ಅಕ್ಟೋಬರ್‌-ನವೆಂಬರ್‌ನಲ್ಲಿ ತುಂಗಭದ್ರಾ ಜಲಾಶಯದ 19ನೇ ಗೇಟ್‌ಗೆ ಕ್ರಸ್ಟ್‌ಗೇಟ್‌ ಅಳವಡಿಕೆ

KannadaprabhaNewsNetwork |  
Published : Jun 21, 2025, 12:49 AM ISTUpdated : Jun 21, 2025, 12:26 PM IST
20ಎಚ್‌ಪಿಟಿ4- ಹೊಸಪೇಟೆಯ ತುಂಗಭದ್ರಾ ಜಲಾಶಯದ ಒಳ ಹರಿವು ಶುಕ್ರವಾರ 51,261 ಕ್ಯುಸೆಕ್‌ ತಲುಪಿದೆ. ಈಗ ಜಲಾಶಯದ 19ನೇ ಗೇಟ್‌ಗೆ ಕ್ರಸ್ಟ್‌ ಗೇಟ್‌ ಅಳವಡಿಕೆ ಮಾಡುವುದನ್ನು ಮುಂದೂಡಲಾಗುತ್ತಿದೆ. | Kannada Prabha

ಸಾರಾಂಶ

ತುಂಗಭದ್ರಾ ಜಲಾಶಯದಲ್ಲಿ ಒಳಹರಿವು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿರುವುದರಿಂದ ಕ್ರಸ್ಟ್‌ಗೇಟ್‌ ಅಳವಡಿಸುವ ಕಾರ್ಯ ಮುಂದೂಡಲಾಗಿದೆ. ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಗೇಟ್‌ ಅಳವಡಿಸಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ.

ಹೊಸಪೇಟೆ: ತುಂಗಭದ್ರಾ ಜಲಾಶಯದ ಒಳ ಹರಿವು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಈಗ ಜಲಾಶಯದಲ್ಲಿ 38.608 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದ 19ನೇ ಗೇಟ್‌ಗೆ ಸ್ಟಾಪ್‌ಲಾಗ್‌ ಅಳವಡಿಕೆ ಮಾಡಿರುವುದನ್ನು ತೆರವುಗೊಳಿಸಿ ಹೊಸ ಕ್ರಸ್ಟ್‌ಗೇಟ್‌ ನಿರ್ಮಾಣ ಮಾಡುವುದಕ್ಕೂ ಈಗ ಒಳಹರಿವು ಅಡ್ಡಿಯಾಗಿದೆ. ಗದಗದಿಂದ ಕ್ರಸ್ಟ್‌ಗೇಟ್‌ ತರಲಾಗುತ್ತಿದ್ದು, ಅದನ್ನು ಅಳವಡಿಸುವ ಕಾರ್ಯಕ್ಕೆ ಈಗ ಒಳಹರಿವು ಅಡ್ಡಿಯಾಗಿದೆ. ಹಾಗಾಗಿ ಅಕ್ಟೋಬರ್‌ ಇಲ್ಲವೇ ನವೆಂಬರ್‌ನಲ್ಲಿ ಕ್ರಸ್ಟ್‌ಗೇಟ್‌ ನಿರ್ಮಾಣ ಮಾಡಲು ತುಂಗಭದ್ರಾ ಮಂಡಳಿ ನಿರ್ಧರಿಸಿದೆ.

