ಲೋಕಾಯುಕ್ತ ಅಧಿಕಾರಿಗಳ ತಂಡದಿಂದ ನರೇಗಾ ಕಾಮಗಾರಿಗಳ ಪರೀಶೀಲನೆ

KannadaprabhaNewsNetwork |  
Published : Dec 08, 2025, 02:00 AM IST
ಕೆ ಕೆ ಪಿ ಸುದ್ದಿ 02:ಕೆ ಕೆ ಪಿ ಸುದ್ದಿ 02:ಖಾಸಗಿ ವ್ಯಕ್ತಿ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಕೋಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನರೇಗಾ ಕಾಮಗಾರಿಗಳ ಪರೀಶೀಲನೆ ನಡೆಸಿದರು | Kannada Prabha

ಸಾರಾಂಶ

ಕನಕಪುರ: ನರೇಗಾ ಕಾಮಗಾರಿ ಅನುಷ್ಠಾನದಲ್ಲಿ ಅಕ್ರಮ ನಡೆದಿದೆಯೆಂಬ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ಕೋಡಿಹಳ್ಳಿ ಗ್ರಾಪಂಗೆ ಭೇಟಿ ನೀಡಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಕನಕಪುರ: ನರೇಗಾ ಕಾಮಗಾರಿ ಅನುಷ್ಠಾನದಲ್ಲಿ ಅಕ್ರಮ ನಡೆದಿದೆಯೆಂಬ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ಕೋಡಿಹಳ್ಳಿ ಗ್ರಾಪಂಗೆ ಭೇಟಿ ನೀಡಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ತಾಲೂಕಿನ ಕೋಡಿಹಳ್ಳಿ ಗ್ರಾಪಂ 2019ರಿಂದ 2021ರವರೆಗೆ ಅನುಷ್ಠಾನ ಮಾಡಿರುವ ಕೆರೆ ಅಭಿವೃದ್ಧಿ, ಕೆರೆ ಪಿಚ್ಚಿಂಗ್, ನಾಲಾ ಅಭಿವೃದ್ಧಿ, ಜಲ್ಲಿ ಮೆಟ್ಲಿಂಗ್ ರಸ್ತೆ ಸೇರಿದಂತೆ ಹಲವು ನರೇಗಾ ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ ಎಂದು ಲೋಕಾಯುಕ್ತ ಅಧಿಕಾರಿಗಳಿಗೆ ಅನಾಮದೇಯ ದೂರುಗಳು ಬಂದಿದ್ದವು. ಆ ಹಿನ್ನೆಲೆಯಲ್ಲಿ ರಾಮನಗರ ಲೋಕಾಯುಕ್ತ ಇನ್‌ಸ್ಪೆಕ್ಟರ್ ಸಂದೀಪ್ ಕುಮಾರ್ ನೇತೃತ್ವದಲ್ಲಿ ರಘು ಮತ್ತು ಶಿವಕುಮಾರ್ ಸಿಬ್ಬಂದಿ,ಕನಕಪುರ ತಾಪಂ ಇಒ ಅವಿನಾಶ್ ಜೊತೆ ಭೇಟಿ ನೀಡಿದರು.

ತಾಪಂ ಸಹಾಯಕ ನಿರ್ದೇಶಕ ಮೋಹನ್‌ಬಾಬು, ಕೋಡಿಹಳ್ಳಿ ಗ್ರಾಪಂ ಪಿಡಿಒ ಶ್ರೀಧರ್ ಹಾಗೂ ಸಂಬಂಧಪಟ್ಟ ನರೇಗಾ ಇಂಜಿನಿಯರ್‌ಗಳ ಸಮ್ಮುಖದಲ್ಲಿ 2019ರಿಂದ 2021ರವರೆಗಿನ ನರೇಗಾ ಕಾಮಗಾರಿಗಳನ್ನು ಪರಿಶೀಲಿಸಿದರು. ಕೋಡಿಹಳ್ಳಿ ಗ್ರಾಪಂ ವ್ಯಾಪ್ತಿಯ ಅರಳಿಮರದ ದೊಡ್ಡಿ, ಕೋಡಿಪುರ ಸೇರಿದಂತೆ ಗ್ರಾಮಗಳಲ್ಲಿ ನರೇಗಾ ಯೋಜನೆಯಡಿ ಕೆರೆ ಅಭಿವೃದ್ಧಿ, ಕೆರೆ ಪಿಚ್ಚಿಂಗ್, ಹೂಳೆತ್ತುವುದು, ನಾಲಾ ಅಭಿವೃದ್ಧಿ, ಜಲ್ಲಿ ಮೆಟ್ಲಿಂಗ್ ರಸ್ತೆ ಸೇರಿದಂತೆ ಕಾಮಗಾರಿಗಳಲ್ಲಿ ಕೆಲವು ಲೋಪಗಳು ಕಂಡು ಬಂದಿರುವುದು ಪರಿಶೀಲನೆಯಲ್ಲಿ ಬೆಳಕಿಗೆ ಬಂದಿದೆ.

ಗ್ರಾಪಂನಲ್ಲಿ ಕೆಲವು ದಾಖಲೆಗಳನ್ನು ಪರಿಶೀಲಿಸಿ, ಜಿಪಿಎಸ್ ಫೋಟೋ, ಎನ್ಎಂಆರ್ ಜನರೇಟ್ ಇತ್ಯಾದಿಗಳಲ್ಲಿ ಲೋಪಗಳಿವೆ. ಪ್ರಕರಣದ ಸಂಬಂಧ ಪಂಚಾಯತಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ.

ಕೆ ಕೆ ಪಿ ಸುದ್ದಿ 02:

ಕನಕಪುರ ತಾಲೂಕಿನ ಕೋಡಿಹಳ್ಳಿ ಗ್ರಾಪಂ ವ್ಯಾಪ್ತಿಯ ನರೇಗಾ ಕಾಮಗಾರಿಗಳಲ್ಲಿ ಅಕ್ರಮ ದೂರಿನ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಪರೀಶೀಲನೆ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಪಾಲಿನ ಶ್ರೀರಾಮ : ಶಾಸಕ ಪ್ರದೀಪ್‌ ಈಶ್ವರ್‌
ಜಿ ರಾಮ್‌ ಜಿ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌ ಪಡೆ - ದುಡಿವ ಕೈಗಳ ಅನ್ನ ಕಸಿವ ಕಾಯ್ದೆ