ಹೊಳೆನರಸೀಪುರ ಪಟ್ಟಣದ ತಾಲೂಕು ಕಚೇರಿ ರಸ್ತೆಯಲ್ಲಿ ಇರುವ ಗಣಪತಿ ಪೆಂಡಾಲ್ ಆವರಣದಲ್ಲಿ ಶ್ರೀ ಮಹಾಗಣಪತಿ ಮಹೋತ್ಸವ ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ ೬೮ನೇ ವರ್ಷದ ಶ್ರೀ ವರಸಿದ್ಧಿ ವಿನಾಯಕ ಪ್ರತಿಷ್ಠಾಪನಾ ಪೂಜಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಗಣಪತಿ ಪೆಂಡಾಲಿನಲ್ಲಿ ಬುಧವಾರ ಮುಂಜಾನೆ ಬ್ರಾಹ್ಮಿ ಮಹೂರ್ತದಲ್ಲಿ ಶ್ರೀ ವರಸಿದ್ಧಿ ವಿನಾಯಕ ಪ್ರತಿಷ್ಠಾಪನಾ ಪೂಜಾ ಮಹೋತ್ಸವ ಅಂಗವಾಗಿ ಆಲಯ ಪ್ರವೇಶ, ತೋರಣ ಮಹೂರ್ತ, ಸ್ವಸ್ತಿ ಪುಣ್ಯಾಹ ವಾಚನೆ, ಆಲಯ ಶುದ್ಧಿ, ಪೀಠ ಪೂಜೆ ನಡೆಯಿತು.
ಹೊಳೆನರಸೀಪುರ: ಪಟ್ಟಣದ ತಾಲೂಕು ಕಚೇರಿ ರಸ್ತೆಯಲ್ಲಿ ಇರುವ ಗಣಪತಿ ಪೆಂಡಾಲ್ ಆವರಣದಲ್ಲಿ ಶ್ರೀ ಮಹಾಗಣಪತಿ ಮಹೋತ್ಸವ ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ ೬೮ನೇ ವರ್ಷದ ಶ್ರೀ ವರಸಿದ್ಧಿ ವಿನಾಯಕ ಪ್ರತಿಷ್ಠಾಪನಾ ಪೂಜಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.
ಪಟ್ಟಣದ ಗಣಪತಿ ಪೆಂಡಾಲಿನಲ್ಲಿ ಬುಧವಾರ ಮುಂಜಾನೆ ಬ್ರಾಹ್ಮಿ ಮಹೂರ್ತದಲ್ಲಿ ಶ್ರೀ ವರಸಿದ್ಧಿ ವಿನಾಯಕ ಪ್ರತಿಷ್ಠಾಪನಾ ಪೂಜಾ ಮಹೋತ್ಸವ ಅಂಗವಾಗಿ ಆಲಯ ಪ್ರವೇಶ, ತೋರಣ ಮಹೂರ್ತ, ಸ್ವಸ್ತಿ ಪುಣ್ಯಾಹ ವಾಚನೆ, ಆಲಯ ಶುದ್ಧಿ, ಪೀಠ ಪೂಜೆ, ಶ್ರೀಯವರ ಬಿಂಬ ಸ್ಥಾಪನೆ, ಬಿಂಬ ಶುದ್ಧಿ, ಪ್ರಾಣ ಪ್ರತಿಷ್ಠೆ, ಪಂಚಾಮೃತ ಅಭಿಷೇಕ, ಅಲಂಕಾರ, ಕಲೋತ್ಪ ಪೂಜೆ ನಡೆಸಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.