕ ಮಿತ್ರರು ಹಾಗೂ ಗ್ರಾಪಂ ಸಿಬ್ಬಂದಿ ಇದ್ದರು.