ಭೇಟಿಯ ವೇಳೆ ಬೆಳುವಾಯಿ ಚೆಕ್ ಪೋಸ್ಟ್ ಹಾಗೂ ಮಾರೂರು ಚೆಕ್ ಪೋಸ್ಟ್ ಗೆ ತೆರಳಿ ವಾಹನಗಳ ತಪಾಸಣೆ ನಡೆಸಿದರು.
ಕನ್ನಡಪ್ರಭ ವಾರ್ತೆ ಮೂಡುಬಿದಿರೆ ಮೂಡುಬಿದಿರೆ ತಾಲೂಕಿನಲ್ಲಿ ಮಾದರಿ ಮತಗಟ್ಟೆಗೆ ಆಯ್ಕೆಯಾದ ಗ್ರಾಮ ಪಂಚಾಯಿತಿ ಸೇರಿದಂತೆ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಯ ಮತಗಟ್ಟೆಗಳಿಗೆ ನೂತನ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಎಸ್. ವೆಂಕಟಚಲಪತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಖೀ ಎಂಬ ವಿಷಯಕ್ಕೆ ಆಯ್ಕೆಯಾದ ಮಾದರಿ ಮತಗಟ್ಟೆಗಳಿಗೆ ಅಲಂಕಾರ ಮಾಡಿ, ಸ್ವಸಹಾಯ ಗುಂಪಿನ ಮಹಿಳೆಯರಿಂದ ರಂಗೋಲಿಗಳನ್ನು ಬಿಡಿಸಿ, ಮತಗಟ್ಟೆ ಅಕರ್ಷಕಗೊಳಿಸುವಂತೆ ಹಾಗೂ ಮತಗಟ್ಟೆಗೆ ಸಂಬಂಧಿಸಿದ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿರುವ ಮೂಲಭೂತ ಸೌಕರ್ಯಗಳಾದ ನೀರು, ಶೌಚಾಲಯ, ವಿದ್ಯುತ್ ಸರಬರಾಜು ಹಾಗೂ ರ್ಯಾಂಪ್ ಗಳು ಸೇರಿದಂತೆ ಚುನಾವಣಾ ದಿನದ ಮುಂಚಿತವಾಗಿ ಎಲ್ಲಾ ಮತಗಟ್ಟೆಗಳಲ್ಲಿ ವ್ಯವಸ್ಥೆಯನ್ನು ಸರಿಪಡಿಸುವಂತೆ ಸಂಬಂಧಪಟ್ಟ ಶಾಲಾ ಶಿಕ್ಷಕರಿಗೆ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದರು. ಹೊಸಬೆಟ್ಟು ಹಾಗೂ ದರೆಗುಡ್ಡೆ ಗ್ರಾಮ ಪಂಚಾಯತ್ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆಯ ಸಂದರ್ಭದಲ್ಲಿ ಮತದಾನದ ಮಹತ್ವ ತಿಳಿಸಿ ಮತದಾನದ ಕುರಿತಾದ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಐಇಸಿ ಸಂಯೋಜಕರಾದ ಅನ್ವಯ, ಸಂಬಂಧಪಟ್ಟ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಒಕ್ಕೂಟದ ಪದಾಧಿಕಾರಿಗಳು ಹಾಗೂ ಪಂಚಾಯತ್ ಸಿಬ್ಬಂದುಗಳು ಇದ್ದರು. ಭೇಟಿಯ ವೇಳೆ ಬೆಳುವಾಯಿ ಚೆಕ್ ಪೋಸ್ಟ್ ಹಾಗೂ ಮಾರೂರು ಚೆಕ್ ಪೋಸ್ಟ್ ಗೆ ತೆರಳಿ ವಾಹನಗಳ ತಪಾಸಣೆ ನಡೆಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.