ಕನ್ನಡಪ್ರಭ ವಾರ್ತೆ ಚನ್ನಪಟ್ಟಣ
ನಗರದ ೨, ೩ ಹಾಗೂ 10ನೇ ವಾರ್ಡ್ಗಳಲ್ಲಿನ ಸಮಸ್ಯೆಗಳನ್ನು ಪರಿಶೀಲಿಸಿದ ಶಾಸಕರು ಸುದ್ದಿಗಾರರೊಂದಿಗೆ ಮಾತನಾಡಿ, ನಗರಸಭೆ ವ್ಯಾಪ್ತಿಯಲ್ಲಿ ಪ್ರತಿ ನಿತ್ಯ ಒಂದಲ್ಲ ಒಂದು ಸಮಸ್ಯೆ ಕಾಣಿಸುತ್ತಿವೆ. ಜೊತೆಗೆ ಚರಂಡಿಗಳಲ್ಲಿ ತಾಜ್ಯ ವಸ್ತುಗಳು ಕಟ್ಟಿಕೊಂಡು ಗಲೀಜು ನೀರು ಹೆಚ್ಚುತ್ತಿದೆ. ಹಾಗಾಗಿ ವಾರ್ಡ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೇನೆ. ನಗರಸಭೆ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸ್ವಚ್ಛತೆ ಮತ್ತು ಅಭಿವೃದ್ಧಿಯ ಬಗ್ಗೆ ಸೂಚನೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಯುಜಿಡಿ ಯೋಜನೆಗೆ ಈಗಾಗಲೇ ೪೦ ಕೋಟಿ ರು. ಅನುದಾನ ಬಿಡುಗಡೆಯಾಗಿದೆ. ಯುಜಿಡಿಗೆ ಮಿಕ್ಕಂತೆ ನಗರದ ಅಭಿವೃದ್ಧಿಗೆ ಪೂರಕವಾಗಿ ವೇಗವಾಗಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದೇ ವೇಳೆ ಸ್ಮಶಾನದ ಕೊರತೆ, ಅಲ್ಲಿಗೆ ಬೇಕಾಗಿರುವ ಮೂಲ ಸೌಕರ್ಯಗಳು ಸೇರಿದಂತೆ ಹಲವು ವಿಚಾರಗಳ ಕುರಿತು ಮಂಗಳವಾರಪೇಟೆಯಲ್ಲಿ ಮುಖಂಡರ ಜೊತೆ ಚರ್ಚಿಸಿದ ಯೋಗೇಶ್ವರ್ ಅವರು ಇದರ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಸರ್ವೇ ಮೂಲಕ ಇದರ ಸಮಸ್ಯೆಯನ್ನು ಬಗೆಹರಿಸಲು ಸೂಚಿಸುವುದಾಗಿ ತಿಳಿಸಿದರು.ಸಾತನೂರು ರಸ್ತೆಯನ್ನು ಅಗಲೀಕರಣಗೊಳಿಸಲು ಈಗಾಗಲೇ ಯೋಜನೆ ರೂಪಿಸಲಾಗಿದೆ ಹಾಗೂ ಡಾಂಬರೀಕರಣಕ್ಕೆ ೧೧ ಕೋಟಿ ರು. ಹಣ ಬಿಡುಗಡೆಯಾಗಿದೆ. ಅತೀ ಶೀಘ್ರವಾಗಿ ಅದಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.