- ಪಾಲಿಕೆ ವ್ಯಾಪ್ತಿಯಲ್ಲಿ 3 ಕಡೆ ಸೈರನ್ ವ್ಯವಸ್ಥೆ ಇರಬೇಕು । ಕನಿಷ್ಠ 50 ಕಿಮೀ ಅಂತರದಲ್ಲಿರಲಿ: ಗಂಗಾಧರ ಸ್ವಾಮಿ- - -
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತುರ್ತು ಪರಿಸ್ಥಿತಿ, ಪ್ರಕೃತಿ ವಿಪತ್ತುಗಳಿಂದಾಗುವ ಸಂದರ್ಭ ನಿಭಾಯಿಸಲು ಮತ್ತು ತುರ್ತಾಗಿ ಜನರಿಗೆ ಈ ಬಗ್ಗೆ ಮಾಹಿತಿ ತಲುಪಿಸಲು ಹಾಗೂ ಜಾಗೃತರಾಗಿಸಲು ಎಲ್ಲ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ, ಪಾಲಿಕೆ ವ್ಯಾಪ್ತಿಯಲ್ಲಿ 3 ಕಡೆ ಸೈರನ್ ಅಳವಡಿಸಬೇಕು. ಈ ಸೈರನ್ಗಳು ಕನಿಷ್ಠ 50 ಕಿಮೀ ಅಂತರದಲ್ಲಿ ಇರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ತಂಡಗಳನ್ನು ರಚಿಸಿ:ಅಂತಹ ಪರಿಸ್ಥಿತಿಯಲ್ಲಿ ಜನರು ಗಾಬರಿ ಆಗದಂತೆ, ರಕ್ಷಣೆ ಪಡೆಯಲು ಸಲಹೆ, ಮುಂಜಾಗ್ರತಾ ಕ್ರಮಗಳ ಬಗ್ಗೆ ಸೂಚಿಸಬೇಕು. ವಿಕೋಪದಲ್ಲಿ ಸಿಲುಕಿದಾಗ ರಕ್ಷಣಾತ್ಮಕ ಕ್ರಮಗಳ ಜೊತೆಗೆ ಜೀವಹಾನಿ ತಡೆಗೆ ಸನ್ನದ್ಧವಾಗಿರಬೇಕು. ಇದಕ್ಕಾಗಿ ಆಸ್ಪತ್ರೆಗಳಲ್ಲಿ ತುರ್ತು ನಿಗಾ ಘಟಕ, ವೈದ್ಯರ ತಂಡ, ರಕ್ಷಣಾತ್ಮಕ ಕ್ರಮಗಳ ಬಗ್ಗೆ ಕ್ಷಿಪ್ರ ಕಾರ್ಯಾಚರಣೆ ಕೈಗೊಳ್ಳಲು 24/7 ಸಿದ್ಧವಾಗಿರುವಂತೆ ತಂಡಗಳನ್ನು ರಚಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಯೋಜನೆ ತಯಾರಿಸಿ ಎಂದು ಹೇಳಿದರು.
ಜೂನ್ನಿಂದ ಮುಂಗಾರು ಆರಂಭವಾಗಲಿದೆ. ಶಾಲಾ-ಕಾಲೇಜುಗಳೂ ಆರಂಭವಾಗಲಿವೆ. ಶಿಥಿಲ ಶಾಲಾ ಕೊಠಡಿಗಳ ದುರಸ್ತಿಗೆ ತಕ್ಷಣವೇ ಕ್ರಮ ಕೈಗೊಳ್ಳಬೇಕು. ತುಂಬಾ ಶಿಥಿಲವಾದ ಕೊಠಡಿಗಳನ್ನು ಗುರುತಿಸಿ, ರಿಪೇರಿಗೆ ಕ್ರಿಯಾಯೋಜನೆ ತಯಾರಿಸಿ, ಸಾಶಿಇ ಉಪನಿರ್ದೇಶಕರು ನೀಡಬೇಕು. ಜಿಲ್ಲೆಯ ಎಲ್ಲ ಶಾಲೆಗಳ ಸ್ಥಿತಿಗತಿ ಹಾಗೂ ಸುಸ್ಥಿತಿ ಬಗ್ಗೆ ಆಡಿಟ್ ವರದಿ ಪರಿಶೀಲಿಸಿ, ನೀಡಲು ಪಂಚಾಯತ್ರಾಜ್ ಎಂಜಿನಿಯರಿಂಗ್ ವಿಭಾಗದವರಿಗೆ ಆದೇಶಿಸಿದರು.
ದಾವಣಗೆರೆ ಜಿಲ್ಲೆಯ ಕೆರೆಗಳು ಮತ್ತು ಚೆಕ್ ಡ್ಯಾಂಗಳ ಸುಸ್ಥಿತಿ ಬಗ್ಗೆ, ರಸ್ತೆ, ಕಾಲುವೆಗಳ ಕಿರುಸೇತುವೆಗಳ ಪರಿಶೀಲನೆ ನಡೆಸಿ ಆಯಾ ಇಲಾಖೆಗಳು ವರದಿ ನೀಡಬೇಕು. ಸೇತುವೆ, ಕೆರೆಯ ಏರಿ ಸುಭದ್ರತೆ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಪಂ ಸಿಇಇ ಸುರೇಶ ಬಿ. ಇಟ್ನಾಳ್, ಜಿಲ್ಲಾ ಎಸ್ಪಿ ಉಮಾ ಪ್ರಶಾಂತ, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ, ಉಪವಿಭಾಗಾಧಿಕಾರಿ ಸಂತೋಷ ಪಾಟೀಲ್, ಅಭಿಷೇಕ್, ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿದ್ದರು.
(ಬಾಕ್ಸ್) * ದಾಮಿನಿ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ
- - -
ದಾವಣಗೆರೆ ಡಿಸಿ ಕಚೇರಿ ಸಭಾಂಗಣದಲ್ಲಿ ಡಿಸಿ ಗಂಗಾಧರ ಸ್ವಾಮಿ ಅಧ್ಯಕ್ಷತೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ನಡೆಯಿತು. ಜಿಪಂ ಸಿಇಒ ಸುರೇಶ ಬಿ. ಇಟ್ನಾಳ್, ಎಸ್ಪಿ ಉಮಾ ಪ್ರಶಾಂತ ಇದ್ದರು.