ಗುಜರಾತ ಮೂಲದ ಹಾರ್ಡ್‌ವೇರ್ ಟೂಲ್ಸ್‌ ಆ್ಯಂಡ್‌ ಮಷಿನರಿ ಪ್ರಾಜೆಕ್ಟ್‌ ಕಂಪನಿ 19ನೇ ಗೇಟ್‌ನ ಕ್ರಸ್ಟ್‌ಗೇಟ್‌ ನಿರ್ಮಾಣ ಮಾಡಿದೆ. ಈಗಾಗಲೇ ಗೇಟ್‌ ತುಂಗಭದ್ರಾ ಜಲಾಶಯಕ್ಕೆ ತರಲಾಗುತ್ತಿದೆ. ಜೂ. 20ರ ತಡರಾತ್ರಿ ಈ ಗೇಟ್‌ ಜಲಾಶಯದ ಆವರಣಕ್ಕೆ ಬಂದು ತಲುಪಿದೆ. ಜಲಾಶಯದ ಒಳಹರಿವು ಶುಕ್ರವಾರ 51,261 ಕ್ಯುಸೆಕ್‌ ತಲುಪಿದೆ. ತುಂಗಭದ್ರಾ ಮಂಡಳಿ ಅಧಿಕಾರಿಗಳು ಪರಿಣತ ತಜ್ಞ ಕನ್ನಯ್ಯ ನಾಯ್ಡು ಅಭಿಪ್ರಾಯ ತೆಗೆದುಕೊಂಡಾಗ ಭಾರೀ ಪ್ರಮಾಣದಲ್ಲಿ ಒಳಹರಿವು ಇರುವ ಹಿನ್ನೆಲೆಯಲ್ಲಿ ಈಗಲೇ ಗೇಟ್‌ ಅಳವಡಿಸುವುದು ಬೇಡ, ಸ್ಟಾಪ್‌ ಲಾಗ್‌ ಗಟ್ಟಿಯಾಗಿದೆ. ಹಾಗಾಗಿ ಒಳ ಹರಿವು ತಗ್ಗಿದ ಬಳಿಕವಷ್ಟೇ ಗೇಟ್‌ ನಿರ್ಮಾಣ ಕಾರ್ಯ ನಡೆಯಲಿ ಎಂದು ಸಲಹೆ ನೀಡಿದ್ದಾರೆ. ಈಗ ತುಂಗಭದ್ರಾ ಮಂಡಳಿ ಅಧಿಕಾರಿಗಳು ಕೂಡ ಚರ್ಚಿಸಿ ಒಳಹರಿವು ತಗ್ಗಿದ ಬಳಿಕ, ಅಕ್ಟೋಬರ್‌ ಇಲ್ಲವೇ ನವೆಂಬರ್‌ನಲ್ಲಿ 19ನೇ ಗೇಟ್‌ಗೆ ಕ್ರಸ್ಟ್‌ಗೇಟ್‌ ಅಳವಡಿಸಲು ನಿರ್ಧರಿಸಿದ್ದಾರೆ.

ಹಾರ್ಡ್‌ವೇರ್ ಟೂಲ್ಸ್‌ ಆ್ಯಂಡ್‌ ಮಷಿನರಿ ಪ್ರಾಜೆಕ್ಟ್‌ ಕಂಪನಿಗೆ ಉಳಿದ 32 ಕ್ರಸ್ಟ್‌ಗೇಟ್‌ ಬದಲಿಸಿ, ಹೊಸ ಗೇಟ್‌ ನಿರ್ಮಾಣದ ಗುತ್ತಿಗೆಯನ್ನೂ ನೀಡಲಾಗಿದೆ. ಈಗ 19ನೇ ಕ್ರಸ್ಟ್‌ಗೇಟ್‌ ಸಿದ್ಧಗೊಂಡರೂ ಅಳವಡಿಸಲು ಒಳಹರಿವು ಅಡ್ಡಿಯಾಗಿದೆ ಎಂದು ತುಂಗಭದ್ರಾ ಮಂಡಳಿ ಅಧಿಕಾರಿಗಳು ''''ಕನ್ನಡಪ್ರಭ''''ಕ್ಕೆ ತಿಳಿಸಿದ್ದಾರೆ.

ತುಂಗಭದ್ರಾ ಜಲಾಶಯದ 19ನೇ ಗೇಟ್ 2024ರ ಆಗಸ್ಟ್‌ 10ರ ರಾತ್ರಿ ಕಳಚಿ ಬಿದ್ದಿತ್ತು. ಇದರಿಂದ 40 ಟಿಎಂಸಿಯಷ್ಟು ನೀರು ನದಿ ಪಾಲಾಗಿತ್ತು. ಆಗ ಪರಿಣತ ತಜ್ಞ ಕನ್ನಯ್ಯ ನಾಯ್ಡು ನೇತೃತ್ವದಲ್ಲಿ ಸ್ಟಾಪ್‌ಲಾಗ್‌ ಅಳವಡಿಕೆ ಮಾಡಲಾಗಿತ್ತು. ಈಗ ಕ್ರಸ್ಟ್‌ಗೇಟ್‌ ನಿರ್ಮಾಣಗೊಂಡರೂ ಒಳಹರಿವಿನಲ್ಲಿ ಭಾರೀ ಏರಿಕೆ ಆಗಿರುವ ಹಿನ್ನೆಲೆಯಲ್ಲಿ ಗೇಟ್‌ ಅಳವಡಿಕೆ ಕಾರ್ಯವನ್ನು ಮುಂದೂಡಲಾಗುತ್ತಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಬೆಂಗ್ಳೂರು 5 ಪಾಲಿಕೆಗೆ ಎಲೆಕ್ಷನ್‌ ನಡೆಸುವುದಕ್ಕೆ ಜೂ.30 ಡೆಡ್ಲೈನ್‌
ಹೈಕೋರ್ಟ್‌ ಹೊಸ ಕಟ್ಟಡಕ್ಕೆ 30 ಎಕ್ರೆ ಕೋರಿಕೆ : ರಾಜ್ಯ ಸರ್ಕಾರಕ್ಕೆ ನೋಟಿಸ್‌